ಬೆಂಗಳೂರು : ವಿಧಾನಸಭಾ ಕಲಾಪಗಳ ನೇರ ಪ್ರಸಾರಕ್ಕೆ ಖಾಸಗಿ ಸುದ್ದಿವಾಹಿನಿಗಳ ಕ್ಯಾಮೆರಾಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಸೋಮವಾರ ಪ್ರತಿಕಾಗೋಷ್ಠಿ ನಡೆಸಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯದಲ್ಲಿ ಕಳೆದ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಪ್ರಾಯೋಗಿಕವಾಗಿ ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮೆರಾಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.
ನಿರ್ಬಂಧ ಸರಿಯೇ ಮತ್ತು ಅದರಿಂದ ಪ್ರಯೋಜನವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ, ರಾಜ್ಯಸಭೆ ಮಾದರಿಯಲ್ಲೇ ವಿಧಾನಸಭೆಯಲ್ಲಿ ಖಾಸಗಿ ಎಲೆಕ್ಟ್ರಾನಿಕ್ ಮಾಧ್ಯಮಗಳು ಸದನ ಕಲಾಪ ನೇರ ಪ್ರಸಾರ ಮಾಡುವುದಕ್ಕೆ ಅವಕಾಶ ನೀಡುತ್ತಿಲ್ಲ. ವ್ಯವಸ್ಥೆ ಪಾರದರ್ಶಕವಾಗಿರಬೇಕು ಎನ್ನುವುದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿಧಾನಸಭೆಯಲ್ಲಿ ನಡೆಯುವ ಚರ್ಚೆ ಪಾರದರ್ಶಕವಾಗಿದ್ದು, ಜನತೆಗೆ ತಿಳಿಯಬೇಕು ಎಂಬ ದೃಷ್ಟಿಯಿಂದ ಅಂಥ ವ್ಯವಸ್ಥೆ ಜಾರಿಗೊಳಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕಡಿಮೆ ಅಭ್ಯರ್ಥಿಗಳು ಕಣಕ್ಕೆ ಇಳಿಸಿದ ಕಾಂಗ್ರೆಸ್
ನವದೆಹಲಿ: ಭಾರತವನ್ನು ಅಧಿಕ ವರ್ಷಗಳ ಕಾಲ ಆಳಿರುವ ಕಾಂಗ್ರೆಸ್ ಪಕ್ಷ ಇದೇ ಮೊದಲ ಬಾರಿಗೆ ಕಡಿಮೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದೆ. ದೇಶವನ್ನು ಅತ್ಯಧಿಕ ಕಾಲ ಆಳಿದ್ದ ಕಾಂಗ್ರೆಸ್...