ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
October 27, 2021
in Cooking, Newsbeat, ಅಡುಗೆ
Fasting - food - sawan
Share on FacebookShare on TwitterShare on WhatsappShare on Telegram

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

1. ತರಕಾರಿಗಳಿಲ್ಲದ ಸರಳವಾದ ಸಾಂಬಾರ್ 

ಬೇಕಾಗುವ ‌ಸಾಮಾಗ್ರಿಗಳು

Related posts

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

June 24, 2026
ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

June 24, 2026

ತೊಗರಿ ಬೇಳೆ (ದಾಲ್) – 11/2 ಕಪ್
ಮಧ್ಯಮ ಗಾತ್ರದ ಈರುಳ್ಳಿ 1
ನೀರು 4 ಕಪ್
ರುಚಿಗೆ ತಕ್ಕಷ್ಟು ಉಪ್ಪು
ಹುಣಸೆಹಣ್ಣಿನ ಪೇಸ್ಟ್ 1 ಟೀಸ್ಪೂನ್
ಅರಿಶಿನ ಪುಡಿ 1/2 ಟೀಸ್ಪೂನ್
ಕೆಂಪು ಮೆಣಸಿನ ಪುಡಿ 1 ಟೀಸ್ಪೂನ್
ಕೊತ್ತಂಬರಿ ಹುಡಿ 2 ಟೀಸ್ಪೂನ್
ಮೆಂತ್ಯ ಹುಡಿ ‌1/4 ಟೀಸ್ಪೂನ್
ಸಾಂಬಾರ್ ಪುಡಿ (ಸಾಂಬಾರ್ ಮಸಾಲ) 2 ಟೀಸ್ಪೂನ್
Saakshatv cooking recipes Simple Sambar

Saakshatv cooking recipes Simple Sambar

ಮಾಡುವ ವಿಧಾನ

1 ಟೀಸ್ಪೂನ್ ಹುಣಸೆಹಣ್ಣಿನ ಪೇಸ್ಟ್ ಅನ್ನು ನೀರಿನಲ್ಲಿ ಸುಮಾರು 5 ರಿಂದ 10 ನಿಮಿಷ ನೆನೆಸಿ ಫಿಲ್ಟರ್ ಮಾಡಿ ಇಡಿ.
ನಂತರ ತೊಗರಿಬೇಳೆಯನ್ನು ಚೆನ್ನಾಗಿ ತೊಳೆದು ಕುಕ್ಕರ್ ನಲ್ಲಿ ಹೋಳು ಮಾಡಿದ ಈರುಳ್ಳಿ ಜೊತೆಗೆ 2 ಕಪ್ ನೀರು ಸೇರಿಸಿ ಬೇಯಿಸಿ.
Saakshatv cooking recipes Simple Sambar
ಕುಕ್ಕರ್‌ನಲ್ಲಿ 3 ವಿಸಿಲ್ ಹಾಕಿಸಿ. ನಂತರ ಪಾತ್ರೆಗೆ ವರ್ಗಾಯಿಸಿ.
ಇದಕ್ಕೆ ಉಳಿದ 2 ಕಪ್ ನೀರು, ಹುಣಸೆಹಣ್ಣು, ಉಪ್ಪು ಮತ್ತು ಅರಿಶಿನ ಪುಡಿ, ಕೆಂಪು ಮೆಣಸಿನ ಪುಡಿ, ಕೊತ್ತಂಬರಿ ಹುಡಿ, ಮೆಂತ್ಯ ಹುಡಿ ಮತ್ತು ಸಾಂಬಾರ್ ಮಸಾಲೆ ಸೇರಿಸಿ, ಚೆನ್ನಾಗಿ ಬೆರೆಸಿ. ಒಂದೆರಡು ನಿಮಿಷಗಳ ಕಾಲ ಮಧ್ಯಮ ಜ್ವಾಲೆಯಲ್ಲಿ ಕುದಿಸಿ.‌ ಈಗ ಬಿಸಿ ಬಿಸಿಯಾದ ಸಾಂಬಾರ್ ಸವಿಯಲು ಸಿದ್ಧವಾಗಿದೆ.
ಈ ಸರಳವಾದ ಸಾಂಬಾರ್ ಇಡ್ಲಿ ಅಥವಾ ದೋಸೆ ಅಥವಾ ಅನ್ನದೊಂದಿಗೆ ಸವಿಯಲು ರುಚಿಕರವಾಗಿರುತ್ತದೆ.

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

2. ಬೇಸಿಗೆಯ ಬಿರು ಬಿಸಿಲಿಗೆ ತಂಪಾದ ಸಾಗು/ಸಬ್ಬಕ್ಕಿ ಖೀರು

ಬೇಕಾಗುವ ಸಾಮಗ್ರಿಗಳು

ಸಾಗು/ಸಬ್ಬಕ್ಕಿ 1ಕಪ್
ನೀರು 1ಕಪ್
ಸಕ್ಕರೆ 1ಕಪ್
ಹಾಲು 1/2 ಲೀಟರ್
ತುಪ್ಪ ಸ್ವಲ್ಪ
ಗೋಡಂಬಿ, ಒಣ ದ್ರಾಕ್ಷಿ ಸ್ವಲ್ಪ
ಏಲಕ್ಕಿ ಹುಡಿ 1/4 ಚಮಚ
Saakshatv cooking recipes sabbakki kheer
Saakshatv cooking recipes sabbakki kheer

ಮಾಡುವ ವಿಧಾನ

ಮೊದಲಿಗೆ ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ 1ಕಪ್ ಸಬ್ಬಕ್ಕಿಯನ್ನು ಹುರಿದು ಇಟ್ಟು ಕೊಳ್ಳಿ.
ಬಳಿಕ ಒಂದು ಪಾತ್ರೆಯಲ್ಲಿ ನೀರು ಕುದಿಸಿ. ನಂತರ ಸಬ್ಬಕ್ಕಿಯನ್ನು ಸೇರಿಸಿ ಕುದಿಯಲು ಬಿಡಿ. ಸಬ್ಬಕ್ಕಿ ಬೆಂದ ಬಳಿಕ ಅದಕ್ಕೆ ಒಂದು ಕಪ್ ಸಕ್ಕರೆ ಸೇರಿಸಿ. ಸಕ್ಕರೆ ಕರಗಿದ ಬಳಿಕ ಸ್ಟವ್ ಆಫ್ ಮಾಡಿ.
ಈಗ ಒಂದು ಚಿಕ್ಕ ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ, ಗೋಡಂಬಿ, ಒಣ ದ್ರಾಕ್ಷಿಗಳನ್ನು ಹುರಿಯಿರಿ. ‌ ನಂತರ ಇದನ್ನು ಸಬ್ಬಕ್ಕಿ ಖೀರಿಗೆ ಸೇರಿಸಿ, ಕಲಸಿ.
Saakshatv cooking recipes sabbakki kheer
ಸಬ್ಬಕ್ಕಿ ಖೀರು ತಣ್ಣಗಾದ ಮೇಲೆ ಬೇಕಾದಷ್ಟು ಹಾಲು ಸೇರಿಸಿ ಕಲಸಿ. ಇದನ್ನು ರೆಫ್ರಿಜರೇಟರ್ ನಲ್ಲಿಟ್ಟು ತಣ್ಣಗಾದ ಮೇಲೆ ಸರ್ವ್ ಮಾಡಿ.

5 ವಿಭಿನ್ನ , ಸುಲಭ ಹಾಗೂ ರುಚಿಕರ ಅಡುಗೆಗಳ ರೆಸಿಪಿಗಳು..!

3. ಸಬಕ್ಕಿ/ಸಾಬುದಾನಾ ವಡಾ

ಬೇಕಾಗುವ ಸಾಮಗ್ರಿಗಳು

ಸಬಕ್ಕಿ/ಸಾಬುದಾನಾ – 2 ಕಪ್
ನೆಲಕಡಲೆ/ಶೇಂಗಾ – ಕಾಲು ಕಪ್
ಬೇಯಿಸಿದ ಆಲೂಗಡ್ಡೆ-2-3
ಹಸಿಮೆಣಸಿನಕಾಯಿ ಶುಂಠಿ ಪೇಸ್ಟ್
ರುಚಿಗೆ ತಕ್ಕಷ್ಟು ಉಪ್ಪು
ಕೊತಂಬರಿ ಸೊಪ್ಪು- ಸ್ವಲ್ಪ
ಕರಿಯಲು ಎಣ್ಣೆ
Saakshatv cooking recipes Sabudaanaa vada

ಮಾಡುವ ವಿಧಾನ
ಸಬಕ್ಕಿ/ಸಾಬುದಾನಾ ಕಾಳುಗಳನ್ನು 1 ರಿಂದ 2 ಬಾರಿ ಗಂಜಿ ಹೋಗುವವರೆಗೆ ಚೆನ್ನಾಗಿ ನೀರಿನಿಂದ ತೊಳೆಯಿರಿ.
ನಂತರ ಸಾಬುದಾನಾ ಕಾಳುಗಳನ್ನು ಬೌಲ್‍ಗೆ ವರ್ಗಾಯಿಸಿ ಕಾಳುಗಳು ಮುಳುಗುವಷ್ಟು ನೀರು ಹಾಕಿ 5-6 ಗಂಟೆ ನೆನೆಯಲು ಬಿಡಿ.

ನೆಲಕಡಲೆ/ಶೇಂಗಾ ಹುರಿದು ತರಿ ತರಿಯಾಗಿ ಪುಡಿ ಮಾಡಿ..
ಬೇಯಿಸಿದ ಆಲೂಗಡ್ಡೆಯ ಸಿಪ್ಪೆ ತೆಗೆದು ಪುಡಿ ಮಾಡಿಟ್ಟುಕೊಳ್ಳಿ. ಅದಕ್ಕೆ ಕೊತಂಬರಿ ಸೊಪ್ಪು ತೊಳೆದು ಹೆಚ್ಚಿ ಹಾಕಿ.
ಈಗ ಒಂದು ಪಾತ್ರೆಯಲ್ಲಿ ನೆನೆಸಿಕೊಂಡ ಸಬ್ಬಕ್ಕಿ/ಸಾಬುದಾನ, ನೆಲಕಡಲೆ/ಶೇಂಗಾ ಪುಡಿ, ಪುಡಿ ಮಾಡಿದ ಆಲೂಗಡ್ಡೆ, ಕೊತಂಬರಿ ಸೊಪ್ಪು , ಹಸಿ ಮೆಣಸಿನಕಾಯಿ ಶುಂಠಿ ಪೇಸ್ಟ್, ಉಪ್ಪು ಎಲ್ಲವನ್ನೂ ಹಾಕಿ ಒಟ್ಟಿಗೆ ಚೆನ್ನಾಗಿ ಮಿಶ್ರಮಾಡಿ.
Saakshatv cooking recipes Sabudaanaa vada

ಇವೆಲ್ಲವನ್ನು ಒಂದು ಹಿಟ್ಟಿನ ಮುದ್ದೆಯಂತೆ ಮಾಡಿ ಚೆನ್ನಾಗಿ ನಾದಿ. ಬಳಿಕ ಸಣ್ಣ ಸಣ್ಣ ಉಂಡೆಗಳನ್ನು ತಯಾರಿಸಿ, ಸ್ವಲ್ಪ ಚಪ್ಪಟೆಯ ಆಕಾರಕ್ಕೆ ತಿರುಗಿಸಿ ಟಿಕ್ಕಿಯನ್ನು ತಯಾರಿಸಿ.
ಈಗ ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ, ಟಿಕ್ಕಿಯನ್ನು ಬಿಡಿ. ಎರಡೂ ಬದಿಯನ್ನು ಹೊಂಬಣ್ಣಕ್ಕೆ ಬರುವವರೆಗೆ ಚೆನ್ನಾಗಿ ಬೇಯಿಸಿ.
ಬಿಸಿ ಬಿಸಿ ಕ್ರಿಸ್ಪಿ , ಕ್ರಂಚಿ ಸಬಕ್ಕಿ/ಸಾಬುದಾನಾ ವಡಾವನ್ನು ಗ್ರೀನ್ ಚಟ್ನಿ ಮತ್ತು ಟೊಮ್ಯಾಟೋ ಸಾಸ್ ಜೊತೆ ಸವಿಯಿರಿ.

4 ವಿವಿಧ ಬಗೆಯ ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

4. ಧಿಡೀರ್ (instant) ಅವಲಕ್ಕಿ ಗೋಧಿ ಹಿಟ್ಟು ಲಡ್ಡು

ಬೇಕಾಗುವ ಸಾಮಗ್ರಿಗಳು

ಗೋಧಿ ಹಿಟ್ಟು 1 ಕಪ್
ತುಪ್ಪ 1ಕಪ್
ಅವಲಕ್ಕಿ 1 ಕಪ್
ಗೋಡಂಬಿ, ಬಾದಾಮಿ ಸ್ವಲ್ಪ
ಏಲಕ್ಕಿ ಪುಡಿ 1 ಚಮಚ
ಸಕ್ಕರೆ ಪುಡಿ 1 1/2 ಕಪ್
Saakshatv cooking recipes instant laddu
Saakshatv cooking recipes wheat laddu

ಮಾಡುವ ವಿಧಾನ

ಅವಲಕ್ಕಿಯನ್ನು ಸಣ್ಣ ಉರಿಯಲ್ಲಿ 5 ನಿಮಿಷ ಹುರಿದು ಪುಡಿ ಮಾಡಿ.
ಒಂದು ಬಾಣಲೆಗೆ 1/2 ಕಪ್ ತುಪ್ಪ ಹಾಕಿ ಬಿಸಿ ಮಾಡಿ. ನಂತರ ಬಾದಾಮಿ ಗೋಡಂಬಿ ಹಾಕಿ ಹುರಿದು ತೆಗೆದಿಟ್ಟುಕೊಳ್ಳಬೇಕು.
ನಂತರ ಅದೇ ಬಾಣಲೆಗೆ ಉಳಿದ ತುಪ್ಪ ಹಾಕಿ ಬಿಸಿ ಮಾಡಿ. ನಂತರ ಗೋಧಿ ಹಿಟ್ಟು ಹಾಕಿ ಹಸಿ ವಾಸನೆ ಹೋಗುವವರೆಗೆ ಹುರಿಯಿರಿ. ಈಗ ಮೊದಲೇ ಹುರಿದು ಪುಡಿ ಮಾಡಿಕೊಂಡ ಅವಲಕ್ಕಿ ಸೇರಿಸಿ.
Saakshatv cooking recipes wheat laddu
ಅದಕ್ಕೆ ಸಕ್ಕರೆ ಪುಡಿ , ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿ ನಂತರ ಸ್ಟವ್ ಆಫ್ ಮಾಡಿ. ಸ್ವಲ್ಪ ತಣ್ಣಗಾದ ನಂತರ ನಿಮಗೆ ಬೇಕಾದ ಅಳತೆಗೆ ಲಡ್ಡುಗಳನ್ನು ತಯಾರಿಸಿ

5 ವಿವಿಧ ಬಗೆಯ ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

5. ಗೋಧಿ ಹಿಟ್ಟಿನ ಲಡ್ಡು

ಬೇಕಾಗುವ ಸಾಮಗ್ರಿಗಳು

ಗೋಧಿ ಹುಡಿ 1ಕಪ್
ಮಿಲ್ಕ್ ಮೇಡ್ 3/4 ಕಪ್
ಏಲಕ್ಕಿ ಪುಡಿ 1/4 ಚಮಚ
ತುಪ್ಪ 2 1/2 ಚಮಚ.
ಹುರಿದ ಗೋಡಂಬಿ, ದ್ರಾಕ್ಷಿ ಸ್ವಲ್ಪ
ಕಾಯಿಸಿದ ಹಾಲು 4 ಚಮಚ
Saakshatv cooking recipes wheat laddu
Saakshatv cooking recipes wheat laddu

ಮಾಡುವ ವಿಧಾನ
ಮೊದಲಿಗೆ ಬಾಣಲೆಗೆ ಗೋಧಿ ಹುಡಿ ಹಾಕಿ ಮಧ್ಯಮ ಉರಿಯಲ್ಲಿ 3 ನಿಮಿಷ ಹುರಿಯಿರಿ. ನಂತರ ಸ್ಟವ್ ಆಫ್ ಮಾಡಿ ಬಾಣಲೆಯನ್ನು ಕೆಳಗಿಳಿಸಿ.
Saakshatv cooking recipes wheat laddu
ನಂತರ ಅದಕ್ಕೆ ಮಿಲ್ಕ್ ಮೇಡ್ ಸೇರಿಸಿ ಚೆನ್ನಾಗಿ ಬೆರೆಸಿ. ಬಳಿಕ ಇದಕ್ಕೆ ತುಪ್ಪ ಏಲಕ್ಕಿ ಪುಡಿ, ಗೋಡಂಬಿ ,ದ್ರಾಕ್ಷಿ, ಹಾಲು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ವಲ್ಪ ತಣ್ಣಗಾದ ನಂತರ ಕೈಗೆ ಸ್ವಲ್ಪ ತುಪ್ಪ ಸವರಿ ಗೋಧಿ ಲಡ್ಡುಗಳನ್ನು ತಯಾರಿಸಿ. ಗೋಧಿ ಲಡ್ಡುಗಳನ್ನು ಗಾಳಿಯಾಡದ ಡಬ್ಬದಲ್ಲಿ ಸಂಗ್ರಹಿಸಿ.

ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

ವಿಭಿನ್ನ ಸಾರು / ಗೊಜ್ಜು / ಗ್ರೇವಿ / ಚೆಟ್ನಿಗಳ ರೆಸಿಪಿಗಳು..!

4 ವಿಭಿನ್ನ ಸಿಹಿ ತಿನಿಸುಗಳ ರೆಸಿಪಿಗಳು

ಆಲೂಗಡ್ಡೆ ರೈಸ್

3 ರುಚಿಕರ ಅಡುಗೆಗಳ ರೆಸಿಪಿಗಳು

ನವರಾತ್ರಿಗೆ ಪ್ರತಿದಿನ ಮಾಡಿ ವಿವಿಧ ರೀತಿಯ ಸಿಹಿ ತಿಂಡಿಗಳು..! ಇಲ್ಲಿವೆ 15 ರೆಸಿಪಿಗಳು

Tags: #saakshatvcookingFoodtasty food recipies
ShareTweetSendShare
Join us on:

Related Posts

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

by Shwetha
June 24, 2026
0

ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಯೋಜನೆ ಬೆಂಬಲಿಸುವ ಶಾಸಕರಿಗೆ ನಿವೇಶನ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

ಸ್ಟಾಲಿನ್ ಶೈಲಿಯಲ್ಲೇ DMKಗೆ ತಿರುಗೇಟು ನೀಡಿದ ಸಿಎಂ ವಿಜಯ್

by Shwetha
June 24, 2026
0

ತಮಿಳುನಾಡು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರದ ನಡುವೆ ಮುಖ್ಯಮಂತ್ರಿ ವಿಜಯ್ ಅವರು DMK ನಾಯಕರ ವಿರುದ್ಧ ತಿರುಗೇಟು ನೀಡಿದ್ದಾರೆ. TVK ಸರ್ಕಾರವನ್ನು...

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

by Shwetha
June 24, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ದೇಶದ ನಾಲ್ಕು ಬೇರೆ ಬೇರೆ ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram