ಪ್ರಚೋದನಾತ್ಮಕ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಮಂಗಳೂರಲ್ಲಿ ಪ್ರತಿಭಟನೆ
ಮಂಗಳೂರು : ಕ್ರೈಸ್ತರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿದೆ.
ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತ ಘಟಕದಿಂದ ಮಂಗಳೂರು ನಗರದ ಮ.ನ.ಪಾ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಸಂಸದ ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ.
ಹೀಗಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮನೆ ಮನೆಯಲ್ಲಿ ಚಂದಾ ಎತ್ತಿ ಪ್ರತಾಪ್ ಸಿಂಹ ಅವರಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ಕಿಡಿಕಾರಿದ್ರು.
ಪ್ರತಾಪ್ ಸಿಂಹ ಅವರು ತಮ್ಮ ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಹೀಗಾಗಿ ಇವರಿಗೆ ಕೂಡಲೇ ಚಿಕತ್ಸೆ ಅವಶ್ಯಕತೆ ಇದೆ.
ಇಲ್ಲದಿದ್ದರೆ, ಇಂತಹ ದುಷ್ಕøತ್ಯಗಳು ಮುಂದುವರಿಯುವ ಸಾಧ್ಯತೆ ಇದೆ. ಅವಿವೇಕಿ ಸಂಸದರಿಗೆ ಸಂಸತ್ನಲ್ಲಿ ಕುಳಿತುಕೊಳ್ಳುವ ಯೋಗ್ಯತೆ ಇಲ್ಲ.
ರಾಜ್ಯಪಾಲರು ಕೂಡಲೇ ಸಂಸದರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ರಮಾನಾಥ ರೈ ಮಾತನಾಡಿದ್ದು, ಒಂದು ಸಮುದಾಯದವರಿಗೆ ನೋವಾಗುವಂತೆ ಸಂಸದರು ಹೇಳಿಕೆ ಕೊಟ್ಟಿದ್ದು, ಅವರನ್ನ ಬಿಜೆಪಿ 24 ಗಂಟೆಗಳಲ್ಲಿ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದಾರೆ.