ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನ ಎರಡನೇ ಹಂತದ ಪಾದಯಾತ್ರೆ – Saaksha Tv
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆ ಎರಡನೇ ಹಂತ ನಾಳೆ ರಾಮನಗರದಿಂದ ಆರಂಭವಾಗಲಿದೆ.
ಜನವರಿ 9ರಂದು ರಾಮನಗರದ ಕನಕಪುರ ತಾಲೂಕಿನ ಮೇಕೆದಾಟು ಸಮೀಪದ ಸಂಗಮದಿಂದ ಪಾದಯಾತ್ರೆ ಆರಂಭಿಸಿದ್ದ ಕಾಂಗ್ರೆಸ್ ನಾಯಕರು ಕೊರೊನಾ ನಿರ್ಬಂಧ ಹಿನ್ನೆಲೆ ನ್ಯಾಯಾಲಯದ ಸೂಚನೆ ಮೇರೆಗೆ ಐದನೇ ದಿನ ರಾಮನಗರದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಿದ್ದರು.
ಈಗ ಮತ್ತೆ ಎರಡನೇ ಹಂತದ ಪಾದಯಾತ್ರೆ ಆರಂಭವಾಗಲಿದೆ . ಈ ಪಾದಯಾತ್ರೆಯು ಮಾ.27ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗುವ ಪಾದಯಾತ್ರೆ ರಾಮನಗರದಿಂದ ಬಿಡದಿವರೆಗೂ ತಲುಪಲಿದೆ. ಮಾರ್ಚ್ 28ರಂದು ಬಿಡದಿಯಿಂದ ಕೆಂಗೇರಿ (ಪೂರ್ಣಿಮ ಕನ್ವೆಷನ್ ಹಾಲ್)ವರೆಗೆ ಆಗಮಿಸುವ ಕಾಂಗ್ರೆಸ್ ನಾಯಕರು, ಮಾರ್ಚ್ 1ರಂದು ಕೆಂಗೇರಿ ಪೂರ್ಣಿಮ ಕನ್ವೆಷನ್ ಹಾಲ್ನಿಂದ ಅದ್ವೈತ್ ಪೆಟ್ರೋಲ್ ಬಂಕ್ವರೆಗೂ ತಲುಪಲಿದ್ದಾರೆ.
ಮಾರನೇ ದಿನ ಅದ್ವೈತ್ ಪೆಟ್ರೋಲ್ ಬಂಕ್ನಿಂದ ಹೊರಟು ಅರಮನೆ ಮೈದಾನದವರೆಗೂ ಆಗಮಿಸುವ ನಾಯಕರು, ಮಾರ್ಚ್ 3ರಂದು ಅರಮನೆ ಮೈದಾನದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ತೆರಳಿ ಬೃಹತ್ ಸಮಾರೋಪ ಸಮಾರಂಭ ನಡೆಸುವ ಮೂಲಕ ಪಾದಯಾತ್ರೆ ಮುಕ್ತಾಯಗೊಳಿಸಲಿದ್ದಾರೆ.
ಐದು ದಿನದ ಪಾದಯಾತ್ರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು, ಶಾಸಕರು, ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಕೊನೆಯ ದಿನದ ಸಮಾರೋಪ ಸಮಾರಂಭಕ್ಕೆ ಪಕ್ಷದ ರಾಷ್ಟ್ರೀಯ ನಾಯಕರು ಸಹ ಆಗಮಿಸುವ ನಿರೀಕ್ಷೆಯಿದೆ.
ಜನವರಿ 9ರಿಂದ 19ರವರೆಗೆ ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆ ಮೊಟಕುಗೊಂಡಿತ್ತು. ಇದೀಗ ಕೊರೊನಾ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಎರಡನೇ ಹಂತದ ಪಾದಯಾತ್ರೆಗೆ ಮುಂದಾಗಿರುವ ಕಾಂಗ್ರೆಸ್ ನಾಯಕರು, ನಾಳೆ ವಿಧ್ಯುಕ್ತವಾಗಿ









