ತೈಲ ಬೆಲೆ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗಿಲ್ಲ : ಬೊಮ್ಮಾಯಿ Basavaraja bommai saaksha tv
ಬೆಂಗಳೂರು : ತೈಲ ಬೆಲೆ ಇಳಿಕೆ ಬಗ್ಗೆ ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರ ಟೀಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಬೆಲೆ ಏರಿಕೆ ಅಥವಾ ಇಳಿಕೆ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ.
ಕಾಂಗ್ರೆಸ್ ಪಕ್ಷದವರು ತೈಲ ಬೆಲೆ ಇಳಿಕೆಗೆ ಟೀಕೆ ಮಾಡ್ತಾ ಇದ್ದಾರೆ. ಉಪ ಚುನಾವಣೆಯಲ್ಲಿ ಸೋತಿದ್ದಕ್ಕೆ ಮಾಡಿದ್ರು ಅಂತ ಹೇಳ್ತಿದ್ದಾರೆ.
ಚುನಾವಣೆಗೂ ಮುನ್ನ ಮಾಡಿದ್ದರೂ ಟೀಕೆ ಮಾಡ್ತಾ ಇದ್ರು. ಟೀಕೆ ಮಾಡಬೇಕು ಅಂತ ಮಾಡಬಾರದು ಎಂದು ಕಿಡಿಕಾರಿದರು.
ಇನ್ನು ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಂಧನದ ಬೆಲೆ 7 ರೂಪಾಯಿ ಕಡಿಮೆ ಆಗಿದೆ.
ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಿ, ಅದನ್ನ ಬಿಟ್ಟು ಟೀಕೆ ಮಾಡಬೇಕು ಅಂತ ಮಾಡಬಾರದು ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.