ಕೈ ಬಿಡುವ ಸಿಎಂ ಇಬ್ರಾಹಿಂ ಚಿತ್ತ ಜೆಡಿಎಸ್ ನತ್ತ..!
ಬೆಂಗಳೂರು : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ತೊರೆಯುವುದು ಬಹುತೇಕ ಪಕ್ಕಾ ಆಗಿದೆ. cm-ibrahim- Likely-join-JDS saakshatv
ಪರಿಷತ್ ವಿಪಕ್ಷ ಸ್ಥಾನ ತಪ್ಪಿದ್ದಕ್ಕಾಗಿ ಮುನಿಸಿಕೊಂಡಿರುವ ಸಿಎಂ ಇಬ್ರಾಹಿಂ, ಗುರುವಾರ ಸುದ್ದಿಗೋಷ್ಟಿ ಶೀಘ್ರದಲ್ಲಿಯೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು.
ಅಲ್ಲದೇ ಕಾಂಗ್ರೆಸ್ ವಿಚಾರ ಮುಗಿದ ವಿಚಾರ ಎಂದಿದ್ದರು. ಆ ಮೂಲಕ ಸಿದ್ದರಾಮಯ್ಯ ಆಪ್ತ ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಬೈ ಬೈ ಹೇಳೋದು ಫಿಕ್ಸ್ ಆದಂತೆ ಆಗಿದೆ.
ಜೆಡಿಎಸ್ ನತ್ತ ಇಬ್ರಾಹಿಂ
ಕೈ ಬಿಡಲಿರುವ ಸಿ.ಎಂ. ಇಬ್ರಾಹಿಂ ಸದ್ಯ ಜೆಡಿಎಸ್ ನತ್ತ ಮುಖ ಮಾಡುವ ಎಲ್ಲ ಲಕ್ಷಣಗಳು ಕಾಣುತ್ತಿವೆ.
ಈ ಹಿಂದೆ ಇಬ್ರಾಹಿಂ ಅವರನ್ನು ಭೇಟಿ ಮಾಡಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತೆ ಜೆಡಿಎಸ್ ಪಕ್ಷಕ್ಕೆ ಬರುವಂತೆ ಆಹ್ವಾನಿ ನೀಡಿದ್ರು.
ಇದಕ್ಕೆ ಇಬ್ರಾಹಿಂ ಅವರು ಕೂಡ ಧನಾತ್ಮಕವಾಗಿ ಸ್ಪಂದಿಸಿದ್ರು ಅನ್ನೋ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡಿದ್ವು.
ಇದನ್ನು ಗಮಸಿನಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಬ್ರಾಹಿಂ ನಿವಾಸಕ್ಕೆ ಭೇಟಿ ಕೊಟ್ಟು ಪಕ್ಷ ಬಿಡದಂತೆ ಮನವಿ ಮಾಡಿಕೊಂಡಿದ್ದರು.