ಬೆಂಗಳೂರು: ಒಂದೆಡೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ (R Ashok) ನೇತೃತ್ವದಲ್ಲಿ ವಿಧಾನಸೌಧದ (Vidhana Soudha) ಆವರಣದಲ್ಲಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆ ವೇಳೆ ಸಿಎಂ ಕಚೇರಿಗೆ ನುಗ್ಗಲು ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ಆದರೂ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಪೊಲೀಸರನ್ನು ತಳ್ಳಿ ಮುಂದೆ ಹೋಗಿದ್ದಾರೆ. ಕೂಡಲೇ ಪೊಲೀಸರು ವಿಧಾನಸೌಧದ ದಕ್ಷಿಣ ದ್ವಾರದ ಬಾಗಿಲನ್ನು ಹಾಕಿದರು. ಆನಂತರ ಬಿಜೆಪಿ ನಾಯಕರು ವಿಧಾನಸೌಧದ ದಕ್ಷಿಣ ದ್ವಾರದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಈ ವೇಳೆ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಮಾಜಿ ಸಿಎಂ ಯಡಿಯರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ನಾಯಕರು ಇದ್ದರು.