ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜೀನಾಮೆಗೆ ಸಿದ್ಧ.. `ಹೈ’ ಟೆನ್ಷನ್ ಕೊಟ್ಟ ಸಿಎಂ : ಬಿಎಸ್ ವೈಗೆ ಪರ್ಯಾಯ ನಾಯಕ ಯಾರು..?

Mahesh M Dhandu by Mahesh M Dhandu
June 7, 2021
in Newsbeat, Politics, ರಾಜಕೀಯ
State Budget
Share on FacebookShare on TwitterShare on WhatsappShare on Telegram

ರಾಜೀನಾಮೆಗೆ ಸಿದ್ಧ.. `ಹೈ’ ಟೆನ್ಷನ್ ಕೊಟ್ಟ ಸಿಎಂ : ಬಿಎಸ್ ವೈಗೆ ಪರ್ಯಾಯ ನಾಯಕ ಯಾರು..?

ಬೆಂಗಳೂರು : ಸಿಎಂ ಪಟ್ಟದಿಂದ ಕೆಳಗಿಳೀತಾರಾ ರಾಜಾಹುಲಿ ಬಿ.ಎಸ್.ಯಡಿಯೂರಪ್ಪ..? ಒಂದು ವೇಳೆ ಬಿಎಸ್ ವೈ ತಮ್ಮ ಸ್ಥಾನಕ್ಕೆ ರಾಜೀನಾಮೇ ನೀಡಿದರೇ ಮುಂದಿನ ಸಿಎಂ ಯಾರು..? ಯಡಿಯೂರಪ್ಪನವರಿಗೆ ಸರಿಸಾಟಿಯಾಗಿರುವ ನಾಯಕರು ರಾಜ್ಯ ಕೇಸರಿ ಪಡೆಯಲ್ಲಿದ್ದಾರಾ..? ಸದ್ಯ ರಾಜ್ಯದಲ್ಲಿ ಉಸಿರಾಡುತ್ತಿರುವ ಪ್ರಶ್ನೆಗಳಿವು. ಇದಕ್ಕೆ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ನಾನು ರಾಜೀನಾಮೆಗೆ ಸಿದ್ಧ ಎಂಬ ಹೇಳಿಕೆ..!!

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಸಿಎಂ ಬದಲಾವಣೆ ಮಾತುಗಳು ಕೇಳಿಬರುತ್ತಲೇ ಇವೆ. ಕೊರೊನಾ ಇಲ್ಲದಿದ್ದರೇ ಈಗಾಗಲೇ ಸಿಎಂ ಬದಲಾವಣೆ ಆಗುತ್ತಿತ್ತು ಎಂದು ಕೂಡ ಹೇಳಲಾಗುತ್ತಿದೆ. ಈ ಗುಸು ಗುಸು ಕೆಲ ದಿನಗಳಿಂದ ತುಸು ಜೋರಾಗಿಯೇ ಸದ್ದು ಮಾಡುತ್ತಿವೆ. ಅದಕ್ಕೆ ಪುಷ್ಠಿ ನೀಡುವಂತ ಬೆಳವಣಿಗೆಗಳು ಕೂಡ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿವೆ ಅನ್ನೋದು ಚಿದಂಬರ ರಹಸ್ಯವೇಲ್ಲ. ಆದರೂ ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಿದ್ದ ಸಿಎಂ ಬದಲಾವಣೆ ವಿಚಾರ ಇದೀಗ ಸಾಕಷ್ಟು ಚರ್ಚೆ ಮತ್ತು ಕುತೂಹಲಗಳಿಗೆ ಕಾರಣವಾಗಿದೆ.

bs yediyurappa

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹೈಕಮಾಂಡ್ ಸೂಚಿಸಿದ್ರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ ಅಲ್ಲಿಯವರೆಗೂ ನಾನು ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ. ಆದರೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇದೆ.

ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ, ಅದನ್ನು ಶಕ್ತಮೀರಿ ಸದುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಉಳಿದಿದ್ದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಆದ್ದರಿಂದ ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಹೇಳುವ ಮೂಲಕ ಸಿಎಂ ಕುರ್ಚಿಯಿಂದ ಕೆಳಗಿಳಿಯಲು ನನಗೆ ಯಾವುದೇ ಅಭ್ಯಂತ್ರವಿಲ್ಲ ಎಂಬ ಸ್ಪಷ್ಟ ಸಂದೇಶವನ್ನ ಸಿಎಂ ಬಿಎಸ್ ವೈ ಸಾರಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರ ಈ ಹೇಳಿಕೆಯನ್ನ ರಾಜಕೀಯ ಪಂಡಿತರು ನಾನಾ ರೀತಿ ವಿಶ್ಲೇಷಣೆ ಮಾಡುತ್ತಿದ್ದಾರೆ.

ಈ ನಡುವೆ ನನ್ನ ಮುಟ್ಟಿ ನೋಡಿ..! ಎಂದು ಒಂದೇ ಕಲ್ಲಿನಲ್ಲಿ ಬಿಎಸ್ ವೈ ಎರಡು ಹಕ್ಕಿಯನ್ನ ಹೊಡೆದ್ದಾರೆ ಎಂದು ಹೇಳಲಾಗುತ್ತಿದೆ. ಅಂದ್ರೆ ಪದೆ ಪದೇ ಸಿಎಂ ಬದಲಾವಣೆ ವಿಚಾರ ತರುವುದರಿಂದ ಬಿಎಸ್ ವೈ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕುತಂತ್ರ ನಡೆಯುತ್ತಿದೆ ಎನ್ನಲಾಗಿದೆ. ಇದಕ್ಕೆ ಇದೀಗ ಬಿಎಸ್ ವೈ ಚೆಕ್ ಮೇಟ್ ಇಟ್ಟಿದ್ದು, ನಾನು ರಾಜೀನಾಮೇ ನೀಡಲು ಸಿದ್ಧ, ಆದ್ರೆ ಅದನ್ನ ಹೈಕಮಾಂಡ್ ಹೇಳಲಿ ಎನ್ನುವ ಮೂಲಕ ತಮ್ಮ ವಿರೋಧಿಗಳಿಗೆ ಟಕ್ಕರ್ ನೀಡಿದ್ದಾರೆ. ಜೊತೆಗೆ ಹೈಕಮಾಂಡ್ ಗೂ ಕೂಡ ನಾನು ಸಿಎಂ ಕುರ್ಚಿಗೆ ಅಂಟಿಕೊಂಡಿಲ್ಲ, ನೀವು ರಾಜೀನಾಮೆ ನೀಡಿ ಎಂದು ಹೇಳಿ ನೋಡೋಣ ಅನ್ನೋ ರೀತಿಯಲ್ಲಿ ಹೇಳಿಕೆ ನೀಡಿದಂತಿದೆ.

ಯಾಕೆಂದ್ರೆ ಬಿ.ಎಸ್.ಯಡಿಯೂರಪ್ಪ ರಾಜ್ಯ ಬಿಜೆಪಿಯ ಅನಭಿಶಕ್ತ ದೊರೆ ಅನ್ನೋದ್ರಲ್ಲಿ ಯಾವುದೇ ಸಂಶಯವಿಲ್ಲ. ಯಾರು ಏನೇ ಹೇಳಿದರೂ ಎಷ್ಟೇ ತಪ್ಪರ್ಲಾಗ ಹಾಕಿದ್ರೂ ಯಡಿಯೂರಪ್ಪನವರನ್ನ ಮೀರಿ ರಾಜ್ಯ ಬಿಜೆಪಿಯಲ್ಲಿ ಏನು ನಡೆಯೋದಿಲ್ಲ. ಅದರಲ್ಲೂ ಕೊರೊನಾ ಸಂದರ್ಭದಲ್ಲಿ ಸಿಎಂ ಬದಲಾವಣೆ ಕೂಡ ಕಷ್ಟ ಸಾಧ್ಯ. ಹೀಗಿದ್ದಾಗ ಬಿಜೆಪಿ ಬಿಗ್ ಬಾಸ್ ಗಳಾದರೂ ಹೇಗೆ ಯಡಿಯೂರಪ್ಪನವರ ರಾಜೀನಾಮೆ ಕೇಳ್ತಾರೆ ಅಲ್ವಾ..?

bs yediyurappa

ಒಂದು ವೇಳೆ ಯಡಿಯೂರಪ್ಪ ಒತ್ತಡಕ್ಕೆ ಮಣಿದೋ..? ಅಥವಾ ಪಕ್ಷಕ್ಕಾಗಿಯೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೇ ಮುಂದಿನ ಸಿಎಂ ಯಾರು..? ಅನ್ನೋ ಪ್ರಶ್ನೆಗೆ ಎದ್ದುಯುಬ್ಬಿಸಿ ಇವರೇ ಮುಂದಿನ ಸಿಎಂ ಅಂತ ಹೇಳುವ ನಾಯಕರೂ ಬಿಜೆಪಿಯಲ್ಲಿಲ್ಲ. ಯಾಕಂದ್ರೆ ಸದ್ಯ ಬಿಜೆಪಿಯಲ್ಲಿರುವ ಅನೇಕರು ಯಡಿಯೂರಪ್ಪ ಎಂಬ ಆಲದಮರದ ನೆರಳಿನಲ್ಲಿ ಬೆಳೆದವರೇ. ಇವರಿಗೆ ಯಡಿಯೂರಪ್ಪ ಮಾತು ವೇದ ವಾಕ್ಯವಾಗಿರುತ್ತೆ. ಆದರೂ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರಾಗಬಹುದು ಎಂಬ ಪ್ರಶ್ನೆ.. ತಕ್ಷಣಕ್ಕೆ ಎಲ್ಲರಲ್ಲೂ ಕೇಳಿಬರುತ್ತಿರುವ ಹೆಸರು ಮುರುಗೇಶ್ ನಿರಾಣಿ, ಪ್ರಹ್ಲಾದ್ ಜೋಶಿ, ಉದಾಸಿ, ಬಸವರಾಜ್ ಬೊಮ್ಮಾಯಿ. ವಕ್ಕಲಿಗ ಸಮುದಾಯದ ಆರ್.ಅಶೋಕ್, ಅಶ್ವತ್ ನಾರಾಯಣ್. ಆರ್ ಎಸ್ ಎಸ್ ನೆರಳಿನಿಂದ ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್, ಸಿ. ಟಿ ರವಿ ಹೆಸರು ಕೂಡ ಕೇಳಿಬರುತ್ತಿದೆ.

ಮುಖ್ಯವಾಗಿ ಮುರುಗೇಶ್ ನಿರಾಣಿ ಅವರನ್ನ ಸಿಎಂ ಮಾಡಬೇಕು ಅನ್ನೋ ಚರ್ಚೆ ಬಿಜೆಪಿಯಲ್ಲಿ ನಡೆಯುತ್ತಿದೆಯಂತೆ. ಅದರಲ್ಲೂ ನಿರಾಣಿ ಉತ್ತರ ಕರ್ನಾಟಕದವಾಗಿದ್ದು, ಅವರಿಗೆ ಸಿಎಂ ಸ್ಥಾನ ನೀಡಿದ್ರೆ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತೆ. ಜೊತೆಗೆ ಲಿಂಗಾಯತ ಮತಗಳನ್ನು ರಕ್ಷಿಸಿಕೊಳ್ಳಬಹುದು ಅನ್ನೋ ಸಣ್ಣ ಲೆಕ್ಕಾಚಾರವೂ ಇದರಲ್ಲಿದೆ ಎಂದು ಹೇಳಲಾಗುತ್ತಿದೆ.

ಯಡಿಯೂರಪ್ಪ ಮೂಲೆಗುಂಪಾದರೇ ಪಕ್ಷದ ಕಥೆ ಏನು..?

ಇದು ಸಾಮಾನ್ಯವಾಗಿ ರಾಜ್ಯ ರಾಜಕಾರಣವನ್ನ ಗಮನಿಸಿರುವ ಹಾಗೂ ಗಮನಿಸುತ್ತಿರುವ ಸಾಕಷ್ಟು ಮಂದಿಯ ಪ್ರಶ್ನೆ ಆಗಿರಬಹುದು. ಯಾಕೆಂದ್ರೆ ರಾಜ್ಯದ ಮಟ್ಟಿಗೆ ಬಿ.ಎಸ್.ಯಡಿಯೂರಪ್ಪ ಅಂದ್ರೆ ಬಿಜೆಪಿ. ಬಿಜೆಪಿ ಅಂದ್ರೆ ಯಡಿಯೂರಪ್ಪ. ರಾಜ್ಯ ಕೇಸರಿ ಪಡೆ ಪಾಲಿಗೆ ಬಿಎಸ್ ವೈ ಮಾಸ್ ಲೀಡರ್. ಏಕಾಂಗಿಯಾಗಿ ಹೋರಾಡುವ ಛಲದಂಕಮಲ್ಲ, ಎದುರಾಳಿಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಚಾಣಾಕ್ಷ್ಯತನ ಯಡಿಯೂರಪ್ಪನವರಲ್ಲಿದೆ. ಈಗಿರುವಾಗ ಯಡಿಯೂರಪ್ಪನವರನ್ನ ಮೂಲೆ ಗುಂಪು ಮಾಡಿ ಆಟವಾಡುತ್ತೇವೆ ಅನ್ನೋದು ಕಷ್ಟಸಾಧ್ಯವೇ. ರಾಜ್ಯ ಬಿಜೆಪಿಗೆ ಈಗಾಗಲೇ ಇದರ ಅನುಭವ ಕೂಡ ಆಗಿದೆ. ಹೀಗಾಗಿ ಸದ್ಯಕ್ಕೆ ಯಡಿಯೂರಪ್ಪನವರನ್ನ ಕಡೆಗಣಿಸಿ ಹೈಕಮಾಂಡ್ ಯಾವುದೇ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆಗಳು ಕಡಿಮೆ ಅನ್ನೋದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

corona cases

Tags: BJPCM BS YADIYURAPPAMurugesh nirani
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram