ನಿರ್ಮಾಪಕರಿಗೆ ಬೆದರಿಕೆ ಕರೆ – ನಟ ದರ್ಶನ್ ವಿರುದ್ಧ ದೂರು ದಾಖಲು..- actor Darshan threat call to producer
ಇತ್ತೀಚೆಗೆ ನಟ ದರ್ಶನ್ ಅವರ ಹೇಳಿಕೆಗಳು ಮತ್ತು ಮಾತುಗಳು ವಿವಾದಕ್ಕೆ ಕಾರಣವಾಗುತ್ತಿವೆ. ಪುನೀತ್ ರಾಜ್ ಕುರಿತಂತೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದರ್ಶನ್ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ನಿರ್ಮಾಪಕ ಭರತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಗವಾನ್ ಶ್ರೀಕೃಷ್ಣ ಪರಮಾತ್ಮ ಹೆಸರಿನ ಸಿನಿಮಾ ಮಾಡುವುದಾಗಿ 2020 ರಲ್ಲಿ ಮುಹೂರ್ತ ಮಾಡಿ ಪ್ರಾರಂಭಿಸಿದ್ದರು. ಆ ಸಿನಿಮಾಕ್ಕೆ ಧೃವನ್ ನಾಯಕ ನಟರಾಗಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಸಿನಿಮಾ ಚಿತ್ರೀಕರಣ ತಡವಾಗಿತ್ತು.
ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದ್ದಕ್ಕೆ ಚಿತ್ರೀಕರಣ ತಡವಾಗಿದೆ ಎಂದು ನಿರ್ಮಾಪಕ ಭರತ್, ನಟ ಧ್ರುವನ್ ಬಳಿ ಹೇಳಿದಾಗ, ಧ್ರುವನ್, ದರ್ಶನ್ ಅವರಿಂದ ನಿರ್ಮಾಪಕರಿಗೆ ಕರೆ ಮಾಡಿಸಿದ್ದರು ಎನ್ನಲಾಗಿದೆ.. ಆಗ ದರ್ಶನ್, ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.. ದೂರಿಗೆ ಸಂಬಂಧಿಸಿದಂತೆ ದರ್ಶನ್ ಅವರದ್ದು ಎನ್ನಲಾಗುತ್ತಿರುವ ಆಡಿಯೋ ಕೂಡ ವೈರಲ್ ಆಗ್ತಿದೆ.. ನೀನು ಇರಲ್ಲ, ಏನಾದರೂ ಮಾಡುವ ಮುಂಚೆ ಹೇಳಿಯೇ ಮಾಡ್ತೀನಿ ರೆಡಿ ಇರು. ನೀನೆ ಕಾಣಿಸದಂತೆ ಮಾಡಿಬಿಡ್ತೀನಿ ಹುಷಾರಾಗಿರು ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.