ಒಳ ರಾಜಕಾರಣ ಮಾಡಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ : ಕಟೀಲ್
ಉಡುಪಿ : ಕಾಂಗ್ರೆಸ್ ನಲ್ಲಿ ನಾಯಕನ ಸೀಟ್ ಗೆ ಟವೆಲ್ ಹಾಕಲು ಈಗಾಗಲೇ ಆರಂಭವಾಗಿದೆ. ಪಕ್ಷದಲ್ಲಿನ ಒಳ ರಾಜಕಾರಣ ಮಾಡಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ನಳಿನ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ನಾವು ವ್ಯವಸ್ಥಿತ ರೀತಿಯಲ್ಲಿ ಚುನಾವಣೆ ಎದುರಿಸಿದ್ದೇವೆ. ಆದ್ರೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ವೈಯಕ್ತಿಕ ಪ್ರತಿಷ್ಠೆಯಿಂದ ಕಾಂಗ್ರೆಸ್ ಸೋತಿದೆ.
ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಸೋಲುಬೇಕೆಂದು ಸಿದ್ದರಾಮಯ್ಯ, ಶಿರಾದಲ್ಲಿ ಸೋಲಬೇಕೆಂದು ಡಿಕೆ ಶಿವಕುಮಾರ್ ಬಯಸಿದ್ದರು.
ಕಾಂಗ್ರೆಸ್ ನಲ್ಲಿ ನಾಯಕನ ಸೀಟ್ ಗೆ ಟವೆಲ್ ಹಾಕಲು ಈಗಾಗಲೇ ಆರಂಭವಾಗಿದೆ. ಕಾಂಗ್ರೆಸ್ ನಲ್ಲಿ ಒಳ ರಾಜಕಾರಣ ಮಾಡಿದ್ದೇ ಅವರ ಸೋಲಿಗೆ ಕಾರಣ ಎಂದು ನಳಿನ್ ಅಭಿಪ್ರಾಯಪಟ್ಟರು.
ಇದೇ ವೇಳೆ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ ಬಗ್ಗೆ ಮಾತಾಡಿ, ಸಂಪತ್ ರಾಜ್ ನಾಪತ್ತೆ ವಿಚಾರದಲ್ಲಿ ಕಾಂಗ್ರೆಸ್ ಕೈವಾಡವಿದೆ. ಅಖಂಡ ಶ್ರೀನಿವಾಸ ಮೂರ್ತಿ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಉತ್ತರ ನೀಡಬೇಕು.
ಸಚಿವ ಸಂಪುಟಕ್ಕೆ ಲಾಬಿ ಶುರು: ಮತ್ತೆ ಸೀನಿಯಾರಿಟಿ ಕಾರ್ಡ್ ಎಸೆದ ಜಿ.ಎಚ್. ತಿಪ್ಪಾರೆಡ್ಡಿ
ಘಟನೆಯಲ್ಲಿ ಸಂಪತ್ ರಾಜ್ ವಿರುದ್ಧ ಅಖಂಡ ಶ್ರೀನಿವಾಸ ಮೂರ್ತಿ ಅವರೇ ದೂರು ನೀಡಿದ್ದಾರೆ. ಆದರೆ ಈಗ ಸಂಪತ್ ರಾಜ್ ನಾಪತ್ತೆಯಾಗಿದ್ದಾರೆ.
ಆದರೆ ಅವರು ನಾಪತ್ತೆಯಾಗಿಲ್ಲ, ಮನೆಯಲ್ಲಿದ್ದಾರೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಡಿ ಕೆ ಶಿವಕುಮಾರ್ ಅವರಿಗೆ ನೈತಿಕತೆ ಇದ್ದರೆ ಸಂಪತ್ ರಾಜ್ ಗೆ ಶರಣಾಗಲು ಹೇಳಬೇಕಿತ್ತು ಎಂದು ಕಟೀಲ್ ಹೇಳಿದರು.
ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಬಿಜೆಪಿ ಬೆಂಬಲ ನೀಡಲಿದೆ.
ಹಿಂದೂಗಳ ಹಬ್ಬಕ್ಕೆ ಶಾಸ್ತ್ರ ಹೇಳಬೇಡಿ, ಪಟಾಕಿ ಬ್ಯಾನ್ ವಾಪಸ್ ಪಡೀರಿ: ಬಿಎಸ್ವೈಗೆ ಯತ್ನಾಳ್ ತಾಕೀತು
ಆದ್ರೆ ರಾಜಕೀಯವಾಗಿ ಬೆಂಬಲ ನೀಡವುದಿಲ್ಲ. ಅವರನ್ನು ಖಂಡಿತವಾಗಿಯೂ ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ಆದರೆ ಒಬ್ಬ ಶಾಸಕನಿಗೆ ಹೀಗೆ ಆದರೆ ಸಾಮಾನ್ಯರ ಗತಿಯೇನು ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel