ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಿಟ್ ಮ್ಯಾನ್ ರೋಹಿತ್ ಶರ್ಮಾ ನಿಜವಾಗಿಯೂ ಗಂಭೀರ ಗಾಯದಿಂದ ಬಳಲುತ್ತಿದ್ರಾ ?

Sanath Rai by Sanath Rai
October 28, 2020
in Newsbeat, Sports, ಕ್ರೀಡೆ
rohith sharma ipl 2020 mumbai indians team india saakshatv
Share on FacebookShare on TwitterShare on WhatsappShare on Telegram

ಹಿಟ್ ಮ್ಯಾನ್ ರೋಹಿತ್ ಶರ್ಮಾ ನಿಜವಾಗಿಯೂ ಗಂಭೀರ ಗಾಯದಿಂದ ಬಳಲುತ್ತಿದ್ರಾ ?

rohith sharma team india ipl 2020 saakshatvಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಮ್ ಇಂಡಿಯವನ್ನು ಆಯ್ಕೆ ಮಾಡಲಾಗಿದೆ. ಕೆಲವೊಂದು ಅಚ್ಚರಿಯ ಸೇರ್ಪಡೆ, ಕೆಲವೊಂದು ನಿರೀಕ್ಷಿತ ಆಯ್ಕೆ ಹಾಗೂ ಮತ್ತೆ ಕೆಲವು ಅಚ್ಚರಿಯ ನಿರ್ಧಾರದೊಂದಿಗೆ ತಂಡವನ್ನು ಆಯ್ಕೆ ಮಾಡಲಾಗಿದೆ.
ಸಾಮಾನ್ಯವಾಗಿ ಟೀಮ್ ಇಂಡಿಯವನ್ನು ಆಯ್ಕೆ ಮಾಡುವಾಗ ಆಯ್ಕೆ ಸಮಿತಿ ಕೆಲವೊಂದು ಕಟ್ಟು ನಿಟ್ಟಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.
ಹೀಗಾಗಿ ಆಯ್ಕೆ ಸಮಿತಿಯ ಮುಂದೆ ಟೀಕೆ, ಆರೋಪಗಳು ಕೇಳಿಬರುವುದು ಸಹಜ. ಅದು ಮಾಮೂಲಿ ಕೂಡ.
ಆದ್ರೆ ಈಗ ಪ್ರಶ್ನೆ ಬಂದಿರುವುದು ರೋಹಿತ್ ಶರ್ಮಾ ವಿಚಾರದಲ್ಲಿ.
ಹೌದು, ರೋಹಿತ್ ಶರ್ಮಾ ಅವರು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಲ್ಲಿ ಕಳೆದ ಎರಡು ಪಂದ್ಯಗಳಲ್ಲಿ ಆಡಿಲ್ಲ. ಮುಂಬೈ ಇಂಡಿಯನ್ಸ್ ಟೀಮ್ ಮ್ಯಾನೇಜ್ ಮೆಂಟ್ ಪ್ರಕಾರ ನವೆಂಬರ್ 3ರ ಪಂದ್ಯಕ್ಕೆ ರೋಹಿತ್ ಶರ್ಮಾ ಲಭ್ಯರಾಗುತ್ತಾರೆ ಅನ್ನೋ ಮಾಹಿತಿ ಇದೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಆದ್ರೆ ರೋಹಿತ್ ಶರ್ಮಾ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡಿಲ್ಲ. ಮೂರು ಮಾದರಿಯ ಕ್ರಿಕೆಟ್ ನಿಂದ ಅವರನ್ನು ಹೊರಗಿಡಲಾಗಿದೆ.
ಇದಕ್ಕೆ ಬಿಸಿಸಿಐ ಮತ್ತು ಆಯ್ಕೆ ಸಮಿತಿ ನೀಡಿರುವ ಕಾರಣ ಗಾಯ.
ಒಂದು ವೇಳೆ ರೋಹಿತ್ ಶರ್ಮಾ ಅಷ್ಟೊಂದು ಗಂಭೀರವಾದ ಗಾಯವಾಗಿದ್ದರೆ ಅವರು ಐಪಿಎಲ್ ಟೂರ್ನಿಯಿಂದಲೇ ಹೊರನಡೆಯಬೇಕಾಗಿತ್ತು. ಆದ್ರೆ ರೋಹಿತ್ ಶರ್ಮಾ ಐಪಿಎಲ್ ನ ಮುಂದಿನ ಪಂದ್ಯಗಳಲ್ಲಿ ಆಡುವ ಸಾಧ್ಯತೆಗಳು ಕೂಡ ಇವೆ.
ಇನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಸುಮಾರು ಒಂದು ತಿಂಗಳ ಸಮಯವಿದೆ. ಅಷ್ಟೊತ್ತಿಗೆ ರೋಹಿತ್ ಶರ್ಮಾ ಗಾಯದಿಂದ ವಾಸಿಯಾಗಬಹುದು.
ಒಂದು ವೇಳೆ ತೀವ್ರ ಸ್ವರೂಪದ ಗಾಯವಾಗಿರುತ್ತಿದ್ರೆ ಐಪಿಎಲ್ ನ ಮುಂದಿನ ಪಂದ್ಯಗಳಲ್ಲಿ ಹೇಗೆ ಆಡುತ್ತಾರೆ ಅನ್ನೋ ಪ್ರಶ್ನೆ ಕೂಡ ಕಾಡುತ್ತಿದೆ.
rohith sharma team india saakshatvಇನ್ನು ಬಿಸಿಸಿಐ ರೋಹಿತ್ ಶರ್ಮಾ ಅವರ ಗಾಯದ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ನೀಡಿಲ್ಲ. ಎಲ್ಲೋ ಒಂದು ಕಡೆ ಕಣ್ಣಾಮುಚ್ಚಾಳೆಯಾಟವಾಡುತ್ತಿದೆ ಎಂಬ ಅನುಮಾನ ಕೂಡ ಮೂಡಿ ಬರುತ್ತಿದೆ.
ಇಲ್ಲಿ ಇನ್ನೊಂದು ಪ್ರಶ್ನೆ ಎದ್ದು ಕಾಣುತ್ತದೆ.. ರೋಹಿತ್ ಶರ್ಮಾನಂತಹ ಆಟಗಾರರನ್ನು ಕೇವಲ ಗಾಯದ ಕಾರಣದಿಂದ ಸುದೀರ್ಘ ಸರಣಿಯಿಂದ ಹೊರಗಿಡಬೇಕಾದ್ರೆ ಬಲವಾದ ಕಾರಣವಂತೂ ಇದ್ದೇ ಇದೆ.
ಆದ್ರೆ ಆ ಕಾರಣ ಏನು ಎಂಬುದನ್ನು ಬಿಸಿಸಿಐ ಬಿಟ್ಟುಕೊಡುತ್ತಿಲ್ಲ. ಹಾಗೇ ನೋಡಿದ್ರೆ ಮಯಾಂಕ್ ಅಗರ್ ವಾಲ್ ಕೂಡ ಗಾಯದಿಂದಲೇ ಕಳೆದ ಎರಡು ಪಂದ್ಯಗಳಲ್ಲಿ ಆಡಿಲ್ಲ. ಮುಂದಿನ ಪಂದ್ಯಗಳಲ್ಲಿ ಅವರು ಆಡಬಹುದು.
ಇಲ್ಲಿ ಗಾಯಗೊಂಡಿರುವ ಮಯಾಂಕ್ ಅಗರ್‍ವಾಲ್‍ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದ್ರೆ ರೋಹಿತ್ ಶರ್ಮಾಗೆ ಸ್ಥಾನ ಕೊಟ್ಟಿಲ್ಲ.
ಇನ್ನೊಂದು ಪ್ರಶ್ನೆ ಅಂದ್ರೆ ಮಯಾಂಕ್ ಅಗರ್ ವಾಲ್ ಅವರು ಅರ್ಹವಾಗಿಯೇ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ.
ಆದ್ರೆ ಟೀಮ್ ಇಂಡಿಯಾದ ಅಪಾಯಕಾರಿ ಬ್ಯಾಟ್ಸ್ ಮೆನ್ ಆಗಿರುವ ರೋಹಿತ್ ಶರ್ಮಾ ಅವರನ್ನು ಕೇವಲ ಗಾಯದ ಕಾರಣದಿಂದ ತಂಡದಿಂದ ಹೊರಗಿಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ?
ಅದೂ ಅಲ್ಲದೆ ಆಸ್ಟ್ರೇಲಿಯಾ ಪ್ರವಾಸ ಸುಮಾರು ಮೂರು ತಿಂಗಳುಗಳ ಕಾಲ ನಡೆಯಲಿದೆ. ಹೀಗಾಗಿ ರೋಹಿತ್ ಶರ್ಮಾ ಆಯ್ಕೆಯ ಮಾನದಂಡ ಏನು ಎಂಬುದು ಗೊತ್ತಿಲ್ಲ.
ಇನ್ನು ರೋಹಿತ್ ಶರ್ಮಾ ಅವರ ಫಿಟ್ ನೆಸ್ ಬಗ್ಗೆ ತಕಾರಾರು ಇದೆ. ಯೋ ಯೋ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ವಿಫಲರಾಗಿದ್ದರೂ ಆಗಿರಬಹುದು.
ಒಂದು ವೇಳೆ ರೋಹಿತ್ ಶರ್ಮಾ ಯೋ ಯೋ ಟೆಸ್ಟ್ ನಲ್ಲಿ ಫೇಲ್ ಆಗಿದ್ರೆ ಅದಕ್ಕೆ ಬಿಸಿಸಿಐ ಸ್ಪಷ್ಟನೇ ಕೊಡಬೇಕಿತ್ತು. ಆದ್ರೆ ಬಿಸಿಸಿಐ ಪಾರದರ್ಶಕತೆಯನ್ನಿಟ್ಟುಕೊಂಡಿಲ್ಲ.
ಹಾಗೇ ರೋಹಿತ್ ಶರ್ಮಾ ಮುಂದಿನ ಐಪಿಎಲ್ ಪಂದ್ಯಗಳಲ್ಲಿ ಆಡಿದ್ರೆ ಬಿಸಿಸಿಐ ಮುಜುಗರಕ್ಕೀಡಾಗುವ ಸಾಧ್ಯತೆ ಇದೆ.
ಒಟ್ಟಿನಲ್ಲಿ ರೋಹಿತ್ ಶರ್ಮಾ ತಂಡದಿಂದ ಹೊರಗಿಟ್ಟಿರುವುದು ಹಲವು ಪ್ರಶ್ನೆಗಳು ಮತ್ತು ಟೀಕೆಗಳಿಗೆ ಕಾರಣವಾಗಿವೆ.

Tags: #saakshatvaustreliaaustrelia cricketbcciCricketIndian cricketIPL 2020mumbai indiansrohith sharmateam india
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram