ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಆರ್ಭಟ ಜೋರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಆಗುತ್ತಲೇ ಇದೆ. ಇದರ ಮಧ್ಯೆ ನಾಳೆ ರಾತ್ರಿಯಿಂದ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದೆ. ಈಗ ಕೇವಲ ಎರಡು ಜಿಲ್ಲೆಗಳಿಗೆ ವಿಧಿಸಲಾದ ಲಾಕ್ ಡೌನ್ ರಾಜ್ಯಾದ್ಯಂತ ವಿಸ್ತರಣೆ ಆಗಲಿದ್ಯಾ ಎಂಬೋದು ಇಂದು ನಿರ್ಧಾರವಾಗಲಿದೆ.
ಹೌದು..! ಇದೇ ವಿಚಾರವಾಗಿ ಚರ್ಚಿಸಲು ಸಿಎಂ ಬಿ.ಎಸ್ ಯಡಿಯೂರಪ್ಪ, ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. ಜಿಲ್ಲಾವಾರು ಕೊರೊನಾ ಸೋಂಕಿನ ಪ್ರಮಾಣದ ಮಾಹಿತಿ ಪಡೆದು, ಲಾಕ್ಡೌನ್ ಮಾಡಬೇಕಾ ಅಥವಾ ಬೇಡ್ವಾ ಅನ್ನೋದರ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.