“ಕಾಂಗ್ರೆಸ್ ಮಾತು ಕೇಳಿದ್ರೆ ಜೀವ ಹೋಗುತ್ತೆ, ಬಿಜೆಪಿ ಮಾತು ಕೇಳಿದ್ರೆ ಜೀವ ಉಳಿಯುತ್ತೆ”
ಚಿತ್ರದುರ್ಗ : ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ. ಬಿಜೆಪಿ ಮಾತು ಕೇಳಿ ಲಸಿಕೆ ಪಡೆದರೆ ಜೀವ ಉಳಿಯುತ್ತವೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಒಂದು ಸಮುದಾಯಕ್ಕೆ ಲಸಿಕೆ ಎಂಬ ಎಂಎಲ್ ಎ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ನಿಮ್ಮ ಬುದ್ಧಿ ಒಳ್ಳೆಯತನಕ್ಕೆ ಮಾತ್ರ ಬಳಸಿ, ಕೋವಿಡ್ ಲಸಿಕೆ ವಿಚಾರದಲ್ಲಿ ಜಾತಿ, ರಾಜಕಾರಣ ಸರಿಯಲ್ಲ.
ಬೇಧವಿಲ್ಲದೆ ಎಲ್ಲಾ ಜಾತಿ, ಧರ್ಮದ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ. ಬಿಜೆಪಿ ಮಾತು ಕೇಳಿ ಲಸಿಕೆ ಪಡೆದರೆ ಜೀವ ಉಳಿಯುತ್ತವೆ ಎಂದು ಹೇಳಿದರು.
ಇನ್ನು ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸೋಲಿನ ಹತಾಶೆ ಕಾಡುತ್ತಿದೆ. ಅದಕ್ಕೆ ಕೋವಿಡ್ ಸಂದರ್ಭ ಬಳಸಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ.
ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪಗೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆಸುತ್ತಿದ್ದಾರೆ. ಕೋವಿಡ್ ಸಂದಿಗ್ಧತೆ ವೇಳೆ ಜನರ ಜೀವದ ಜತೆ ರಾಜಕಾರಣ ಬೇಡ ಎಂದು ಶ್ರೀರಾಮುಲು ಹೇಳಿದರು.
ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾತನಾಡಿ, ಲಾಕ್ ಡೌನ್ ನಿಂದಾಗಿ ಕೋವಿಡ್ ಸೋಂಕು ಕಡಿಮೆಯಾಗಿದೆ. ಹಂತ ಹಂತವಾಗಿ ಲಾಕ್ ಡೌನ್ ಸಡಿಲೀಕರಣ ಮಾಡುತ್ತೇವೆ ಎಂದು ತಿಳಿಸಿದರು.