ಚಾಮರಾಜನಗರ : ಧಮ್ ಇದ್ದ ವ್ಯಕ್ತಿ ಯಾಕೆ ಚುನಾವಣೆಯಲ್ಲಿ ಸೋತರು. ಸಿಎಂ ಸ್ಥಾನವನ್ನು ಏಕೆ ಸಿದ್ದರಾಮಯ್ಯ ಕಳೆದುಕೊಂಡರು, ಧಮ್ ಇರೋ ವ್ಯಕ್ತಿ ಯಾಕೆ ಕುರುಬ ಸಮುದಾಯಕ್ಕೆ ಟಿಕೆಟ್ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು.
ಇಂದು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಕುತಂತ್ರಿ, ಸ್ವಾರ್ಥಿ, ಅವರು ಜಾತಿ ಬಳಸಿಕೊಳ್ಳುತ್ತಾರೆ. ಅವರ ಕುತಂತ್ರ ರಾಜಕಾರಣದಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲು ಕಂಡರು. ಜೊತಗೆ ಜಾತಿ ಲಾಭ ಪಡೆಯುವಲ್ಲಿ ಸಿದ್ದರಾಮಯ್ಯ ನಿಸ್ಸೀಮರಾಗಿದ್ದಾರೆ.
ರಾಜ್ಯದಲ್ಲಿ ಕೆಜೆಪಿ, ಬಿಜೆಪಿ ಇಬ್ಬಾಗವಾಗಿತ್ತು. ಅದಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಶಕ್ತಿ ಇರಲಿಲ್ಲ. ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಸಿಎಂ ಆಗಿದ್ದರು. ಜಾತಿ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದೀವಿ ಅಂತಾರೆ. ಎಷ್ಟು ಜನರನ್ನು ಇವರು ಗೆಲ್ಲಿಸಿದ್ದಾರೆ ಎಂದು ವ್ಯಂಗ್ಯ ಮಾಡಿದರು.
ಇದೆ ವೇಳೆ ಸಿದ್ದರಾಮಯ್ಯ ಬಿಎಸ್. ಯಡಿಯೂರಪ್ಪ ಅವರಿಗೆ ಧಮ್ ಇಲ್ಲ ಎಂದಿರುವ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಧಮ್ ಇದ್ದ ವ್ಯಕ್ತಿ ಯಾಕೆ ಚುನಾವಣೆಯಲ್ಲಿ ಸೋಲು ಕಂಡರು. ಸಿಎಂ ಸ್ಥಾನವನ್ನು ಏಕೆ ಸಿದ್ದರಾಮಯ್ಯ ಕಳೆದುಕೊಂಡರು. ಧಮ್ ಇರೋ ವ್ಯಕ್ತಿ ಯಾಕೆ ಕುರುಬ ಸಮುದಾಯಕ್ಕೆ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಸಿದ್ದರಾಮಯ್ಯಗೆ ಧಮ್ ಬಗ್ಗೆ ಮಾತನಾಡುವಂತಹ ಯೋಗ್ಯತೆಯಿಲ್ಲ ಎಂದು ಸಚಿವ ಕೆ,ಎಸ್, ಈಶ್ವರಪ್ಪ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ