CM Delhi tour : ಹಲವು ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಸಿಎಂ ಬೊಮ್ಮಾಯಿ ಚರ್ಚೆ….
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು , ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಹಲವು ಯೋಜನೆಗಳ ಕುರಿತು ಕೇಂದ್ರ ನಾಯಕರ ಜೊತೆ ಮಾತನಾಡಿದ್ದಾರೆ.
ಇಂದು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಬೆಳಗಾವಿಯಲ್ಲಿ ರಕ್ಷಣಾ ಅಧಿಕಾರಿಗಳಿಗೆ ನಿಹಿತವಾಗಿರುವ 732.24 ಎಕರೆ ಭೂಮಿಯನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದರು. ಅಭಿವೃದ್ಧಿ ದೃಷ್ಟಿಯಿಂದ ಭೂಮಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗೆ ಹಸ್ತಾಂತರಿಸಬೇಕು ಎಂದು ರಾಜನಾಥ್ ಅವರಿಗೆ ಮನವಿ ಮಾಡಿದರು.
ಆ ಭೂಮಿಯಲ್ಲಿ ಐಟಿ ಪಾರ್ಕ್ ಸೇರಿದಂತೆ ಯೋಜನೆಗಳ ಪ್ರಸ್ತಾಪಗಳಿರುವುದರಿಂದ ರಾಜ್ಯ ಸರ್ಕಾರವು ಹಲವು ಬಾರಿ ಪ್ರಸ್ತಾವನೆಗಳನ್ನು ಕಳುಹಿಸಿತ್ತು ಎಂದು ಮೂಲಗಳಿಂದ ತಿಳಿದಬಂದಿದೆ.
ಇದಷ್ಟೇ ಅಲ್ಲದೆ, ಬೊಮ್ಮಾಯಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ, ರಾಜ್ಯ ಸಂಪುಟ ಈಗಾಗಲೇ ಅನುಮೋದನೆ ನೀಡಿರುವುದರಿಂದ ಗುಡೇಕೋಟೆ ಸ್ಲಾತ್ ಕರಡಿ ಧಾಮ ಮತ್ತು ಭೀಮಘಡ ಮೀಸಲು ಅರಣ್ಯದ ಬಫರ್ ವಲಯಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಬೇಕು ಎಂದು ಮನವಿ ಮಾಡಿದರು.
ಪ್ರಧಾನ ಮಂತ್ರಿ ಮಿತ್ರ (ಮೆಗಾ ಇಂಟಿಗ್ರೇಟೆಡ್ ಟೆಕ್ಸ್ಟೈಲ್ ರೀಜನ್ ಮತ್ತು ಅಪೆರಲ್) ಯೋಜನೆಯಡಿ ಕಲಬುರಗಿ, ವಿಜಯಪುರ ಮತ್ತು ತುಮಕೂರಿನಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ಗಳನ್ನು ಸ್ಥಾಪಿಸಲು ಅನುದಾನ ನೀಡುವಂತೆ ಕೇಂದ್ರ ಜವಳಿ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದರು.
CM Delhi tour: CM Bommai discussion with Union Minister on many projects….