ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ಈಗಾಗಲೇ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್, ಇನ್ನೂ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಬೇಕಿದೆ. ಈ ಪೈಕಿ ಕಗ್ಗಂಟಾಗಿರುವ ಕ್ಷೇತ್ರ ಬಿಟ್ಟು 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಬಹುತೇಕ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಕ್ಷೇತ್ರ ಬಿಟ್ಟು ಇನ್ನುಳಿದ ಕ್ಷೇತ್ರಗಳಿಗೆ ಅಂತಿಮಗೊಳಿಸಲಾಗಿದೆ.
ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಂದಾಗಿ ಟಿಕೆಟ್ ಆಯ್ಕೆ ಕಗ್ಗಂಟಾಗಿಯೇ ಮುಂದುವರೆದಿದೆ. ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಸುನಿಲ್ ಬೋಸ್ಗೆ ಪಕ್ಷದೊಳಗೆ ವಿರೋಧವಿರುವ ಹಿನ್ನೆಲೆಯಲ್ಲಿ ಆಯ್ಕೆ ಅಂತಿಮವಾಗಿಲ್ಲ. ಬಳ್ಳಾರಿ ಕ್ಷೇತ್ರದ್ದು ಕೂಡ ಇದೇ ರೀತಿ ಕಗ್ಗಂಟಾಗಿದೆ.
ಸಿಇಸಿ ಅಂತಿಮಗೊಳಿಸಿರುವ ಅಭ್ಯರ್ಥಿಗಳ ವಿವರ
• ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ
• ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
• ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್
• ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ
• ಮೈಸೂರು -ಎಂ.ಲಕ್ಷ್ಮಣ್
• ರಾಯಚೂರು -ಜಿ.ಕುಮಾರ ನಾಯಕ್
• ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್
• ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ
• ಬೆಳಗಾವಿ – ಮೃಣಾಲ್ ಹೆಬ್ಬಾಳಕರ್
• ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
• ಬಾಗಲಕೋಟೆ – ಸಂಯುಕ್ತಾ ಪಾಟೀಲ್
• ಧಾರವಾಡ – ವಿನೋದ್ ಅಸುಟಿ
• ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
• ಕೊಪ್ಪಳ – ರಾಜಶೇಖರ ಹಿಟ್ನಾಳ್
• ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
• ಬೀದರ್ – ರಾಜಶೇಖರ್ ಪಾಟೀಲ್
• ದಕ್ಷಿಣ ಕನ್ನಡ – ಪದ್ಮರಾಜ್