ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಬಿಎಸ್ ವೈ ಖಡಕ್ ವಾರ್ನಿಂಗ್
ಬೆಂಗಳೂರು : ಕೊರೊನಾ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದರವನ್ನ ನಿಗದಿ ಮಾಡಲಾಗಿದೆ. ಒಂದು ಅದನ್ನ ಮೀರಿ ಹಣ ತೆಗೆದುಕೊಂಡರೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಿ.ಎ.ಸ್.ಯಡಿಯೂರಪ್ಪ ತಿಳಿಸಿದ್ದಾರೆ.
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಿರುದ್ಧದ ಸಮರದಲ್ಲಿ ಮಹತ್ವದ ಇವತ್ತು ದಿನ. ಇಂದಿನಿಂದ ಭಾರತ ಸರ್ಕಾರದ ಸೂಚನೆಯಂತೆ ಲಸಿಕೆ ನೀಡುವ ಕಾರ್ಯಕ್ರಮ ಚಾಲನೆ ನೀಡಲಾಗಿದೆ.
ರಾಜ್ಯ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡಲಿದೆ. ಕೇಂದ್ರದಿಂದ ಮೂರು ಲಕ್ಷ ಲಸಿಕೆ ಲಭ್ಯವಾಗಿದೆ. ನಮ್ಮ ಬಳಿ ಒಂದು ಲಕ್ಷ ಲಭ್ಯವಿದೆ.
ಲಸಿಕೆಗಾಗಿ ಈಗಾಗಲೇ ಹಣವನ್ನ ಕೊಟ್ಟಾಗಿದೆ. ಭಾರತ ಸರ್ಕಾರ ಕ್ರಮ ಕೈಗೊಂಡಿರೋದು ಸಮಯೋಚಿತವಾಗಿದೆ. ಅದಕ್ಕಾಗಿ ನಾನು ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು
ಇನ್ನು ಇದೇ ವೇಳೆ ಸರ್ಕಾರದ ಮಾರ್ಗ ಸೂಚಿ ಪಾಲನೆ ಮಾಡುವಂತೆ ಮನವಿ ಮಾಡಿಕೊಂಡ ಸಿಎಂ, ಜನರು ಸಹಕಾರ ನೀಡಿದ್ರ ಕೋವಿಡ್ ನಿಯಂತ್ರಣ ಸಾಧ್ಯ ಎಂದರು.