ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ : ರಮಾನಾಥ ರೈ
ಮಂಗಳೂರು : ದೇಶದ ಜನತೆಗೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆಯಿದೆ. ಆದ್ದರಿಂದ ಕಾಂಗ್ರೆಸ್ ಮತ್ತೆ ಫಿನಿಕ್ಸ್ ನಂತೆ ಎದ್ದು ಬರಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಇಂಟಕ್, ಯೂತ್ ಇಂಟಕ್ ಮತ್ತು ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಲೇಡಿಗೋಷನ್ ಆಸ್ಪತ್ರೆಯ ಸಹಯೋಗದೊಂದಿಗೆ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ ಹಾಗೂ ಇಂಟಕ್ ರಾಷ್ಟ್ರೀಯ ನಾಯಕ ರಾಕೇಶ್ ಮಲ್ಲಿಯವರ 50ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದರಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಇಂದು ಕಾಂಗ್ರೆಸ್ ಗೆ ಅಧಿಕಾರ ಇಲ್ಲದಿರಬಹುದು. ಈ ಪರಿಸ್ಥಿತಿ ಹಿಂದೆಯೂ ಬಂದಿತ್ತು. ದೇಶದಲ್ಲಿ ಕಾಂಗ್ರೆಸ್ ವಿಭಜನೆಯಾಗಿ ಅನೇಕ ನಾಯಕರು ಪಕ್ಷ ತೊರೆದು ಹೋಗಿದ್ದರು.
ನಮ್ಮದು ಪ್ರೀತಿಸುವ ಹಿಂದುತ್ವ, ಬಿಜೆಪಿಯದ್ದು ದ್ವೇಷಿಸುವ ಹಿಂದುತ್ವ : ಸಿದ್ದರಾಮಯ್ಯ ಹಿಂದುತ್ವ ಪಾಠ
ಆದರೆ ಕಾಂಗ್ರೆಸ್ ಮಾತ್ರ ಅವಿನಾಶಿಯಾಗಿ ಬೆಳೆಯುತ್ತಿದೆ. ಕಾಂಗ್ರೆಸ್ ನಾಶವಾದಲ್ಲಿ ಮತೀಯವಾದಿಗಳಿಗೆ ಅಧಿಕಾರಕ್ಕೆ ಬರಲು ಸುಲಭವಾಗುತ್ತದೆ. ಕಾಂಗ್ರೆಸ್ ಸೋತಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ.
ಆದರೆ ಬಿಜೆಪಿ ಸೋತಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೆ ಹೊರತು ಇನ್ನಾವುದೇ ಪಕ್ಷಗಳು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿದ ಕಾಂಗ್ರೆಸ್ ಗೆ ಇಂದು ಇತರ ಪಕ್ಷಗಳು ಪ್ರಜಾಪ್ರಭುತ್ವದ ಧೋರಣೆಗಳನ್ನು ಬೋಧನೆ ಮಾಡಲು ಹೊರಟಿವೆ.
ದೇಶಕ್ಕೆ ಕಾಂಗ್ರೆಸ್ ಕೇವಲ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟಿಲ್ಲ. ಜನತೆಗೆ ಸಾಮಾಜಿಕ ಆರ್ಥಿಕ ಸ್ವಾತಂತ್ರ್ಯವನ್ನೂ ದೊರಕಿಸಿಕೊಟ್ಟಿದೆ. ಕಾಂಗ್ರೆಸ್ ಗೆ ಯಾರ ಬೋಧನೆಯ ಅವಶ್ಯಕತೆಯೂ ಇಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.
ದೇಶದಲ್ಲಿ ಕಾಂಗ್ರೆಸ್ ನಾಶವಾಗುತ್ತೆ ಅಂತ ತಿಳಿದುಕೊಂಡಿದ್ದರೇ ಅದು ಮೂರ್ಖತನ. ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯವಾಗಿದೆ. ಆದ್ದರಿಂದ ಕಾಂಗ್ರೆಸ್ ಮತ್ತೆ ಫಿನಿಕ್ಸ್ ನಂತೆ ಎದ್ದು ಬರಲಿದೆ ಎಂದು ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









