Congress | ಮಿತಿ ಮೀರುತ್ತಿದೆ ಮಹಿಳೆಯರ ಮೇಲೆ ಬಿಜೆಪಿಗರ ದರ್ಪ
ಬೆಂಗಳೂರು : ಶಾಸಕ ಅರವಿಂದ ಬೆಲ್ಲದ್ ಹೆಸರಲ್ಲಿ ಡೆತ್ ನೋಟ್ ಬರೆದು ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.
ಈ ಸಂಬಂಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ.
ಶಾಸಕ ಅರವಿಂದ್ ಬೆಲ್ಲದ್ ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನ ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬಸವರಾಜ ಬೊಮ್ಮಾಯಿ ಅವರೇ? ಇದರ ವಿರುದ್ದ ನಿಮ್ಮ ಕ್ರಮವೇನು ಎಂದು ಪ್ರಶ್ನಿಸಿದೆ.
ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್ನೋಟ್ನಲ್ಲಿ ಸ್ಪಷ್ಟವಾಗಿದೆ,@BSBommai ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ?#SayCM
— Karnataka Congress (@INCKarnataka) October 30, 2022
ಇನ್ನು ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್ನೋಟ್ನಲ್ಲಿ ಸ್ಪಷ್ಟವಾಗಿದೆ,
ಬಸವರಾಜ ಬೊಮ್ಮಾಯಿ ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ ಎಂದು ಪ್ರಶ್ನಿಸಿದ್ದಾರೆ.