ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಚಾಲನೆ
ರಾಮನಗರ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಸಂಗಮದಲ್ಲಿ ಚಾಲನೆ ದೊರಕಿದೆ. ಪಾದಯಾತ್ರೆಗೆ ರೈತ ಗೀತೆ ಮೂಲಕವಾಗಿ ಚಾಲನೆ ನೀಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ನಮ್ಮ ನೀರು, ನಮ್ಮ ಹಕ್ಕು ಧ್ಯೇಯದೊಂದಿಗೆ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದೆ.
ಜನವರಿಗೆ 19ರವರೆಗೆ ನಡೆಯಲಿರುವ ಕಾಂಗ್ರೆಸ್ ಪಾದಯಾತ್ರೆಗೆ ಗಿಡಕ್ಕೆ ನೀರು ಹಾಕಿ ನಗಾರಿ ಬಾರಿಸುವ ಮೂಲಕ ಚಾಲನೆ ದೊರಕಿದೆ.
ಕಾಂಗ್ರೆಸ್ ನಾಯಕರು ಮೊದಲ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮಾಡಲಿದ್ದಾರೆ. ಸಂಗಮದಿಂದ ದೊಡ್ಡ ಆಲಹಳ್ಳಿಯವರೆಗೂ ಈ ಪಾದಯಾತ್ರೆ ನಡೆಯಲಿದೆ.
ಕಾಂಗ್ರೆಸ್ ಪಾದಯಾತ್ರೆಗೆ ವಿವಿಧ ಕಲಾ ತಂಡಗಳು ಸಾಥ್ ಕೊಟ್ಟಿದ್ದು, ಸಂಜೆಯ ವೇಳೆಗೆ ಕನಕಪುರವನ್ನು ತಲುಪಲಿದ್ದಾರೆ.