ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲೋಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಹೀಗಾಗಿಯೇ ಕಾಂಗ್ರೆಸ್ ನ ಹಿರಿಯ ನಾಯಕರು ಲೋಕಸಭೆಗೆ ಸ್ಪರ್ಧಿಸುವ ಬದಲು ರಾಜ್ಯಸಭೆಗೆ ಹೋಗುತ್ತಿದ್ದಾರೆ. ರಾಹುಲ್ 2019ರಲ್ಲಿ ಅಮೇಥಿಯಿಂದ ಓಡಿಹೋದಂತೆ ಕೇರಳದ ವಯನಾಡಿನಲ್ಲಿಯೂ ಜನ ಬೆಂಬಲ ಪಡೆಯುವುದು ಕಷ್ಟವಾಗಿದೆ. ಹೀಗಾಗಿ ಅಲ್ಲಿಂದಲೂ ಓಡಿ ಹೋಗುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
ಇಂಡಿಯಾ ಒಕ್ಕೂಟದ ನಾಯಕರು ಯಾರು ಎಂದು ಹೇಳಲು ಒಕ್ಕೂಟಕ್ಕೆ ಸಾಧ್ಯವಾಗುತ್ತಿಲ್ಲ. ಈ ಮೈತ್ರಿಕೂಟಕ್ಕೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗದ ಪರಿಸ್ಥಿತಿ ಇದೆ. ಹಿರಿಯ ನಾಯಕರು ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುತ್ತಿಲ್ಲ. ಭಾರತದ ಪ್ರಜಾಸತ್ತಾತ್ಮಕ ಶಕ್ತಿ ಹೆಚ್ಚುತ್ತಿದೆ ಎಂಬುವುದನ್ನು ಹೆಚ್ಚಿನ ಮತದಾರರು ತೋರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.