ಚಂಡೀಗಢ: ಮದ್ಯ ಸೇವಿಸಿದ ಹಿನ್ನೆಲೆಯಲ್ಲಿ 19 ಜನ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಹರಿಯಾಣದಲ್ಲಿ ನಡೆದಿದೆ. ವಿಷಯುಕ್ತ ಮದ್ಯ ಸೇವಿಸಿದ ಪರಿಣಾಮ 19 ಜನ ಸಾವನ್ನಪ್ಪಿದ್ದಾರೆ. ಕಾಂಗ್ರೆಸ್ (Congress) ಮುಖಂಡ ಮತ್ತು ಜನನಾಯಕ ಜನತಾ ಪಕ್ಷದ (ಜೆಜೆಪಿ) ನಾಯಕನ ಪುತ್ರರು ಸೇರಿದಂತೆ 7 ಜನರನ್ನು ಪೊಲೀಸರು ವಸಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಯಮುನಾ ನಗರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಪೊಲೀಸರು ದಾಳಿ ನಡೆಸಿ ಕಾರ್ಖಾನೆ ಒಂದರಲ್ಲಿ ತಯಾರಿಸಿದ್ದ 200 ಕ್ರೇಟ್ ನಕಲಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ 14 ಖಾಲಿ ಡ್ರಮ್ಗಳು ಹಾಗೂ ಅಕ್ರಮ ಮದ್ಯ ತಯಾರಿಸಲು ಬಳಸಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜನ ಸಾವಿಗೀಡಾದ ನಂತರ ಮದ್ಯ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.