ಕಾಂಗ್ರೆಸ್ ಗೆ ಮೇಜರ್ ಸರ್ಜರಿ ಅಗತ್ಯ : ಎಂ.ವೀರಪ್ಪ ಮೊಯ್ಲಿ
ನವದೆಹಲಿ : ಸದ್ಯದ ಸ್ಪರ್ಧೆ ಎದುರಿಸಲು ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿಯ ಅಗತ್ಯವಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯ್ಲಿ ಪ್ರತಿಪಾದಿಸಿದ್ದಾರೆ.
ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಬಗ್ಗೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೊಯ್ಲಿ, ಈ ಮೇಲಿನ ಹೇಳಿಕೆ ನೀಡಿದಾರೆ.
ನಾಯಕರಿಗೆ ಜವಾಬ್ದಾರಿಯನ್ನು ವಹಿಸುವಾಗ ಉನ್ನತ ನಾಯಕತ್ವ ಸೈದ್ಧಾಂತಿಕ ಬದ್ಧತೆಗೆ ಆದ್ಯತೆ ನೀಡಬೇಕು. ಜಿತಿನ್ ಪ್ರಸಾದ್ ಎಲ್ಲಕ್ಕಿಂತ ಹೆಚ್ಚಾಗಿ ವೈಯಕ್ತಿಕ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದಾರೆ.
ಉತ್ತರ ಪ್ರದೇಶದ ನಾಯಕನ ಸೈದ್ಧಾಂತಿಕ ಬದ್ಧತೆಯು ಮೊದಲಿನಿಂದಲೂ ಶಂಕಿತವಾಗಿದೆ ಮತ್ತು ಅವರ ಉಸ್ತುವಾರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಪಕ್ಷವು ಶೂನ್ಯ ಸ್ಥಾನಗಳನ್ನು ಗೆದ್ದಿದೆ ಎಂದರು.
ಕಾಂಗ್ರೆಸ್ ಕೆಲವು ವಿಷಯಗಳನ್ನು ಪುನರ್ವಿಮರ್ಶಿಸಬೇಕು ಮತ್ತು ಮರು-ಕಾರ್ಯತಂತ್ರ ಮಾಡಬೇಕಾಗಿದೆ.
ಸ್ಪರ್ಧೆ ಎದುರಿಸಲು ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿಯ ಅಗತ್ಯವಿದೆ ಎಂಬುದಾಗಿ 2019 ರ ಚುನಾವಣೆಯಲ್ಲಿ ಸೋತಾಗಲೇ ಸಲಹೆ ಮಾಡಿದ್ದೆ.
ಆದಾಗ್ಯೂ, ಅದು ಧೀರ್ಘ ವಿಳಂಬವಾಗಿದೆ. ಇದೀಗ ಅದು ಅಗತ್ಯವಾಗಿದೆ ಎಂದು ಹೇಳಿದರು. ಅಲ್ಲದೆ ಮುಂದಿನ ವರ್ಷ ಏಳು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಎದುರಿಸಬೇಕಾಗಿದೆ.
ಏಳು ರಾಜ್ಯಗಳಲ್ಲಿ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಕಷ್ಟವಾಗಲಿದೆ ಎಂದು ಹೇಳಿದರು.