ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ದೇಶಾದ್ಯಂತ ಪ್ರತಿಭಟನೆ…
ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಬೆಲೆ ಏರಿಕೆ ಹಾಗೂ ಹಣದುಬ್ಬರದ ವಿರುದ್ಧ ಕಾಂಗ್ರೆಸ್ ಪಕ್ಷ ಗುರುವಾರ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ರಾಹುಲ್ ಗಾಂಧಿ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ರಸ್ತೆಗಿಳಿದಿದ್ದಾರೆ. ಪ್ರತಿಭಟನೆ ವೇಳೆ ಎಲ್ಲ ಮುಖಂಡರು ‘ಚುನಾವಣೆ ಮುಗಿಯಿತು ಲೂಟಿ ಚಾಲು’ ಎಂಬ ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂತು.
ಪ್ರತಿ ದಿನ ಅನಗತ್ಯವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಹೀಗಾಗಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಇದ್ದ ಬೆಲೆಯನ್ನು ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತಿದೆ.
https://twitter.com/ANI/status/1509386153862254601?ref_src=twsrc%5Etfw%7Ctwcamp%5Etweetembed%7Ctwterm%5E1509386153862254601%7Ctwgr%5E%7Ctwcon%5Es1_&ref_url=https%3A%2F%2Fwww.newindianexpress.com%2Fnation%2F2022%2Fmar%2F31%2Fcongress-leaders-stage-protest-against-rising-fuel-prices-2436271.html
ಕಳೆದ 10 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 9 ಬಾರಿ ಹೆಚ್ಚಿಸಲಾಗಿದೆ ಮತ್ತು ಮಧ್ಯಮ ವರ್ಗ ಮತ್ತು ಬಡ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವುದನ್ನು ನಿಲ್ಲಿಸಬೇಕು ಎಂಬುದು ನಮ್ಮ ಬೇಡಿಕೆ. ನಮ್ಮ ಪ್ರತಿಭಟನೆಯು ದೇಶಾದ್ಯಂತ ಮುಂದುವರಿಯುತ್ತದೆ ಮತ್ತು ದೀರ್ಘಕಾಲದವರೆಗೆ ಇರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿದಾಗ ಎಲ್ಲವೂ ಹೆಚ್ಚಾಗುತ್ತದೆ: ತರೂರ್
ಕಾಂಗ್ರೆಸ್ ನಾಯಕ ಶಶಿ ತರೂರ್ ಮಾತನಾಡಿ, ಯಾವಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುತ್ತದೆಯೋ ಆಗ ಎಲ್ಲದರ ಬೆಲೆಯೂ ಹೆಚ್ಚಾಗುತ್ತದೆ. ಕಚ್ಚಾ ತೈಲದ ಬೆಲೆ ವಿಶ್ವದಲ್ಲೇ ಅತ್ಯಂತ ಕಡಿಮೆ ಇದ್ದಾಗಲೂ ಈ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿತ್ತು. 101 ರೂ.ಗಳ ತೈಲವನ್ನು ತುಂಬುವಲ್ಲಿ 52 ರೂ.ಗಳು ಅಬಕಾರಿ ತೆರಿಗೆಯಾಗಿ ಸರ್ಕಾರಕ್ಕೆ ಹೋಗುತ್ತಿದೆ ಎಂದು ತರೂರ್ ಹೇಳಿದರು.








