ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ : ಸಚಿವ ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
July 10, 2021
in Newsbeat, State, ರಾಜ್ಯ
K Sudhakar
Share on FacebookShare on TwitterShare on WhatsappShare on Telegram

Related posts

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026
ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

July 11, 2026

ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ : ಸಚಿವ ಡಾ.ಕೆ.ಸುಧಾಕರ್

ದಾವಣಗೆರೆ : ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಉದ್ದೇಶವಿದ್ದು, ಇದಕ್ಕಾಗಿ ಪರಿಶೀಲನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕೆಂಬ ಉದ್ದೇಶವಿದೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಪಿಪಿಪಿ ಮಾದರಿಯಲ್ಲಿ ಆಸ್ಪತ್ರೆ ನಿರ್ಮಿಸುವ ಬಗ್ಗೆ ಚರ್ಚೆಯಾಗಿದೆ. 9 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಉದ್ದೇಶವಿದೆ. ರಾಜ್ಯದಲ್ಲಿ 18 ಹಾಗೂ ಈಗ ಆರಂಭವಾಗುತ್ತಿರುವ ಹೊಸ ನಾಲ್ಕು ಮೆಡಿಕಲ್ ಕಾಲೇಜುಗಳು ಜಿಲ್ಲಾಕೇಂದ್ರಗಳಲ್ಲೇ ಇವೆ. ತಾಲೂಕು ಮಟ್ಟದಲ್ಲಿ ಕಾಲೇಜು ಇಲ್ಲ. ಈ ಬಗ್ಗೆ ಮನವಿ ಬಂದಿದ್ದು, ಪರಿಶೀಲಿಸಲಾಗುವುದು ಎಂದರು.

ರಾಜ್ಯದಲ್ಲಿ ಈವರೆಗೆ ಎರಡೂವರೆ ಕೋಟಿ ಲಸಿಕೆ ನೀಡಲಾಗಿದೆ. ಆಗಸ್ಟ್ ವೇಳೆಗೆ ದೊಡ್ಡ ಪ್ರಮಾಣದಲ್ಲಿ ರಾಜ್ಯಕ್ಕೆ ಲಸಿಕೆ ಬರಲಿದೆ. ಈ ಬಗ್ಗೆ ಕೇಂದ್ರದಿಂದ ಆಶ್ವಾಸನೆ ದೊರೆತಿದೆ. ರಾಜ್ಯದಲ್ಲಿ ಎರಡೂವರೆ ಕೋಟಿ ಹಾಗೂ ಕೇಂದ್ರ ಸರ್ಕಾರ 38 ಕೋಟಿ ಜನರಿಗೆ ಲಸಿಕೆ ನೀಡಿದೆ. ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ನೀಡಲಿದ್ದು, ಜೊತೆಗೆ ಜನಸಾಮಾನ್ಯರಿಗೂ ನೀಡಲಾಗುವುದು ಎಂದರು.

60-70% ಜನರು ಕೋವಿಡ್ ನ ಎರಡೂ ಲಸಿಕೆ ಪಡೆಯುವವರೆಗೆ ಜನರು ಎಚ್ಚರಿಕೆಯಿಂದಿರಬೇಕು. ಕೇರಳದಲ್ಲಿ 15 ಸಾವಿರವರೆಗೂ ಪ್ರಕರಣ ಕಂಡುಬರುತ್ತಿದೆ. ಮಹಾರಾಷ್ಟ್ರ, ಕೇರಳ ಗಡಿಗಳನ್ನು ಹಂಚಿಕೊಳ್ಳುವುದರಿಂದ ಅಲ್ಲಿ ಹೆಚ್ಚಾದಾಗ ರಾಜ್ಯದಲ್ಲೂ ಪ್ರಕರಣ ಏರುತ್ತದೆ. ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಉಂಟಾಗುತ್ತಿದ್ದು, ಇದಕ್ಕೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಸರ್ಕಾರ ಬಿಗಿ ಕ್ರಮ ಕೈಗೊಂಡಾಗ ವಿವಿಧ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ. 10 ಲಕ್ಷ ಜನಸಂಖ್ಯೆಗೆ 50 ಕ್ಕಿಂತ ಹೆಚ್ಚು ಪ್ರಕರಣ ಕಂಡುಬರಬಾರದು. ಈಗಲೂ ರಾಜ್ಯದಲ್ಲಿ ಒಂದೂವರೆ ಲಕ್ಷ ಪರೀಕ್ಷೆ ಮಾಡಲಾಗುತ್ತಿದೆ ಎಂದರು.

K Sudhakar

ಕೋವಿಡ್ ಮೂರನೇ ಅಲೆ ಬರಲೇಬೇಕು ಎಂದೇನಿಲ್ಲ. ಮಕ್ಕಳಿಗೆ ಹೆಚ್ಚು ಸೋಂಕು ಬರಲೇಬೇಕು ಎಂದೇನಿಲ್ಲ. ನಾವು ಎಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ ಎನ್ನುವುದರ ಮೇಲೆ ಇದು ಅವಲಂಬಿತವಾಗಿದೆ. ಮಕ್ಕಳಿಗೆ ಸೋಂಕು ಬಂದರೂ ತೀವ್ರ ಸಮಸ್ಯೆಯಾಗುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೂ ಮಕ್ಕಳ ಬಗ್ಗೆ ಹೆಚ್ಚು ನಿಗಾ ಇರಿಸಬೇಕು. ಮೂರನೇ ಅಲೆಗೆ ಸಿದ್ಧತೆಯಾಗಿ 23 ಸಾವಿರ ಕೋಟಿ ರೂ. ಖರ್ಚು ಮಾಡಲು ಪ್ರಧಾನಿಗಳು ತೀರ್ಮಾನಿಸಿದ್ದು, ರಾಜ್ಯಕ್ಕೆ ಒಂದೂವರೆ ಸಾವಿರ ಕೋಟಿ ರೂ. ಬರಲಿದೆ. ಪ್ರತಿ ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಈ ಮೂಲಕ ಕ್ರಮ ವಹಿಸಲಾಗುವುದು ಎಂದರು.

ಹೊಸ ಸರ್ಕಾರಿ ಆಸ್ಪತ್ರೆ

ಚಿಗಟೇರಿ ಸಾರ್ವಜನಿಕ ಆಸ್ಪತ್ರೆ 1961 ರಲ್ಲಿ ಆರಂಭವಾಗಿದ್ದು, ಚಿಗಟೇರಿ ಕುಟುಂಬದವರು ಉಚಿತವಾಗಿ ಜಾಗ ನೀಡಿದ್ದರು. ಈ ಕಟ್ಟಡ ಹಳೆಯದಾಗಿದ್ದು, ಕೆಲ ದೂರುಗಳು ಬಂದಿವೆ. ವೈದ್ಯರು, ನರ್ಸ್, ಗ್ರೂಪ್ ಡಿ ನೌಕರರು ಕಡಿಮೆ ಇದ್ದಾರೆ. ಸಾವಿರ ಹಾಸಿಗೆಗಳ ಸಾಮರ್ಥ್ಯಕ್ಕನುಗುಣವಾಗಿ ಸಿಬ್ಬಂದಿ ಇಲ್ಲ. ಇಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿಗಳು ನಿರ್ಧರಿಸಿರುವುದರಿಂದ ಆವರಣದಲ್ಲಿ ಎಷ್ಟು ಜಮೀನಿದೆ, ಎಷ್ಟು ಸ್ಥಳ ಇದೆ ಎಂದು ವೀಕ್ಷಿಸಿದ್ದೇನೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಲು ಸೂಚಿಸಲಾಗಿದೆ. ಮುಂದಿನ ವಾರ ಸಭೆ ನಡೆಸಿ ಅಂತಿಮವಾಗಿ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. 29 ಎಕರೆ ಜಾಗ ಹಾಗೂ ಇನ್ನೊಂದು 6 ಎಕರೆ ಇದೆ. ಈ ಬಗ್ಗೆ ಸರ್ವೆ ನಡೆಸಿ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದರು.

Tags: davanagereDr. K SudhakarkarnatakaMedical College
ShareTweetSendShare
Join us on:

Related Posts

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram