ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Coal: ಕೇವಲ 9 ದಿನಗಳಿಗೆ ಆಗುವಷ್ಟಿದೆ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು

Vivek Biradar by Vivek Biradar
April 21, 2022
in National, Newsbeat, ದೇಶ - ವಿದೇಶ
Coal Power plant
Share on FacebookShare on TwitterShare on WhatsappShare on Telegram

ಕೇವಲ 9 ದಿನಗಳಿಗೆ ಆಗುವಷ್ಟಿದೆ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು

ನವದೆಹಲಿ: ಭಾರತೀಯ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕೇವಲ 9 ದಿನಗಳಿಗೆ ಆಗುವಷ್ಟಿದೆ ಎಂದು ಆಲ್ ಇಂಡಿಯಾ ಪವರ್ ಇಂಜಿನಿಯರ್ಸ್ ಫೆಡರೇಶನ್ (ಎಐಪಿಇಎಫ್) ಅಧ್ಯಕ್ಷ ಶೈಲೇಂದ್ರ ದುಬೆ ಹೇಳಿದ್ದಾರೆ.

Related posts

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

August 5, 2026
ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

August 5, 2026

ಮುಂದುವರೆದು ನಿಯಮಗಳ ಪ್ರಕಾರ, ಪಿಟ್‌ಹೆಡ್‌ಗಳ ಬಳಿ ಇರುವ ಸ್ಥಾವರಗಳು 17 ದಿನಗಳ ದಾಸ್ತಾನು ಹೊಂದಿರಬೇಕು ಮತ್ತು ಕಲ್ಲಿದ್ದಲು ಪಿಟ್‌ಹೆಡ್‌ಗಳಿಂದ ದೂರವಿರುವ ಸ್ಥಾವರಗಳು 26 ದಿನಗಳವರೆಗೆ ಸಂಗ್ರಹ ಹೊಂದಿರಬೇಕು ಎಂದು ತಿಳಿಸಿದ್ದಾರೆ.

ರಾಜ್ಯಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾದಂತೆ ದೇಶಾದ್ಯಂತ ಉಷ್ಣ ಸ್ಥಾವರಗಳು ಕಲ್ಲಿದ್ದಲು ಕೊರತೆಯನ್ನು ಎದುರಿಸುತ್ತಿವೆ. ಥರ್ಮಲ್ ಸ್ಥಾವರಗಳಲ್ಲಿ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇಲ್ಲದ ಕಾರಣ ಬೇಡಿಕೆಗೆ ತಕ್ಕಷ್ಟು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

Coal Saaksha Tv

ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದೆ. ಆಮದು ಮಾಡಿಕೊಂಡ ಕಲ್ಲಿದ್ದಲು ಬೆಲೆಯೂ ಹೆಚ್ಚಿದೆ. ಜೊತೆಗೆ ಕಲ್ಲಿದ್ದಲು ಸಾಗಣೆಗೆ ರೈಲ್ವೆ ರೇಕ್‌ಗಳ ಕೊರತೆಯು ವಿದ್ಯುತ್ ಸ್ಥಾವರಗಳಲ್ಲಿನ ಕಲ್ಲಿದ್ದಲು ದಾಸ್ತಾನುಗಳ ಮೇಲೆ ಪರಿಣಾಮ ಬೀರಿದೆ. ದಿನನಿತ್ಯದ 453 ರೇಕ್‌ಗಳ ಬದಲಿಗೆ ಪ್ರಸ್ತುತ 412 ರೇಕ್‌ಗಳು ಮಾತ್ರ ಲಭ್ಯವಿವೆ ಎಂದು ವಿವರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಲ್ಲಿದ್ದಲು ದಾಸ್ತಾನು ಏಳು ದಿನಗಳವರೆಗೆ ಉಳಿದಿದೆ. ಹರಿಯಾಣದಲ್ಲಿ ಕಲ್ಲಿದ್ದಲು ದಾಸ್ತಾನು 8 ಹಾಗೂ ರಾಜಸ್ಥಾನದಲ್ಲಿ 17 ದಿನಗಳವರೆಗೆ ಇದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಜಾರ್ಖಂಡ್ ಮತ್ತು ಛತ್ತೀಸ್‌ಗಢ ಸೇರಿ ಇತರ ರಾಜ್ಯಗಳು ಸಹ ಕಲ್ಲಿದ್ದಲು ಬಿಕ್ಕಟ್ಟು ಎದುರಿಸುತ್ತಿವೆ.

ಮುಂದಿನ ಕೆಲವು ತಿಂಗಳುಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಿಂದಾಗಿ, ಆಮದು ಮಾಡಿಕೊಂಡ ಕಲ್ಲಿದ್ದಲಿನ ಬೆಲೆ ಪ್ರತಿ ಟನ್‌ಗೆ 7,613 ರೂ. ನಿಂದ 22,841 ರೂ.ಗೆ ಹೆಚ್ಚಾಗಿದೆ.

ಕೇಂದ್ರೀಯ ವಿದ್ಯುಚ್ಛಕ್ತಿ ಪ್ರಾಧಿಕಾರದ ಅಂಕಿ ಅಂಶಗಳ ಪ್ರಕಾರ, 173 ವಿದ್ಯುತ್ ಸ್ಥಾವರಗಳು (ಆಮದು ಮಾಡಿಕೊಂಡ ಕಲ್ಲಿದ್ದಲು ಬಳಸುವ ಘಟಕಗಳನ್ನೂ ಒಳಗೊಂಡಂತೆ) ಅಗತ್ಯವಿರುವ 66.32 ಮಿಲಿಯನ್ ಟನ್‌ಗಳ ಬದಲಾಗಿ ಕೇವಲ 22.26 ಮಿಲಿಯನ್ ಟನ್‌ಗಳಷ್ಟು ಮಾತ್ರ ದಾಸ್ತಾನು ಹೊಂದಿವೆ.

Tags: #Saaksha TVcentral electricity authority of indiacoalCoal Power Plant
ShareTweetSendShare
Join us on:

Related Posts

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ ಹೈಕಮಾಂಡ್- ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬುದು ಕೇವಲ ಭ್ರಮೆ: ಸಚಿವ ಸ್ಥಾನದ ಅತೃಪ್ತಿ ವದಂತಿಗಳಿಗೆ ಬಿ ಕೆ ಹರಿಪ್ರಸಾದ್ ಖಡಕ್ ತಿರುಗೇಟು

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಬಿ. ಕೆ. ಹರಿಪ್ರಸಾದ್ ಅವರು ಸಂಪೂರ್ಣವಾಗಿ...

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram