ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ಸುಲಭ ಮತ್ತು ಬಹಳ ರುಚಿಕರ ಪಾಯಸಗಳ ರೆಸಿಪಿಗಳು..!

Namratha Rao by Namratha Rao
October 2, 2021
in Cooking, Newsbeat, ಅಡುಗೆ
Saakshatv cooking tips prepare gasagase payasa
Share on FacebookShare on TwitterShare on WhatsappShare on Telegram

5 ಸುಲಭ ಮತ್ತು ಬಹಳ ರುಚಿಕರ ಪಾಯಸಗಳ ರೆಸಿಪಿಗಳು..!

1. ಗಸಗಸೆ ಪಾಯಸ

ಬೇಕಾಗುವ ಸಾಮಗ್ರಿಗಳು

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಗಸಗಸೆ – 3 ಚಮಚ
ಬಾದಾಮಿ, ಗೋಡಂಬಿ – ಸ್ವಲ್ಪ
ಒಣಕೊಬ್ಬರಿ – 1/2 ಕಪ್
ಹಾಲು – ಸ್ವಲ್ಪ
ಬೆಲ್ಲ – 3/4 ಕಪ್
ನೀರು 1.5 ಕಪ್
ಏಲಕ್ಕಿ ಪುಡಿ – ಚಿಟಿಕೆಯಷ್ಟು
ತುಪ್ಪ – 2 ಚಮಚ
ತುಪ್ಪದಲ್ಲಿ ಹುರಿದ ದ್ರಾಕ್ಷಿ ಗೋಡಂಬಿ – ಸ್ವಲ್ಪ

ಮಾಡುವ ವಿಧಾನ
Saakshatv cooking tips prepare gasagase payasa
ಮೊದಲಿಗೆ ಗಸಗಸೆ, ಬಾದಾಮಿ, ಗೋಡಂಬಿಗಳನ್ನು ಡ್ರೈ ರೋಸ್ಟ್ ಮಾಡಿಕೊಳ್ಳಿ. ನಂತರ ತಣ್ಣಗಾದ ಮೇಲೆ ಮಿಕ್ಸಿ ಜಾರಿಗೆ ಹಾಕಿ ಗ್ರೈಂಡ್ ಮಾಡಿ. ಅದಕ್ಕೆ ಕೊಬ್ಬರಿ ಸೇರಿಸಿ ಅಗತ್ಯವಿರುವಷ್ಟು ಹಾಲು ಸೇರಿಸಿ ಚೆನ್ನಾಗಿ ರುಬ್ಬಿ.
ಈಗ ಒಂದು ಪಾತ್ರೆಯಲ್ಲಿ ಬೆಲ್ಲ ಹಾಕಿ ನೀರು ಸೇರಿಸಿ ಕುದಿಸಿ. ಬೆಲ್ಲ ಕರಗಿದ ನಂತರ ರುಬ್ಬಿಟ್ಟುಕೊಂಡ ಮಿಶ್ರಣವನ್ನು ಸೇರಿಸಿ ಸಣ್ಣ ಉರಿಯಲ್ಲಿ ಕುದಿಸಿ. ಏಲಕ್ಕಿ ಪುಡಿ ಉದುರಿಸಿ. ಕೊನೆಯಲ್ಲಿ ತುಪ್ಪ, ಹುರಿದಿಟ್ಟುಕೊಂಡ ದ್ರಾಕ್ಷಿ ಗೋಡಂಬಿ ಸೇರಿಸಿದರೆ ರುಚಿಯಾದ ಗಸಗಸೆ ‌ಪಾಯಸ ಸವಿಯಲು ಸಿದ್ಧವಾಗಿದೆ.

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

2. ರವೆ ಹೆಸರುಬೇಳೆ ಪಾಯಸ

ಬೇಕಾಗುವ ಸಾಮಗ್ರಿಗಳು:

ಹೆಸರು ಬೇಳೆ 1/2 ಕಪ್
ನೀರು 4 3/4 ಕಪ್
ರವೆ 1/4 ಕಪ್
ಬೆಲ್ಲ 3/4 ಕಪ್,
ಒಣ ಕೊಬ್ಬರಿ ತುರಿ 1/4 ಕಪ್,
ಹಾಲು 1/2 ಕಪ್,
ಹುರಿದ ತುಪ್ಪ, ಗೋಡಂಬಿ, ದ್ರಾಕ್ಷಿ, ಏಲಕ್ಕಿ
Saakshatv cooking recipes payasa

ಮಾಡುವ ವಿಧಾನ

ಮೊದಲು ಹೆಸರುಬೇಳೆಯನ್ನು ಸ್ವಲ್ಪ ಕೆಂಪು ಬಣ್ಣ ಬರುವವರೆಗೆ ಹುರಿದುಕೊಳ್ಳಿ. ನಂತರ ಹೆಸರುಬೇಳೆಯನ್ನು ಒಂದೆರಡು ಬಾರಿ ತೊಳೆದು 4 ಕಪ್ ನೀರು ಸೇರಿಸಿ ಕುಕ್ಕರ್ ನಲ್ಲಿ ಮೂರು ನಾಲ್ಕು ವಿಸಿಲ್ ಕೂಗಿಸಿ ಬೇಯಿಸಿಕೊಳ್ಳಿ. ನಂತರ ಬೆಲ್ಲವನ್ನು ಅರ್ಧ ಕಪ್ ನೀರು ಹಾಕಿ ಕರಗಿಸಿ ಇಟ್ಟುಕೊಳ್ಳಿ.

ಈಗ ಬಾಣಲೆಗೆ ಒಂದು ಚಮಚ ತುಪ್ಪ ಹಾಕಿ ಬಿಸಿ ಮಾಡಿ, ದ್ರಾಕ್ಷಿ ಗೋಡಂಬಿ ಸೇರಿಸಿ ಹುರಿದಿಟ್ಟುಕೊಳ್ಳಿ.

ನಂತರ ಬಾಣಲೆಗೆ ರವೆ ಹಾಕಿ ಕೆಂಪು ಬಣ್ಣ ಬರುವವರೆಗೆ ಚೆನ್ನಾಗಿ ಹುರಿಯಿರಿ.

ನಂತರ ರವೆಯನ್ನು ಮುಕ್ಕಾಲು ಕಪ್ ಬಿಸಿ ನೀರಿಗೆ ಸೇರಿಸಿ, ಗಂಟು ಕಟ್ಟದಂತೆ ನೋಡಿಕೊಳ್ಳಿ.
ನಂತರ ಬೇಯಿಸಿಟ್ಟುಕೊಂಡ ಹೆಸರುಬೇಳೆಯನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಬಳಿಕ ಕರಗಿಸಿಟ್ಟುಕೊಂಡ ಬೆಲ್ಲವನ್ನು ಸಹ ಸೇರಿಸಿ ಮತ್ತೆ ಮಿಕ್ಸ್ ಮಾಡಿಕೊಳ್ಳಿ.
ಈ ಮಿಶ್ರಣವು ಒಂದು ಕುದಿ ಬಂದ ನಂತರ ಒಣ ಕೊಬ್ಬರಿ ತುರಿ ಮತ್ತು ಏಲಕ್ಕಿ ಪುಡಿಯನ್ನು ಸೇರಿಸಿ.
ಮಧ್ಯಮ ಉರಿಯಲ್ಲಿ 4-5 ನಿಮಿಷಗಳ ಕಾಲ ಬಿಸಿ ಮಾಡಿ. ನಂತರ ಅದಕ್ಕೆ ಕಾಯಿಸಿ ಆರಿಸಿದ ಹಾಲನ್ನು ಸೇರಿಸಿ. ಈಗ ಹುರಿದಿಟ್ಟುಕೊಂಡ ದ್ರಾಕ್ಷಿ ಗೋಡಂಬಿಯನ್ನು ಸೇರಿಸಿ ಒಂದು ಕುದಿ ಬರೆಸಿ. ರುಚಿಯಾದ ರವೆ ಹೆಸರುಬೇಳೆ ಪಾಯಸ ಸವಿಯಲು ಸಿದ್ಧ.

3. ಸಬ್ಬಕ್ಕಿ ಖೀರು

ಬೇಕಾಗುವ ಸಾಮಗ್ರಿಗಳು

ಸಾಗು/ಸಬ್ಬಕ್ಕಿ 1ಕಪ್
ನೀರು 1ಕಪ್
ಸಕ್ಕರೆ 1ಕಪ್
ಹಾಲು 1/2 ಲೀಟರ್
ತುಪ್ಪ ಸ್ವಲ್ಪ
ಗೋಡಂಬಿ, ಒಣ ದ್ರಾಕ್ಷಿ ಸ್ವಲ್ಪ
ಏಲಕ್ಕಿ ಹುಡಿ 1/4 ಚಮಚ
Saakshatv cooking recipes sabbakki kheer
Saakshatv cooking recipes sabbakki kheer

ಮಾಡುವ ವಿಧಾನ

ಮೊದಲಿಗೆ ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ 1ಕಪ್ ಸಬ್ಬಕ್ಕಿಯನ್ನು ಹುರಿದು ಇಟ್ಟು ಕೊಳ್ಳಿ.
ಬಳಿಕ ಒಂದು ಪಾತ್ರೆಯಲ್ಲಿ ನೀರು ಕುದಿಸಿ. ನಂತರ ಸಬ್ಬಕ್ಕಿಯನ್ನು ಸೇರಿಸಿ ಕುದಿಯಲು ಬಿಡಿ. ಸಬ್ಬಕ್ಕಿ ಬೆಂದ ಬಳಿಕ ಅದಕ್ಕೆ ಒಂದು ಕಪ್ ಸಕ್ಕರೆ ಸೇರಿಸಿ. ಸಕ್ಕರೆ ಕರಗಿದ ಬಳಿಕ ಸ್ಟವ್ ಆಫ್ ಮಾಡಿ.
ಈಗ ಒಂದು ಚಿಕ್ಕ ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ, ಗೋಡಂಬಿ, ಒಣ ದ್ರಾಕ್ಷಿಗಳನ್ನು ಹುರಿಯಿರಿ. ‌ ನಂತರ ಇದನ್ನು ಸಬ್ಬಕ್ಕಿ ಖೀರಿಗೆ ಸೇರಿಸಿ, ಕಲಸಿ. ಸಬ್ಬಕ್ಕಿ ಖೀರು ತಣ್ಣಗಾದ ಮೇಲೆ ಬೇಕಾದಷ್ಟು ಹಾಲು ಸೇರಿಸಿ ಕಲಸಿ. ಇದನ್ನು ರೆಫ್ರಿಜರೇಟರ್ ನಲ್ಲಿಟ್ಟು ತಣ್ಣಗಾದ ಮೇಲೆ ಸರ್ವ್ ಮಾಡಿ.

4 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ : Simple and Tatsy

4. ಅವಲಕ್ಕಿ ಪಾಯಸ

ಬೇಕಾಗುವ ಸಾಮಾಗ್ರಿಗಳು :

ಅವಲಕ್ಕಿ – 200 ಗ್ರಾಂ
ಬೆಲ್ಲ – 1/4 ಕೆಜಿ
ಹಾಲು – 1/2 ಲೀಟರ್
ಏಲಕ್ಕಿ – 4
ಒಣ ದ್ರಾಕ್ಷಿ/ ಗೋಡಂಬಿ – ಸ್ವಲ್ಪ
ತೆಂಗಿನಕಾಯಿಯ ಹಾಲು – 1/2 ಕಪ್
ತುಪ್ಪ
Saakshatv cooking recipe poha payasa

ಮಾಡುವ ವಿಧಾನ :
ಮೊದಲಿಗೆ ಬಾಣಲೆಯನ್ನು ಬಿಸಿ ಮಾಡಿ ಸ್ವಲ್ಪ ತುಪ್ಪ ಹಾಕಿ, ಒಣದಾಕ್ಷಿ, ಗೋಡಂಬಿಯನ್ನು ಹುರಿದು ಪಕ್ಕದಲ್ಲಿಟ್ಟುಕೊಳ್ಳಿ.
ನಂತರ ಬಾಣಲೆಗೆ ‌ ಅವಲಕ್ಕಿಯನ್ನು ಸೇರಿಸಿ ಕಂದುಬಣ್ಣಕ್ಕೆ ಬರುವವರೆಗೂ ಹುರಿದುಕೊಳ್ಳಿ.

ನಂತರ ಒಂದು ಪಾತ್ರೆಯಲ್ಲಿ ಹಾಲನ್ನು ಹಾಕಿ ಕಾಯಿಸಿ. ಅದಕ್ಕೆ ಬೆಲ್ಲವನ್ನು ಸೇರಿಸಿ ಕುದಿಸಿ. ಹಾಲು ಕುದಿಯಲು ಪ್ರಾರಂಭಿಸಿದಾಗ ಹುರಿದಿಟ್ಟುಕೊಂಡ ಅವಲಕ್ಕಿಯನ್ನು ಸೇರಿಸಿ, ತಳಹಿಡಿಯದಂತೆ ಕೈಯಾಡಿಸುತ್ತಾ ಇರಿ. ಅವಲಕ್ಕಿ ಚೆನ್ನಾಗಿ ಬೆಂದ ನಂತರ ತೆಂಗಿನಕಾಯಿಯ ಹಾಲನ್ನು ಸೇರಿಸಿ. ಐದು ನಿಮಿಷ ಕುದಿಸಿ ಒಲೆಯಿಂದ ಕೆಳಗಿಳಿಸಿ.
ಈಗ ಹುರಿದಿಟ್ಟುಕೊಂಡ ಒಣ ದ್ರಾಕ್ಷಿ ಗೋಡಂಬಿ ಸೇರಿಸಿ. ನಂತರ ಪುಡಿಮಾಡಿದ ಏಲಕ್ಕಿಯನ್ನು ಹಾಕಿ ಕಲಸಿ. ರುಚಿಯಾದ ಅವಲಕ್ಕಿ ಪಾಯಸ ಸವಿಯಲು ಸಿದ್ದ.

5. ಹೆಸರುಬೇಳೆ ಪಾಯಸ

ಬೇಕಾಗುವ ಸಾಮಗ್ರಿಗಳು

ಹೆಸರುಬೇಳೆ – 1 ಕಪ್
ಪುಡಿ ಮಾಡಿದ ಬೆಲ್ಲ – 11/2 ಕಪ್
ತೆಂಗಿನಕಾಯಿ ತುರಿ – 3/4 ಕಪ್
ಗೋಡಂಬಿ,ದ್ರಾಕ್ಷಿ, ಬಾದಾಮಿ – ಸ್ವಲ್ಪ
ಏಲಕ್ಕಿ ಪುಡಿ – 1ಚಮಚ
ಗಸಗಸೆ – 1ಚಮಚ
ತುಪ್ಪ- 1 ಚಮಚSaakshatv cooking recipe hesarubele payasa

ಮಾಡುವ ವಿಧಾನ

ಮೊದಲಿಗೆ ಗಸಗಸೆ, ತೆಂಗಿನಕಾಯಿ ತುರಿ, ಬಾದಾಮಿ ಗೋಡಂಬಿ ಒಣದ್ರಾಕ್ಷಿಯನ್ನು ಮಿಕ್ಸಿ ಜಾರಿನಲ್ಲಿ ಹಾಕಿ ಸ್ವಲ್ಪ ನೀರು ಹಾಕಿ ರುಬ್ಬಿ ಪೇಸ್ಟ್ ಮಾಡಿ.
ನಂತರ ಒಂದು ಪ್ಯಾನ್ ನಲ್ಲಿ ತುಪ್ಪ ಹಾಕಿ ಹೆಸರುಬೇಳೆಯನ್ನು ಹುರಿಯಿರಿ. ನಂತರ ಕುಕ್ಕರ್ ನಲ್ಲಿ ಅಗತ್ಯವಿರುವಷ್ಟು ನೀರು ‌ಸೇರಿಸಿ 3 ವಿಸಲ್ ಬರುವವರೆಗೆ ಚೆನ್ನಾಗಿ ಬೇಯಿಸಿ, ಮ್ಯಾಶ್ ಮಾಡಿಟ್ಟುಕೊಳ್ಳಿ.
ಒಂದು ಪಾತ್ರೆಯಲ್ಲಿ ಸ್ವಲ್ಪ ನೀರು ಸೇರಿಸಿ ಅದಕ್ಕೆ ಪುಡಿ ಮಾಡಿದ ಬೆಲ್ಲ ಸೇರಿಸಿ ಚೆನ್ನಾಗಿ ಕಲಸಿ. ನಂತರ ಅದಕ್ಕೆ ಮ್ಯಾಶ್ ಮಾಡಿದ ಹೆಸರುಬೇಳೆಯನ್ನು ಸೇರಿಸಿ. ಅದಕ್ಕೆ ರುಬ್ಬಿಟ್ಟುಕೊಂಡ ಮಿಶ್ರಣವನ್ನು ಸೇರಿಸಿ, ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿ. ಅಗತ್ಯವಿರುವಷ್ಟು ನೀರನ್ನು ಸೇರಿಸಿ ಕುದಿ ಬರಿಸಿ. ಈಗ ಬಿಸಿ ಬಿಸಿ ಹೆಸರುಬೇಳೆ ಪಾಯಸ ಸವಿಯಲು ಸಿದ್ಧವಾಗಿದೆ.

5 ಸುಲಭ ಬ್ರೇಕ್ ಫಾಸ್ಟ್ ರೆಸಿಪಿಗಳು – ರೈಸ್ ಬಾತ್ / ಪಲಾವ್ / ಪ್ರೈಡ್ ರೈಸ್..!

3 ಸುಲಭ ಮತ್ತು ಬಹಳ ರುಚಿಕರ ಮೊಟ್ಟೆಯಿಂದ ತಯಾರಿಸಬಹುದಾದ ಅಡುಗೆಗಳು..!

5 ಸುಲಭ ಮತ್ತು ರುಚಿಕರ ಸಿಹಿ ತಿನಿಸುಗಳು ರೆಸಿಪಿಗಳು ನಿಮಗಾಗಿ..!

5 ವಿವಿಧ ಬಗೆಯ ರುಚಿಕರ ವಡೆಗಳ ರೆಸಿಪಿಗಳು

5 ವಿವಿಧ ಬಗೆಯ ರುಚಿಕರ ಬೋಂಡಾಗಳ ರೆಸಿಪಿಗಳು ನಿಮಗಾಗಿ..!

Tags: #saakshatvcookingFood
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram