ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ.
ರಾಜ್ಯದಲ್ಲಿ ಕಾಂಗ್ರೆಸ್ ಮೂರ್ನಾಲ್ಕು ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ಹೇಳಿದ್ದಾರೆ.