ಸಿಎಂ ಬದಲಾವಣೆ ವಿಚಾರ | ಬೆಳಗಾವಿ Belgaum ಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ಬೆಳಗಾವಿ : ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಇದರ ಬೆನ್ನಲ್ಲೆ ಇದೀಗ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬೆಳಗಾವಿ, ಚಿಕ್ಕೋಡಿ ವಿಭಾಗದ ಬಿಜೆಪಿ ಪ್ರಮುಖರು ಸಭೆ ನಡೆಸಿದ್ದಾರೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು,
ಸಚಿವ ಉಮೇಶ್ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಮಹೇಶ್ ಕುಮಟಳ್ಳಿ, ದುರ್ಯೋಧನ ಐಹೊಳೆ, ಪಿ.ರಾಜೀವ್, ಮಹಾಂತೇಶ್ ದೊಡ್ಡಗೌಡರ್ ಭಾಗಿಯಾಗಿದ್ದಾರೆ.
ಮೂಲಗಳ ಪ್ರಕಾರ ಇದೊಂದು ಅನ್ ಪ್ಲಾನ್ಡ್ ಮೀಟಿಂಗ್ ಆಗಿದ್ದು, ದಿಢೀರ್ನೆ ಸಭೆ ಕರೆದು ಪಕ್ಷ ಸಂಘಟನೆ ಕುರಿತು ಅರುಣ್ ಕುಮಾರ್ ಚರ್ಚೆ ನಡೆಸುತ್ತಿರುವ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.