ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ : ದ.ಕ ಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗಳ ವಿರುದ್ಧ ಬೊಮ್ಮಾಯಿ ಗರಂ..!
ಮಂಗಳೂರು: ಕೋವಿಡ್-19 ನಿಯಂತ್ರಣ ಸಂಬಂಧ ಮಂಗಳೂರಿನಲ್ಲಿ ಸಭೆಯಲ್ಲಿ ಭಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನ ತರಾಟೆಗೆ ತೆಗೆದುಕೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ ಇಲ್ಲಿ. ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ. ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ ಎಂದು ಗರಂ ಆಗಿದ್ದಾರೆ.
ಇದೇ ವೇಳೆ ಎಸ್ ಡಿಆರ್ ಎಫ್ ಫಂಡ್ ಅದು, ಇದು ಪಡೆದು ಇವತ್ತೇ ಖರೀದಿ ಮಾಡಿ. ಬೆಂಗಳೂರು ಬಿಟ್ಟು ಎಲ್ಲವನ್ನೂ ಇಲ್ಲೇ ಖರೀದಿಸಿ. ಸಂಜೆ ನನಗೆ ರಿಪೋರ್ಟ್ ಮಾಡಿ ಎಂದು ತಾಕೀತು ಮಾಡಿದ್ದಾರೆ.. ಜೊತೆಗೆ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಅವರಿಗೂ ಕ್ಲಾಸ್ ತೆಗೆದುಕೊಂಡ ಬೊಮ್ಮಾಯಿ ಅವರು ಏನಯ್ಯ, ನೀನ್ ಏನ್ ಮಾಡ್ತಾ ಇದೀಯ ಇಲ್ಲಿ ಅಂತ ಹೇಳು. ನಿನ್ನತ್ರ ಏನು ಸಮಸ್ಯೆ ಇದೆ ಅಂತ ಡಿಸಿ ಗಮನಕ್ಕೆ ತರೋಕೆ ಗೊತ್ತಿಲ್ವಾ. ಮೋಸ್ಟ್ ಸೀನಿಯರ್ ಹೆಲ್ತ್ ಆಫೀಸರ್ ಆಗಿದ್ರೂ ನೀನ್ ಏನ್ ನಿದ್ದೆ ಮಾಡ್ತಾ ಇದೀಯಾ. ಮಾಸ್ಕ್, ಗ್ಲೌಸ್ ಎಷ್ಟು ಕೊರತೆ ಇದೆ ಅನ್ನೋದು ಲೆಕ್ಕ ಇಡೋಕೆ ಆಗಲ್ವಾ ನಿಂಗೆ, ನಿಮ್ಮ ಯಾವುದೇ ಸಮರ್ಥನೆ ನಂಗೆ ಬೇಡ, ಸಂಜೆಯೊಳಗೆ ನಂಗೆ ರಿಪೋರ್ಟ್ ಕೊಡಿ ಎಂದು ಆಕ್ರೋಶ ಗೊಂಡಿದ್ದಾರೆ.
ಕರ್ನಾಟಕದ 6 ಮಂದಿ ಸೇರಿ ದೇಶದ 152 ಪೋಲಿಸ್ ಅಧಿಕಾರಿಗಳಿಗೆ ತನಿಖಾ ಶೇಷ್ಠತೆ ಪದಕ