ಶಿವಮೊಗ್ಗ: ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಬಾವುಟ ಹಾರಿಸುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಕಾರ್ಯಕರ್ತರ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಚುನಾವಣೆಯಲ್ಲಿ ನಾನು ಗೆಲುವು ಸಾಧಿಸುತ್ತೇನೆ. ಗೆದ್ದ ಎರಡು ತಿಂಗಳುಗಳ ನಂತರ ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಹೇಳಿದ್ದಾರೆ.
ಹಿಂದುತ್ವದ ಪರ ಮಾತನಾಡುವ ಪ್ರತಾಪ್ ಸಿಂಹ, ಸಿ.ಟಿ.ರವಿ, ಸದಾನಂದಗೌಡಗೆ ಟಿಕೆಟ್ ತಪ್ಪಿಸಿದರು. ಯಡಿಯೂರಪ್ಪ ತಮಗೆ ಬೇಕಾದವರಿಗೆ ಮಾತ್ರ ಟಿಕೆಟ್ ನೀಡಿದ್ದಾರೆ. ಅವರೆಲ್ಲ ಸೋತರೆ ಯಡಿಯೂರಪ್ಪ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.