ಚಾಮರಾಜನಗರ Chamarajanagar ಜಿಲ್ಲಾಸ್ಪತ್ರೆಗೆ ಕಾಂಗ್ರೆಸ್ ನಾಯಕರ ಭೇಟಿ : ಅಳಲು ತೋಡಿಕೊಂಡ ಜನ
ಚಾಮರಾಜನಗರ : ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ 24 ಮಂದಿ ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಬಗ್ಗೆ ಖುದ್ದು ಪರಿಶೀಲನೆ ನಡೆಸಲು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಜಮಾಯಿಸಿದ ಸಾರ್ವಜನಿಕರು ಕೋವಿಡ್ ಆಸ್ಪತ್ರೆಯಲ್ಲಿ ನಡೆದಿರುವ ಕೋವಿಡ್ ಸೋಂಕಿತರ ಸಾವಿಗೆ ಜಿಲ್ಲಾಧಿಕಾರಿ , ಉಸ್ತುವಾರಿ ಸಚಿವರೇ ಹೊಣೆಗಾರರು ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಅಲ್ಲದೆ ಮೃತ ಕೋವಿಡ್ ಸೋಂಕಿತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದರು. ಈ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಲಾಯಿತು.
ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ದೃವನಾರಾಯಣ್, ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ , ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಇದ್ದರು.