ನೆಲ್ಯಾಡಿಯಲ್ಲಿ ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿ – ಎರಡೂ ವಾಹನಗಳು ಸುಟ್ಟು ಭಸ್ಮ – ಗೂಡ್ಸ್ ಲಾರಿ ಚಾಲಕ ಸಜೀವ ದಹನ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿಹೊಡೆದ ಪರಿಣಾಮ ಎರಡು ವಾಹನಗಳೂ ಸಂಪೂರ್ಣ ಸುಟ್ಟು ಭಸ್ಮವಾಗಿ ಗೂಡ್ಸ್ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಾರ್ಚ್ 24 ರ ಬುಧವಾರ ತಡರಾತ್ರಿ ನಡೆದಿದೆ. ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಈ ಘಟನೆ ಸಂಭವಿಸಿದೆ.
ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದಿದೆ.
ಘಟನೆಯಲ್ಲಿ ಎರಡೂ ವಾಹನಗಳಿಗೆ ಬೆಂಕಿ ಹಿಡಿದಿದ್ದು, ಬಸ್ ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದರೆ, ಲಾರಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದು, ಬೆಂಕಿ ನಂದಿಸಿದ್ದಾರೆ.
ಮೇಕೆ ಹಾಲಿನ ಆರೋಗ್ಯ ಪ್ರಯೋಜನಗಳು https://t.co/UpjE1tuFpk
— Saaksha TV (@SaakshaTv) March 21, 2021
ಚಿತ್ರನಟನಿಂದ ಹುಡುಗಿಯ ಕಿಡ್ನಾಪ್ ! ಯಾವುದೇ ಸಿನಿಮಾ ಲವ್ಸ್ಟೋರಿಗಿಂತ ಕಮ್ಮಿಯಿಲ್ಲ ಜಗ್ಗೇಶ್ ಪರಿಮಳಾ ದಂಪತಿಗಳ ಲವ್ ಸ್ಟೋರಿ#jaggesh @Jaggesh2https://t.co/CrefNT8dEi
— Saaksha TV (@SaakshaTv) March 23, 2021
ಪ್ರಧಾನಿ ಮೋದಿ ನಂತರ ಯೋಗಿ ಆದಿತ್ಯನಾಥ್ ಪ್ರಧಾನಿಯಾಗಲು ಸಮರ್ಥರೇ? https://t.co/5K5E1JeDk7
— Saaksha TV (@SaakshaTv) March 21, 2021
ದೊಣ್ಣೆ ಮೆಣಸಿನ ವಾಂಗಿಬಾತ್ https://t.co/AL3rMRyFF5
— Saaksha TV (@SaakshaTv) March 19, 2021