ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ದೇಶದೆಲ್ಲೆಡೆ ಮನೆ ಮಾತಾಗಿದ್ದ ಶ್ರೀನಿವಾಸ್ ಗೌಡ ಹಾಗೂ ಮತ್ತವರ ತಂಡಕ್ಕೆ ಸಿಎಂ ಯಡಿಯೂರಪ್ಪರಿಂದ ಸನ್ಮಾನಕ್ಕಾಗಿ ಆಹ್ವಾನ ಬಂದಿದೆ. ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಸನ್ಮಾನ ಮಾಡಲಿದ್ದು, ಶ್ರೀನಿವಾಸ್ ಗೌಡ ಅವರೊಂದಿಗೆ ವಾರ್ತಾ ಇಲಾಖೆಯ ಅರುಣಕಾಂತ, ವರದಿಗಾರ ನಾಗರಾಜ, ಕೆ.ಗೋಪಾಲನ್ ಕಡಬ ಹಾಗೂ ಸಿಬ್ಬಂದಿಗೂ ಬೆಂಗಳೂರಿಗೆ ಬರಲು ಆಹ್ವಾನ ನೀಡಲಾಗಿದೆ. ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಶ್ರೀನಿವಾಸ ಗೌಡರಿಗೆ ಅಗತ್ಯ ತರಭೇತಿಯನ್ನು ನೀಡಿ ಒಲಿಂಪಿಕ್ಸ್ಗೆ ಕಳುಹಿಸಿಕೊಡುವ ಬಗ್ಗೆ ಟ್ವೀಟ್ ಮಾಡಿದ್ದರು. ನಂತರ ಸಚಿವರ ಮನವಿಯನ್ನು ತಿರಸ್ಕರಿಸಿರುವ ಶ್ರೀನಿವಾಸ ಗೌಡ ಮನವಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಹ್ವಾನದಂತೆ ನಾನು ಅವರನ್ನು ಸೋಮವಾರ ಭೇಟಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








