ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆ ಚುನಾವಣೆ ನಡೆದಿದ್ದು, ಒಂದೇ ಒಂದು ಸ್ಥಾನಕ್ಕೆ ಹೈಡ್ರಾಮಾ ನಡೆದಿದೆ.
ಈ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದು, 9 ಶಾಸಕರು ಕಾಂಗ್ರೆಸ್ಸಿಗೆ ಕೈಕೊಟ್ಟು ಬಿಜೆಪಿ ಗೆಲ್ಲುವಂತೆ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ಸಿನ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ. ಈ ಚುನಾವಣೆಯ ಸೋಲಿನಿಂದಾಗಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನದ ಅಂಚಿನಲ್ಲಿದೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದ್ದು, ವಿಶ್ವಾಸ ಮತ ಯಾಚಿಸಬೇಕೆಂದು ಮಾಜಿ ಸಿಎಂ ಜೈರಾಮ್ ಠಾಕೂರ್ ಆಗ್ರಹಿಸಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ, 68 ಸ್ಥಾನಗಳಲ್ಲಿ ಕಾಂಗ್ರೆಸ್ 40 ಸ್ಥಾನ ಗೆದ್ದರೆ ಬಿಜೆಪಿ 25 ಸ್ಥಾನ ಗೆದ್ದಿತ್ತು.