Congress vs BJP | ಹುಬ್ಬಳ್ಳಿ ಗಲಭೆ | ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಸಮರ
ಬೆಂಗಳೂರು : ಹುಬ್ಬಳ್ಳಿ ಗಲಭೆ ವಿಚಾರವಾಗಿ ರಾಜ್ಯ ಬಿಜೆಪಿ ಘಟಕ ಕಾಂಗ್ರೆಸ್ ವಿರುದ್ಧ ಟ್ವೀಟ್ ಸಮರ ಮುಂದುವರೆಸಿದೆ.
ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ, ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ,
ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ ಎಂದು ಕುಟುಕಿದೆ.
ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನ.
ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ.
ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು.
ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ.#CONgressSupportsJihadis
— BJP Karnataka (@BJP4Karnataka) April 22, 2022
ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ. ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನ.
ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನ.
ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು.
ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ.
ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ?
ಆ ರಿಂಗ್ ಮಾಸ್ಟರ್ #ಮಹಾನಾಯಕ ಆಗಿರಬಹುದೇ ಅಥವಾ #ಮೀರ್ಸಾದಿಕ್ ಆಗಿರಬಹುದೇ?#CONgressSupportsJihadis
— BJP Karnataka (@BJP4Karnataka) April 22, 2022
ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ.
ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ? ಆ ರಿಂಗ್ ಮಾಸ್ಟರ್ #ಮಹಾನಾಯಕ ಆಗಿರಬಹುದೇ ಅಥವಾ #ಮೀರ್ಸಾದಿಕ್ ಆಗಿರಬಹುದೇ ಎಂದು ಬಿಜೆಪಿ ಅನುಮಾನ ವ್ಯಕ್ತಪಡಿಸಿದೆ. Congress vs BJP Hubli riot BJP tweet war against Congress