ನನ್ನ ಆಡಳಿತ ಕಾಲದಲ್ಲಿ ಬಿಡುಗಡೆಯಾಗಿದ್ದ ಅನುದಾನಗಳನ್ನು ಕಡಿತಗೊಳಿಸಿದ್ದಾರೆ. ಈ ಮೂಲಕ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ನಾನು ಇದನ್ನು ಮುಂಬರುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ ಎಂದಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು. ಈ ಸರ್ಕಾರದಲ್ಲಿ ನಿರಂತರವಾಗಿ ದ್ವೇಷದ ರಾಜಕಾರಣ ನಡೆಯುತ್ತಿದೆ. ತಮಗೆ ಬೇಕಾದವರಿಗೆ ಮಾತ್ರ ಅನುಧಾನ ನೀಡಿ ಉಳಿದ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಈ ವಿಚಾರವನ್ನು ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ವೇಳೆ ಪ್ರಸ್ತಾಪ ಮಾಡುತ್ತೇನೆ. ಜೊತೆಗೆ ನನ್ನ ಕಾಲದಲ್ಲಿ ಕೊಟ್ಟಿರುವ ಎಲ್ಲಾ ಅನುದಾನಗಳ ಸ್ಥಗಿತಕ್ಕೆ ಕಾರಣ ಕೇಳುತ್ತೇನೆ ಎಂದರು.
FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?
FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್ಬಾಲ್ ಮೈದಾನ. 105 ಮೀಟರ್...








