ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬರು ಫೇಸ್ ಬುಕ್ ಲೈವ್ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರ(Chikkaballapura) ನಗರದ 17ನೇ ವಾರ್ಡ್ನಲ್ಲಿ ನಡೆದಿದೆ. ಕೆ.ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ.
ವಿವಾಹಿತ ebook)ನಲ್ಲಿ ಲೈವ್ ಗೆ ಬಂದಿದ್ದ ವ್ಯಕ್ತಿ, ಪತ್ನಿ, ಅತ್ತೆ ಹಾಗೂ ಬೈಮೈದ ಸೇರಿಕೊಂಡು ನೀನು ಸಾಯೋವರೆಗೂ ನಮಗೆ ನೆಮ್ಮದಿ ಇಲ್ಲ ಎಂದು ಹೀಯಾಳಿಸುತ್ತಿದ್ದರು. ಜೊತೆಗೆ ಗಂಡ ವೆಂಕಟೇಶನನ್ನು ತೊರೆದು ಪತ್ನಿ ಶಿಲ್ಪಾ ತವರುಮನೆ ಸೇರಿದ್ದಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಿರುಕುಳದಿಂದ ಸಾಯುತ್ತಿದ್ದೇನೆ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸದ್ಯ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.