CONGRESS ಪಕ್ಷಕ್ಕೆ ತಾಕತ್ತಿದೆಯೇ? : BJP ಸವಾಲು
ಬೆಂಗಳೂರು : ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ – ಬಿಜೆಪಿ ಸಮರ ಮುಂದುವರೆದಿದ್ದು, ಕಾಂಗ್ರೆಸ್ ತಾಕತ್ತಿಗೆ ಬಿಜೆಪಿ ಸವಾಲು ಹಾಕಿದೆ. ದೇಶವೇ ಬೆರಗುಗಣ್ಣಿನಿಂದ ನೋಡುತ್ತಿದ್ದ ಉತ್ತರ ಪ್ರದೇಶದ ಚುನಾವಣೆಯಲ್ಲಿ ಮೋದಿ ಅವರು ಮಹತ್ವದ ನಿರ್ಧಾರ ಕೈಗೊಂಡು ವಂಶವಾದಕ್ಕೆ ಪೋಷಣೆ ನೀಡದೇ ಬಲಾಢ್ಯರ ಮಕ್ಕಳಿಗೆ ಟಿಕೆಟ್ ನಿರಾಕರಿಸಿದರು.ಈ ನಿರ್ಧಾರದಿಂದ ಪಕ್ಷಕ್ಕೆ ಸೋಲಾದರೆ ಅದರ ಹೊಣೆ ತಾವೇ ಹೊರುವುದಾಗಿ ಘೋಷಿಸಿದರು.ಕಾಂಗ್ರೆಸ್ ಪಕ್ಷಕ್ಕೆ ಈ ಧೈರ್ಯ ತೋರಿಸುವ ತಾಕತ್ತಿದೆಯೇ ಎಂದು ಕಾಂಗ್ರೆಸ್ ಗೆ ಬಿಜೆಪಿ ಸವಾಲ್ ಹಾಕಿದೆ.
ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ.. ಕೆಲವು ಕುಟುಂಬಗಳಿಗೆ ಕಾಂಗ್ರೆಸ್ ನಿಯಮ ಅನ್ವಯವಾಗುವುದಿಲ್ಲ ಎಂಬ ಮಾತಿನ ಅರ್ಥವೇನು? ಯಾವುದು ಆ ಕುಟುಂಬಗಳು? ಇಡಿ ದೇಶಕ್ಕೆ ಕುಟುಂಬ ರಾಜಕಾರಣವನ್ನು ಪರಿಚಯಿಸಿದ ಕಾಂಗ್ರೆಸ್ ಪಕ್ಷಕ್ಕೆ ಈಗ ಅದನ್ನು ಪೋಷಿಸುವುದು ಅನಿವಾರ್ಯವಾಗಿದೆ. ಕಾಂಗ್ರೆಸ್ ನೀತಿಯ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದರೂ ವಂಶವಾದವನ್ನು ಮಾತ್ರ ಬಿಡುವುದಿಲ್ಲ!
ಕೆಲವು ಕುಟುಂಬಗಳಿಗೆ ಕಾಂಗ್ರೆಸ್ ನಿಯಮ ಅನ್ವಯವಾಗುವುದಿಲ್ಲ ಎಂಬ ಮಾತಿನ ಅರ್ಥವೇನು? ಯಾವುದು ಆ ಕುಟುಂಬಗಳು?
ಇಡಿ ದೇಶಕ್ಕೆ ಕುಟುಂಬ ರಾಜಕಾರಣವನ್ನು ಪರಿಚಯಿಸಿದ ಕಾಂಗ್ರೆಸ್ ಪಕ್ಷಕ್ಕೆ ಈಗ ಅದನ್ನು ಪೋಷಿಸುವುದು ಅನಿವಾರ್ಯವಾಗಿದೆ.
ಕಾಂಗ್ರೆಸ್ ನೀತಿಯ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದರೂ ವಂಶವಾದವನ್ನು ಮಾತ್ರ ಬಿಡುವುದಿಲ್ಲ!
— BJP Karnataka (@BJP4Karnataka) May 15, 2022
“ಧೃತರಾಷ್ಟ್ರ ಮೋಹ” ಎಂಬ ಮಾತು ರಾಜಕಾರಣದಲ್ಲಿ ಸದಾ ಜೀವಂತವಾಗಿರಬೇಕೆಂದು ಕಾಂಗ್ರೆಸ್ ಬಯಸುತ್ತದೆ!ಏಕೆಂದರೆ ತಮ್ಮ ನಂತರ ತಮ್ಮ ಪಳಯುಳಿಕೆಗಳನ್ನೂ ಅಧಿಕಾರದಲ್ಲಿ ಪ್ರತಿಷ್ಠಾಪಿಸಬೇಕೆಂಬ ವಾಂಛೆ ಕಾಂಗ್ರೆಸ್ ರಕ್ತದಲ್ಲಿಯೇ ಇದೆ.ನೆಹರು, ಇಂದಿರಾ, ರಾಜೀವ್, ಸೋನಿಯಾ, ರಾಹುಲ್, ಪ್ರಿಯಾಂಕ ಇವೆರಲ್ಲರೂ ಇದಕ್ಕೆ ಜ್ವಲಂತ ಉದಾಹರಣೆಗಳು ಎಂದು ಬಿಜೆಪಿ ಕುಟುಕಿದೆ.
congress bjp tweet war bangalore karnataka