ಬೆಂಗಳೂರು: ಭಾನುವಾರ ಲಾಕ್ಡೌನ್ ಸೇರಿದಂತೆ ರಾಜ್ಯ ಸರ್ಕಾರ ಕೊರೊನಾ ಹೆಮ್ಮಾರಿ ತಡೆಗೆ ನಡೆಸುತ್ತಿರುವ ಪ್ರಯತ್ನಗಳು ಫಲ ನೀಡದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂಗಿತ ವ್ಯಕ್ತಪಡಿಸಿದ್ದಾರೆ.
ಇಂದು ಬೆಳಿಗ್ಗೆ ನಿವಾಸದಲ್ಲಿ ಸಚಿವರಾದ ಡಾ.ಕೆ ಸುಧಾಕರ್, ಡಿಸಿಎಂ ಅಶ್ವತ್ಥ ನಾರಾಯಣ್ ಜತೆ ತುರ್ತು ಸಭೆ ನಡೆಸಿದ ಯಡಿಯೂರಪ್ಪ, ಸಂಜೆಯೊಳಗೆ ಅಭಿಪ್ರಾಯ ತಿಳಿಸುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸದ್ಯ ಭಾನುವಾರ ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ. ಇದೊಂದೇ ಮಾರ್ಗ ಕೊರೊನಾ ತಡೆಯಲು ¸ಸಾಕಾಗುವುದಿಲ್ಲ. ಹೀಗಾಗ ಮುಂದಿನ 3 ವಾರ ಶನಿವಾರ ಹಾಗೂ ಭಾನುವಾರ ಎರಡು ದಿನ ಲಾಕ್ಡೌನ್ ಮಾಡಿದರೆ ಹೇಗೆ ಎಂದು ಯಡಿಯೂರಪ್ಪ ಸಚಿವರ ಮುಂದೆ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಈ ಬಗ್ಗೆ ಶೀಘ್ರವಾಗಿ ತಜ್ಞರ ಜತೆ ಚರ್ಚೆ ನಡೆಸಿ ಅಭಿಪ್ರಾಯ ತಿಳಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಮೊದಲ ಹಂತದ ಮತದಾನ; 102 ಕ್ಷೇತ್ರಗಳಿಗೆ ಮತದಾನ
ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ನಡೆಯಲಿದೆ. ಹೀಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹರಾಷ್ಟ್ರ, ತಮಿಳುನಾಡು...