Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ತಮ್ಮ ಅಧಿಕೃತ ನಿವಾಸದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುವ ಮೂಲಕ ‘ಹರ್ ಘರ್ ತ್ರಿವರ್ಣ’ ಅಭಿಯಾನಕ್ಕೆ ಚಾಲನೆ ನೀಡಿದರು ಮತ್ತು ಆಜಾದಿಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಜನತೆಗೆ ಮನವಿ ಮಾಡಿದರು.
Uttar Pradesh CM Yogi Adityanath flags off #HarGharTiranga campaign, along with school children, at CM residence in Lucknow. pic.twitter.com/r4SbhT8hDF
— ANI UP/Uttarakhand (@ANINewsUP) August 13, 2022
ರಾಜ್ಯದ ಜನರ ಕುರಿತು ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ “ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ಸವಿನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಡೀ ದೇಶವೇ ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದೆ. ಭಾರತದ ರಾಷ್ಟ್ರಧ್ವಜವು ನಮ್ಮ ಹೆಮ್ಮೆಯ ಸಂಕೇತವಾಗಿದೆ, ದೇಶದ ಶೌರ್ಯ, ಶಾಂತಿ ಮತ್ತು ತ್ಯಾಗದ ಸಂಕೇತವಾಗಿದೆ”.
ಆಗಸ್ಟ್ 13 ರಿಂದ 15 ರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ‘ಆಜಾದಿ ಕೆ ಅಮೃತ್ ಮಹೋತ್ಸವ’ದಲ್ಲಿ ನಾವೂ ಕೈಜೋಡಿಸೋಣ, ಪ್ರಧಾನಿ ನರೇಂದ್ರ ಮೋದಿ ಅವರ ‘ಏಕ್ ಭಾರತ್-ಶ್ರೇಷ್ಠ ಭಾರತ’ ಸಂಕಲ್ಪಕ್ಕೆ ಕೈಜೋಡಿಸೋಣ ಎಂದು ಕೇಳಿಕೊಂಡರು.