Congress protest | ರಾಹುಶಾಂತಿಗೋಸ್ಕರ ಸಮಾಜದ ಶಾಂತಿ ಕದಡುತ್ತಿರುವುದು ಖಂಡನೀಯ
ಬೆಂಗಳೂರು : ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದ್ದು, ರಾಹುಶಾಂತಿಗೋಸ್ಕರ ಸಮಾಜದ ಶಾಂತಿ ಕದಡುತ್ತಿರುವುದು ಖಂಡನೀಯ ಎಂದು ಆಕ್ರೋಶ ಹೊರಹಾಕಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಹುಲ್ ವಿಚಾರಣೆ ಖಂಡಿಸಿ, ಡೆಲ್ಲಿಯ ಇಡಿ ಮುಖ್ಯ ಕಚೇರಿ ಹಾಗೂ ದೇಶದ ವಿವಿಧ ಇಡಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ಉಪ್ಪು ತಿಂದ ಮೇಲೆ ನೀರು ಕುಡಿಯ ಬೇಕು, ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಬೇಕು. ರಾಹುಲ್ ಗಾಂಧಿ ನೇತೃತ್ವದ ಯಂಗ್ ಇಂಡಿಯಾ ಸಂಸ್ಥೆ ಅಕ್ರಮ ಹಣ ವರ್ಗಾವಣೆ ಮಾಡಿರುವುದಕ್ಕೆ ಜಾರಿ ನಿರ್ದೇಶನಾಲಯದ ಬಳಿ ಸಾಕಷ್ಟು ಸಾಕ್ಷಿಗಳಿವೆ. ಸತ್ಯ ಅನಾವರಣಗೊಳಿಸುವುದು ಕಾಂಗ್ರೆಸ್ ದೃಷ್ಟಿಯಲ್ಲಿ ಮಾತ್ರ ದ್ವೇಷದ ರಾಜಕಾರಣ!
ನಕಲಿ ಗಾಂಧಿ ಕುಟುಂಬದ ಬುಡಕ್ಕೆ ಬೆಂಕಿ ಬಿದ್ದಾಗ ಮಾತ್ರ ಪಾದಯಾತ್ರೆಯ ನೆನಪಾಗುತ್ತದೆ.ದೇಶದಲ್ಲಿ ಉಗ್ರರ ದಾಳಿಯಾದಾಗ, ರೈತರ ಸರಣಿ ಆತ್ಮಹತ್ಯೆ ನಡೆದಾಗ, ಶಾಂತಿದೂತರು ಕಲ್ಲು ತೂರಾಟ ನಡೆಸಿದಾಗ ಕಾಂಗ್ರೆಸ್ಸಿಗರಿಗೆ ಪಾದಯಾತ್ರೆಯ ನೆನಪಾಗುವುದಿಲ್ಲ. ಜನವಿರೋಧಿ ನಿಲುವು ಏಕೆ?
ಡಿಕೆಶಿ ಅವರೇ,
ಕೇವಲ ಇಬ್ಬರು ವ್ಯಕ್ತಿಗಳಿಗಾಗಿ, ಕೇವಲ ಒಂದು ಕುಟುಂಬಕ್ಕಾಗಿ ಕೆಲಸ ಕಾರ್ಯ ಬಿಟ್ಟು, ಜನಸಾಮಾನ್ಯರ ಕೆಲಸಕ್ಕೂ ಅಡ್ಡಿ ಮಾಡಿಕೊಂಡು, ರಸ್ತೆಗಿಳಿದರೆ ಜನರು ನಿಮ್ಮನ್ನು ಕ್ಷಮಿಸುವರೇ?
ಅಲ್ಲೆಲ್ಲೋ ಬೆಂಕಿ ಬಿದ್ದರೆ, ನಮ್ಮ ನಾಡಿನಲ್ಲಿ ಏಕೆ ಬಾವಿ ತೋಡುತ್ತೀರಿ?#FakeGandhisBachaoToolKit
— BJP Karnataka (@BJP4Karnataka) June 13, 2022
ಗಾಂಧಿ ಕುಟುಂಬದ ಪರವಾಗಿ ಭ್ರಷ್ಟಾಧ್ಯಕ್ಷ ಡಿಕೆಶಿ ಮಾಡುವ ಭಾಷಣ “ಕಳ್ಳರು, ಕಳ್ಳರು ಸೇರಿ ಸಂತೆಗೆ ಹೋದಂತೆ” ಇದೆ. ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ವ್ಯಕ್ತಿಯೇ ಇಡಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿರುವುದು ಗೂಂಡಾಗಿರಿಯಲ್ಲದೇ ಮತ್ತೇನು?
ಡಿಕೆಶಿ ಅವರೇ, ಕೇವಲ ಇಬ್ಬರು ವ್ಯಕ್ತಿಗಳಿಗಾಗಿ, ಕೇವಲ ಒಂದು ಕುಟುಂಬಕ್ಕಾಗಿ ಕೆಲಸ ಕಾರ್ಯ ಬಿಟ್ಟು, ಜನಸಾಮಾನ್ಯರ ಕೆಲಸಕ್ಕೂ ಅಡ್ಡಿ ಮಾಡಿಕೊಂಡು, ರಸ್ತೆಗಿಳಿದರೆ ಜನರು ನಿಮ್ಮನ್ನು ಕ್ಷಮಿಸುವರೇ? ಅಲ್ಲೆಲ್ಲೋ ಬೆಂಕಿ ಬಿದ್ದರೆ, ನಮ್ಮ ನಾಡಿನಲ್ಲಿ ಏಕೆ ಬಾವಿ ತೋಡುತ್ತೀರಿ?
ಗಾಂಧಿ ಕುಟುಂಬದ ಪರವಾಗಿ ಭ್ರಷ್ಟಾಧ್ಯಕ್ಷ ಡಿಕೆಶಿ ಮಾಡುವ ಭಾಷಣ "ಕಳ್ಳರು, ಕಳ್ಳರು ಸೇರಿ ಸಂತೆಗೆ ಹೋದಂತೆ" ಇದೆ.
ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ವ್ಯಕ್ತಿಯೇ ಇಡಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿರುವುದು ಗೂಂಡಾಗಿರಿಯಲ್ಲದೇ ಮತ್ತೇನು?#FakeGandhisBachaoToolKit
— BJP Karnataka (@BJP4Karnataka) June 13, 2022
ವಾರದ ಮೊದಲ ದಿನ ಕಾಂಗ್ರೆಸ್ ಕರ್ನಾಟಕದ ಜನತೆಯ ಮೇಲೆ ಹೊರೆ ಹೇರುತ್ತಿದೆ. ಶಾಂತಿಯ ನಾಡಿನಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿದೆ ಕಾಂಗ್ರೆಸ್. ರಾಹುಶಾಂತಿಗೋಸ್ಕರ ಸಮಾಜದ ಶಾಂತಿ ಕದಡುತ್ತಿರುವುದು ಖಂಡನೀಯ. ಸ್ವಾಮಿನಿಷ್ಠೆ ಪಾಲಿಸಲು, ತಾಯ್ನೆಲವನ್ನು ಕಾಂಗ್ರೆಸ್ ಅಗೌರವಿಸುತ್ತಿದೆ ಎಂದು ಬಿಜೆಪಿ ಕುಟುಕಿದೆ.