ಕಾಂಗ್ರೆಸ್ ಪಕ್ಷವು ದೇಶದ ಜನರ ಮೂರ್ನಾಲ್ಕು ತಲೆಮಾರುಗಳ ಜೀವನ ಹಾಳು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಬಿಹಾರದ ಚಂಪಾರಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, 60 ವರ್ಷಗಳಲ್ಲಿ ದೊಡ್ಡ ಅರಮನೆಗಳನ್ನು ನಿರ್ಮಿಸಿದ್ದಾರೆ. ಸ್ವಿಸ್ ಬ್ಯಾಂಕ್ ನಲ್ಲಿ ಖಾತೆಗಳನ್ನು ತೆರೆದಿದ್ದಾರೆ. ನಿಮ್ಮ ಮಕ್ಕಳಿಗೆ ಓದಲು ಶಾಲೆ ಇರಲಿಲ್ಲ. ಆದರೆ ಅವರ ಮಕ್ಕಳು ವಿದೇಶದಲ್ಲಿ ಓದುತ್ತಿದ್ದರು. ಬಡವರು ಕಷ್ಟದಲ್ಲಿದ್ದರು. ಅವರ ಮಕ್ಕಳು ಸುಖವಾಗಿದ್ದರು ಎಂದು ಆರೋಪಿಸಿದ್ದಾರೆ.
ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಆಕ್ರೋಶ ವ್ಯಕ್ತಪಡಿಸಿದ ಅವರು, ಬೆಳ್ಳಿ ಚಮಚದೊಂದಿಗೆ ಜನಿಸಿದವರಿಗೆ ಕಠಿಣ ಪರಿಶ್ರಮದ ಕುರಿತು ಗೊತ್ತಿಲ್ಲ. ಜಂಗಲ್ ರಾಜ್ ನ ಉತ್ತರಾಧಿಕಾರಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ಮೇ 25 ರಂದು ಆರನೇ ಹಂತದ ಮತದಾನ ನಡೆಯಲಿದ್ದು, ಜೂನ್ 1ರಂದು ಏಳನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ. ಪ್ರಧಾನಿ ಮೋದಿ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ.