ED ವಿಚಾರಣೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ….
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಇಡಿ ಪ್ರಶ್ನಿಸಿದ್ದಕ್ಕೆ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ವಿರುದ್ಧ ದೂರು ನೀಡಲು ಪಕ್ಷದ ಕಚೇರಿಯಿಂದ ರಾಜಭವನದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಗ್ಗೆ 10ಕ್ಕೆ ಆರಂಭವಾಗಲಿರುವ ಪಾದಯಾತ್ರೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲಿದೆ. ಕೆಪಿಸಿಸಿ ಕಚೇರಿ ಬಳಿ ಸೇರುವಂತೆ ಶಾಸಕರು, ಸಂಸದರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ರಾಜಭವನ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ.
ಇದು (ಪ್ರತಿಭಟನೆ) ನಮ್ಮ ಹಕ್ಕು, ನಾವು ನ್ಯಾಯಕ್ಕಾಗಿ ಹೋರಾಡುತ್ತೇವೆ. ಅವರು (ಇಡಿ) ಯಾವುದೇ ಬಿಜೆಪಿ ನಾಯಕರ ಮೇಲೆ ಕೇಸ್ ತೆಗೆದುಕೊಳ್ಳುತ್ತಿಲ್ಲ, ಅವರು ಕಾಂಗ್ರೆಸ್ ಜನರಿಗೆ ಮಾತ್ರ ಕಿರುಕುಳ ನೀಡುತ್ತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಫ್ರೀಡಂ ಪಾರ್ಕ್ ಹೊರತುಪಡಿಸಿ ಎಲ್ಲಿಯೂ ಪ್ರತಿಭಟನೆ ನಡೆಸಬಾರದು ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು – ನಾವು ಅದನ್ನು ಅವರಿಗೆ ತಿಳಿಸಿದ್ದೇವೆ. ಅವರು ನಮಗೆ ಪ್ರತಿಭಟನೆಯ ಬಗ್ಗೆ ಲಿಖಿತವಾಗಿ ಮನವಿ ನೀಡಿದ್ದರು ಆದರೆ ನಾವು ಅದನ್ನು ತಿರಸ್ಕರಿಸಿದ್ದೇವೆ. ನಾವು ಅದನ್ನು ಬೆಳಿಗ್ಗೆ ಅವರಿಗೂ ತಿಳಿಸಿದ್ದೇವೆ. ಆದರೂ ಪ್ರತಿಭಟನೆ ಮುಂದುವರಿದರೆ, ನಾವು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ: ಡಿಸಿಪಿ ಪೂರ್ವ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಮತ್ತು ಮೆರವಣಿಗೆಗೆ ಸಮಯದಲ್ಲಿ ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆ ಕಂಡುಬಂದಿದೆ. ಆಂಬ್ಯುಲೆನ್ಸ್ ಕೂಡ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ.