ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

admin by admin
January 27, 2026
in Sports, Newsbeat, ಕ್ರೀಡೆ
CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

Share on FacebookShare on TwitterShare on WhatsappShare on Telegram

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ

* ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ
*
* ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌, ಸರ್ಕಾರಿ ನೌಕರರು, ವೈದ್ಯರು, ಚಲನಚಿತ್ರ ನಟ-ನಟಿಯರು ಸ್ಪರ್ಧಿಗಳಾಗಿ ಕಣಕ್ಕೆ

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ರೀತಿಯ ಸೇವೆ ಸಲ್ಲಿಸುತ್ತಿರುವ ಮಹನೀಯರ ಕ್ರೀಡಾಸಕ್ತಿಯನ್ನು ಪ್ರದರ್ಶಿಸಲು ವೇದಿಕೆ ರೂಪಿಸುವ ಉದ್ದೇಶದೊಂದಿಗೆ ‘9 ಡ್ರೀಮ್ಸ್‌’ ಸಂಸ್ಥೆ ‘ಸಿಎಂ ಕಪ್‌ 2026’ ಶಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ಆಯೋಜಿಸುತ್ತಿದ್ದು , ಕ್ರೀಡಾಕೂಟದ ಆಟಗಾರರ ಆಯ್ಕೆ ಮತ್ತು ಜೆರ್ಸಿ ಅನಾವರಣ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು. ಮೀಡಿಯಾ ಕನೆಕ್ಟ್‌ ಸಹಯೋಗದಲ್ಲಿ ಕಿಡಾಕೂಟ ಆಯೋಜನೆಗೊಳ್ಳುತ್ತಿದೆ.
ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಜಿ ಮತ್ತು ಐಜಿಪಿ ಡಾ. ಎಂ. ಎ. ಸಲೀಂ, ಡಿಜಿಪಿ ಅಲೋಕ್ ಕುಮಾರ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಂಡದ ಜರ್ಸಿ ಬಿಡುಗಡೆ ಮಾಡಿದರು.
ಈ ವೇಳೆ ಸಕ್ರಾ ಆಸ್ಪತ್ರೆಯ ನಿರ್ದೇಶಕ ಡಾ. ಶ್ರೀಕಾಂತ್ ಶೆಟ್ಟಿ, ಹಿರಿಯ ಪತ್ರಕರ್ತ ಪೊನ್ನಪ್ಪ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಡಿಜಿ ಮತ್ತು ಐಜಿಪಿ ಡಾ. ಎಂ. ಎ. ಸಲೀಂ, ಇದು ಐಪಿಎಲ್ ಮಾದರಿಯಲ್ಲಿ ಆಯೋಜನೆ ಮಾಡಿರುವುದು ಬಹಳ ಖುಷಿ ನೀಡಿದೆ. ನಾನು ಬ್ಯಾಡ್ಮಿಂಟನ್‌ ಆಡುತ್ತೇನೆ. ಇದು ಕ್ರೀಡಾ ಸ್ಪೂರ್ತಿಯನ್ನು ತೋರಿಸುತ್ತದೆ. ನಮ್ಮ ಇಲಾಖೆಯವರು ಇದರಲ್ಲಿ ಆಡುತ್ತಿರುವುದು ಬಹಳ ಸಂತೋಷ ತಂದಿದೆ. ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.

ಅಲೋಕ್ ಕುಮಾರ್ ಮಾತನಾಡಿ, ನಾನು ಬ್ಯಾಡ್ಮಿಂಟನ್‌ ಆಡುತ್ತೇನೆ. ಈ ಪಂದ್ಯಾವಳಿಯಲ್ಲಿ ರಾಜಕೀಯ ಮುಖಂಡರು, ಮಾಧ್ಯಮದ ಮಿತ್ರರು, ವೈದ್ಯರು, ಆಡಳಿತಾಧಿಕಾರಿಗಳು ಎಲ್ಲರ ಸಮ್ಮಿಲನ ನೋಡಿ ಬಹಳ ಖುಷಿಯಾಯಿತು. ಬಹುಶಃ ಈ ರೀತಿ ಎಲ್ಲಿಯೂ ನಡೆದಿಲ್ಲ. ಪಂದ್ಯಾವಳಿ ತುಂಬಾ ಚೆನ್ನಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಟಿವಿ9 ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಜಿ.ವೈ. ಮಂಜುನಾಥ್‌ ಅವರ ಪರಿಕಲ್ಪನೆಯಲ್ಲಿ ಸಿಎಂ ಕಪ್‌ 2026 ಆಯೋಜಿಸಲಾಗುತ್ತಿದೆ. ಅವರಿಗೆ ದಿವ್ಯ ರಂಗೇನಹಳ್ಳಿ ಸಾರಥ್ಯದ ಮೀಡಿಯಾ ಕನೆಕ್ಟ್‌ ಸಂಸ್ಥೆ, ಸಿಎಂ ಕಪ್‌ ಸಹ ಸಂಸ್ಥಾಪಕ ಮತ್ತು ಹಿರಿಯ ಪತ್ರಕರ್ತ ಸುನೀಲ್‌ ಧರ್ಮಸ್ಥಳ ಸೇರಿದಂತೆ ಇತರ ಗೆಳೆಯರು ಸಿಎಂ ಕಪ್‌ 2026ರ ಆಯೋಜನೆಗೆ ಸಹಕಾರ ನೀಡಿದ್ದಾರೆ.
ರಾಜ್ಯದಲ್ಲಿಯೇ ವಿಭಿನ್ನ ಮತ್ತು ವಿಶೇಷ ರೀತಿಯಲ್ಲಿ ಸಿಎಂ ಕಪ್‌ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡುತ್ತಿರುವ ಜನಪ್ರತಿನಿಧಿಗಳು, ಐಎಎಸ್‌, ಐಪಿಎಸ್‌, ಕೆಎಎಸ್‌, ಪೊಲೀಸ್‌, ಸಚಿವಾಲಯದ ಅಧಿಕಾರಿಗಳು ವೈದ್ಯರು, ಚಲನಚಿತ್ರ ನಟ-ನಟಿಯರು ಮತ್ತು ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವವರು ಸ್ಪರ್ಧಿಗಳಾಗಿ ಶಟಲ್‌ ಕೋರ್ಟ್‌ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ಆಮೂಲಕ ಸಿಎಂ ಕಪ್‌ ಒಂದು ಕ್ಷೇತ್ರ ಆಟಗಾರರಿಗೆ ಮಾತ್ರ ಸೀಮಿತವಾಗಿರದೆ, ಎಲ್ಲ ಕ್ಷೇತ್ರದವರನ್ನು ಕ್ರೀಡೆಯಲ್ಲಿ ತೊಡಗಿಸುವ ದೊಡ್ಡ ಸಾಹಸವಾಗಿದೆ.
8 ತಂಡಗಳ ನಡುವೆ ಹಣಾಹಣಿ:
ಸಿಎಂ ಕಪ್‌ ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟದ ಮತ್ತೊಂದು ವಿಶೇಷವೆಂದರೆ ಪ್ರತಿ ಕ್ಷೇತ್ರದವರು ಒಂದೇ ತಂಡದಲ್ಲಿ ಆಡುತ್ತಿಲ್ಲ. ಬದಲಿಗೆ, ಎಲ್ಲರೂ ಒಂದೊಂದು ತಂಡದಿಂದ ಒಟ್ಟಾಗಿ ಕಣಕ್ಕಿಳಿಯುತ್ತಿದ್ದಾರೆ. ಒಟ್ಟು 8 ಫ್ರಾಂಚೈಸಿ ತಂಡಗಳಿರಲಿದ್ದು, ಪ್ರತಿ ತಂಡಕ್ಕೂ ಪ್ರತ್ಯೇಕ ಮಾಲೀಕರಿರಲಿದ್ದಾರೆ. ಜತೆಗೆ ಪ್ರತಿ ತಂಡದಲ್ಲೂ ಪುರುಷ ಮತ್ತು ಮಹಿಳಾ ಆಟಗಾರ್ತಿಯರಂತೆ ಒಟ್ಟು 15 ಆಟಗಾರರಿರಲಿದ್ದಾರೆ. ಹಾಗೆಯೇ, ಪ್ರತಿ ತಂಡದಲ್ಲೂ ಜನಪ್ರತಿನಿಧಿಗಳು, ಐಎಎಸ್‌, ಐಪಿಎಸ್‌, ಕೆಎಎಸ್‌, ಪೊಲೀಸ್‌, ಸಚಿವಾಲಯದ ಅಧಿಕಾರಿಗಳು, ವೈದ್ಯರು, ಚಲನಚಿತ್ರ ನಟ-ನಟಿಯರು ಮತ್ತು ಪತ್ರಕರ್ತ ಆಟಗಾರರಿರಲಿದ್ದಾರೆ.
ಪ್ರತಿ ತಂಡಕ್ಕೂ ಒಬ್ಬರು ಕ್ಯಾಪ್ಟನ್‌, ಒಬ್ಬರು ವೈಸ್‌-ಕ್ಯಾಪ್ಟನ್‌ ಇರಲಿದ್ದಾರೆ. ಅವರ ಜತೆಗೆ ಚಲನಚಿತ್ರ ರಂಗದ ಒಬ್ಬರು ಐಕಾನ್‌ ಪ್ಲೇಯರ್‌ ಆಗಿರಲಿದ್ದಾರೆ. ಪ್ರತಿ ತಂಡಕ್ಕೂ ತಲಾ ಒಬ್ಬರು ಶಾಸಕರು (ಜನಪ್ರತಿನಿಧಿ), ಐಎಎಸ್‌, ಐಪಿಎಸ್‌, ಪೊಲೀಸ್‌ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು, ವೈದ್ಯರು, ಮಾಧ್ಯಮ ಪ್ರತಿನಿಧಿ ಹಾಗೂ ಚಲನಚಿತ್ರ ರಂಗದವರು ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಪಂದ್ಯಾವಳಿಯು ಮೆನ್ಸ್‌ ಸಿಂಗಲ್ಸ್‌, ಮೆನ್ಸ್ ಡಬಲ್ಸ್‌, ವುಮೆನ್‌ ಸಿಂಗಲ್ಸ್‌, ವುಮೆನ್ಸ್ ಡಬಲ್ಸ್‌, ಮಿಕ್ಸೆಡ್‌ ಡಬಲ್ಸ್ ಮತ್ತು ಪವರ್‌ ಡಬಲ್ಸ್‌ ಕೆಟಗರಿಯಲ್ಲಿ ನಡೆಯಲಿದೆ. ಇದರ ಜತೆಗೆ ಗೇಮ್‌ ಚೇಂಜರ್‌ ಎನ್ನುವ ಹೊಸ ಪರಿಕಲ್ಪನೆಯನ್ನೂ ಕ್ರೀಡಾಕೂಟದಲ್ಲಿ ಪರಿಚಯಿಸಲಾಗುತ್ತಿದೆ. ಕ್ರೀಡಾಕೂಟದ ವಿಜೇತ ತಂಡಕ್ಕೆ 7 ಲಕ್ಷ ರೂಪಾಯಿ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತಿದೆ.
ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಸನ್ಮಾನ್ಯ ರಾಜ್ಯಪಾಲ ಥಾವರಚಂದ್ ಗೆಹಲೋಥ್‌, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಸನ್ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಫೆ. 21-22ರಂದು ಕ್ರೀಡಾಕೂಟ:
ಸಿಎಂ ಕಪ್‌ 2026 ಕ್ರೀಡಾಕೂಟವು ಫೆ. 21 (ಶನಿವಾರ) ಮತ್ತು ಫೆ. 22 (ಭಾನುವಾರ)ರಂದು ಕರ್ನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ನಲ್ಲಿ ನಡೆಯಲಿದೆ. ಅದರ ಪೂರ್ವಭಾವಿಯಾಗಿ ಭಾನುವಾರ (ಜ. 25)ದಂದು ಅರಮನೆ ಮೈದಾನದ ವೈಟ್‌ಪೆಟಲ್ಸ್‌ನಲ್ಲಿ ಆಟಗಾರರ ಆಯ್ಕೆ ಮತ್ತು ಜೆರ್ಸಿ ಅನಾವರಣ ಮಾಡಲಾಯಿತು.
ಜಿಯೋ
—-
ತಂಡದ ಮಾಲೀಕರು:
ಪ್ರಸನ್ನ—— (The Elite Badminton),
ರೂಪಾ— (Esthetic Attacker’s),
ನರಸಿಂಹಮೂರ್ತಿ—- (Telicom sky Stricker), ಲಿಂಗರಾಜು—– (Inspire challenger’s),
ಕೆಜಿಎಫ್‌ ಬಾಬು—- (KGF Strickers ),
ಪಳನಿ ಪ್ರಕಾಶ್‌—- (Team cafe divyyam),
ಆನಂದ್‌—- (Pro Win pancher),
ಯೋಗೀಶ್‌—-(Sharadha Strickers)

Source: CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22
Via: CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22
Tags: #9dreamz#cmcup2026#saakshatvBadmintonbengalurukarnataka
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram