ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ: ಸಿದ್ದರಾಮಯ್ಯ Saaksha Tv
ಬೆಂಗಳೂರು: ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ನನ್ನ ಸ್ನೇಹಿತ. ಅವರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದಲ್ಲಿ ಕೆಲವರು ಸಿ.ಎಂ. ಇಬ್ರಾಹಿಂ ಜೊತೆ ಮಾತನಾಡಿದ್ದಾರೆ. ನಾನು ಕೂಡ ಅವರಿಗೆ ಕೋಪ ಕಡಿಮೆಯಾದ ಬಳಿಕ ಹೋಗಿ ಮಾತನಾಡುತ್ತೇನೆ. ನಾನು ಸಿಎಲ್ಪಿ ನಾಯಕ ಅನ್ನೋ ಕಾರಣಕ್ಕೆ ನನ್ನ ಮೇಲೆ ಅವರಿಗೆ ಕೋಪವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಇನ್ನೂ 1995 ರಲ್ಲಿ ನಾನು ಕಾಂಗ್ರೆಸ್ ನಲ್ಲಿ ಇರಲಿಲ್ಲ. ಆಗಿನ ಕಾಂಗ್ರೆಸ್ ಬಗ್ಗೆ ನನಗೆ ಗೊತ್ತಿಲ್ಲ. ವೀರೇಂದ್ರ ಪಾಟೀಲ್ ಜೊತೆ ಇಬ್ರಾಹಿಂ ಒಂದ್ಸಲ ಕಾಂಗ್ರೆಸ್ ಗೆ ಹೋಗಿದ್ದ. ಆಮೇಲೆ ಜನತಾದಳಕ್ಕೆ ಬರ್ತಾನೆ. ನನಗೆ ಜನತಾದಳದ ನಂತರದಿಂದ ಅಷ್ಟೆ ಐಡಿಯಾ ಇದೆ. ಅದಕ್ಕೂ ಮುನ್ನ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
ನನ್ನ ಭಾಷಣ ಕೇಳಲು ಸಿದ್ದರಾಮಯ್ಯ ಮೋಟಾರ್ ಬೈಕ್ನಲ್ಲಿ ಬರ್ತಾ ಇದ್ದರು ಎಂಬ ಇಬ್ರಾಹಿಂ ಹೇಳಿಕೆ ವಿಚಾರವಾಗಿ ಸಿದ್ದರಾಮಯ್ಯ ಮಾತನಾಡಿ ನಾನೇ ಒಂದ್ಸಲ ಹೇಳಿದ್ದೆ ಅವನಿಗೆ. ನೀನು ಟೌನ್ ಹಾಲ್ನಲ್ಲಿ ಭಾಷಣ ಮಾಡುವಾಗ ಬಂದಿದ್ದೆ ಅಂತ ಎಂದು ಪ್ರತಿಕ್ರಿಯೆ ನೀಡಿದರು.
ಅಲ್ಲದೇ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಕನಸು ಇದೆ ಎಂದು ಹೆಚ್. ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ನಾನು ಹಿಜಾಬ್ ಬಗ್ಗೆ ಮಾತನಾಡಿರುವುದು ನಿಜ. ಆದರೆ ಹೆಚ್.ಡಿ. ಕುಮಾರಸ್ವಾಮಿ ಬಗ್ಗೆ ಮಾತನಾಡಿಲ್ಲ. ಈಗ ನನ್ನ ಬಗ್ಗೆ ಮಾತನಾಡುವುದಕ್ಕೆ ಕುಮಾರಸ್ವಾಮಿ ಯಾರು ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.