ಬೆಂಗಳೂರು : ತಮ್ಮ ಕುಟುಂಬ ಸದಸ್ಯರು ನಡೆಸಿರುವ ಭ್ರಷ್ಟಾಚಾರದ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಿದ್ಧರಿಲ್ಲ.
ಆರೋಪ ಸಾಬೀತಾದರೆ ರಾಜೀನಾಮೆ ಕೊಡುತ್ತೇನೆ ಎಂದು ಅವರು ಬಾಯಿಮಾತಿಗಷ್ಟೇ ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬದ ಸದಸ್ಯರು ನಡೆಸಿರುವ ಭ್ರಷ್ಟಾಚಾರವನ್ನು ತನಿಖೆಗೆ ವಹಿಸಬೇಕು.
ಒಂದು ವೇಳೆ ಆರೋಪ ಸಾಬೀತಾಗದಿದ್ದರೇ ನಾನು ನನ್ನ ಸ್ಥಾನಕ್ಕೆ ರಾಜೀನಾಮ ನೀಡುತ್ತೇನೆ. ಅದೇ ಭ್ರಷ್ಟಾಚಾರ ಸಾಬೀತಾದರೇ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ಕೊಡಬೇಕು ಎಂದು ಬಿಎಸ್ ವೈಗೆ ಸವಾಲ್ ಹಾಕಿದ್ದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಿ. ಆರೋಪ ಸಾಬೀತಾಗದೆ ಇದ್ದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧ ಎಂದಿದ್ದೆ. ನಾನು ಹಾಕಿದ ಈ ಸವಾಲನ್ನು ಅವರು ಸ್ವೀಕರಿಸಬೇಕಿತ್ತು.
ಆದರೆ, ಅವರು ಅನಗತ್ಯ ಚರ್ಚೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ : ಕೇಕ್ ತರುವ ಹಣದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಹಂಚಿ : ಬಚ್ಚೇಗೌಡ ಮನವಿ
ಇದೇ ವೇಳೆ ಉತ್ತರಪ್ರದೇಶ ದಲಿತ ಯುವತಿ ಮೇಲೆನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ, ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸರ್ಕಾರವೇ ಅಧಿಕಾರದಲ್ಲಿದೆ.
ದಿಲ್ಲಿಯಲ್ಲಿ ಶೀಲಾ ದೀಕ್ಷಿತ್ ಸರ್ಕಾರ ಇದ್ದಾಗ ನಿರ್ಭಯಾ ಪ್ರಕರಣದಲ್ಲಿ, ಅವರ ಮೇಲೆ ಭಾರಿ ದೊಡ್ಡ ಮಟ್ಟದ ಆರೋಪವನ್ನು ಮಾಡಿದ್ದರು.
ಇಂದು ಉತ್ತರಪ್ರದೇಶದಲ್ಲಿ ಬಡ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು, ಆ ಯುವತಿ ಸಾವನ್ನಪ್ಪಿದ್ದಾಳೆ. ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವ ಕಾರ್ಯವನ್ನು ಸರ್ಕಾರ ಮಾಡಬೇಕು.
ಆದರೆ, ಉತ್ತರಪ್ರದೇಶದಲ್ಲಿ ಕಾನೂನು-ಸುವ್ಯವಸ್ಥೆಯೇ ಇಲ್ಲದಂತಾಗಿದೆ ಎಂದು ಆರೋಪಿಸಿದರು.








