ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Cooking : 5 ವಿಭಿನ್ನ , ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ

Namratha Rao by Namratha Rao
February 12, 2022
in Cooking, Newsbeat, ಅಡುಗೆ
Share on FacebookShare on TwitterShare on WhatsappShare on Telegram

 ವೆನ್ನಿಲ್ಲಾ ಐಸ್ ಕ್ರೀಮ್ 

ಹಾಲು – 3 ಕಪ್
ಮಿಲ್ಕ್ ಮೇಡ್ – 1 ಕಪ್
ಕಸ್ಟರ್ಡ್ ಪೌಡರ್ – 2 ಚಮಚ
ವಿಪ್ಪಿಂಗ್ ಕ್ರೀಮ್ 150 ಗ್ರಾಂ
ವೆನಿಲ್ಲಾ ಎಸೆನ್ಸ್ – 1 ಚಮಚ
ಮೊದಲನೆಯದಾಗಿ ಹಾಲನ್ನು ಚೆನ್ನಾಗಿ ಕಾಯಿಸಿ. ಹಾಲು ಕುದಿ ಬಂದಾಗ ಅದಕ್ಕೆ ಎರಡು ಚಮಚ ಕಸ್ಟರ್ಡ್ ಪೌಡರ್ ಕರಗಿಸಿ ಹಾಕಿ. ಪುನಃ ಹಾಲನ್ನು ಕುದಿ ಬರುವವರೆಗೆ ಚೆನ್ನಾಗಿ ಕಾಯಿಸಿ. ನಂತರ ಹಾಲನ್ನು ಆರಲು ಬಿಡಿ.
ಹಾಲು ಆರಿದ ಬಳಿಕ ‌ಅದಕ್ಕೆ ವೆನಿಲಾ ಎಸೆನ್ಸ್ ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ಒಂದು ಪಾತ್ರೆಗೆ ವಿಪ್ಪಿಂಗ್ ಕ್ರೀಂ ಹಾಕಿ, ಹ್ಯಾಂಡ್ ಮಿಕ್ಸರ್ ನಿಂದ ಹತ್ತು ನಿಮಿಷ ಬ್ಲೆಂಡ್ ಮಾಡಿ. ಇದಕ್ಕೆ ಮಿಲ್ಕ್ ಮೇಡ್, ಆರಿದ ಹಾಲನ್ನು ಸೇರಿಸಿ. 2 ನಿಮಿಷ ಚೆನ್ನಾಗಿ ಮಿಕ್ಸ್ ಮಾಡಿ ಗ್ಲಾಸ್ ಅಥವಾ ಮೆಟಲ್ ಕಂಟೈನರ್ ಗೆ ಹಾಕಿ ಸೆಟ್ ಆಗಲು ಬಿಡಿ. ಬಳಿಕ ಡೀಪ್ ಫ್ರೀಜರ್ ನಲ್ಲಿಡಿ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

cooking - ice cream recipies - saakshatv

ಎರಡು ಗಂಟೆಯ ಬಳಿಕ ಮತ್ತೆ ಹ್ಯಾಂಡ್ ಮಿಕ್ಸರ್ ನಿಂದ ಚೆನ್ನಾಗಿ ಬ್ಲೆಂಡ್ ಮಾಡಿ, ಫ್ರೀಜ್ ನಲ್ಲಿಟ್ಟು, ನಾಲ್ಕು ಗಂಟೆಗಳ ತನಕ ಸೆಟ್ ಆಗಲು ಬಿಡಿ. ಈಗ ಪುನಃ ತೆಗೆದು ಹ್ಯಾಂಡ್ ಮಿಕ್ಸರ್ ನಿಂದ ಒಂದು ನಿಮಿಷ ಚೆನ್ನಾಗಿ ಕಲಸಿ ನಂತರ ಗಾಳಿಯಾಡದ( air tight) ಕಂಟೈನರ್ ಅಥವಾ ಐಸ್ ಕ್ರೀಂ ಬಾಕ್ಸ್ ಗೆ ಹಾಕಿ ಗಟ್ಟಿಯಾಗಿ ಮುಚ್ಚಳ ಮುಚ್ಚಿ 10 ರಿಂದ 12 ಗಂಟೆ ಫ್ರೀಜರ್ ನಲ್ಲಿಟ್ಟು ಸವಿಯಿರಿ.

ಅವಲಕ್ಕಿ ಲಡ್ಡು

ಬೇಕಾಗುವ ಸಾಮಗ್ರಿಗಳು

ಗೋಧಿ ಹಿಟ್ಟು 1 ಕಪ್
ತುಪ್ಪ 1ಕಪ್
ಅವಲಕ್ಕಿ 1 ಕಪ್
ಗೋಡಂಬಿ, ಬಾದಾಮಿ ಸ್ವಲ್ಪ
ಏಲಕ್ಕಿ ಪುಡಿ 1 ಚಮಚ
ಸಕ್ಕರೆ ಪುಡಿ 1 1/2 ಕಪ್

cooking recipies - saakshatv

ಅವಲಕ್ಕಿಯನ್ನು ಸಣ್ಣ ಉರಿಯಲ್ಲಿ 5 ನಿಮಿಷ ಹುರಿದು ಪುಡಿ ಮಾಡಿ.
ಒಂದು ಬಾಣಲೆಗೆ 1/2 ಕಪ್ ತುಪ್ಪ ಹಾಕಿ ಬಿಸಿ ಮಾಡಿ. ನಂತರ ಬಾದಾಮಿ ಗೋಡಂಬಿ ಹಾಕಿ ಹುರಿದು ತೆಗೆದಿಟ್ಟುಕೊಳ್ಳಬೇಕು.
ನಂತರ ಅದೇ ಬಾಣಲೆಗೆ ಉಳಿದ ತುಪ್ಪ ಹಾಕಿ ಬಿಸಿ ಮಾಡಿ. ನಂತರ ಗೋಧಿ ಹಿಟ್ಟು ಹಾಕಿ ಹಸಿ ವಾಸನೆ ಹೋಗುವವರೆಗೆ ಹುರಿಯಿರಿ. ಈಗ ಮೊದಲೇ ಹುರಿದು ಪುಡಿ ಮಾಡಿಕೊಂಡ ಅವಲಕ್ಕಿ ಸೇರಿಸಿ.
ಅದಕ್ಕೆ ಸಕ್ಕರೆ ಪುಡಿ , ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿ ನಂತರ ಸ್ಟವ್ ಆಫ್ ಮಾಡಿ. ಸ್ವಲ್ಪ ತಣ್ಣಗಾದ ನಂತರ ನಿಮಗೆ ಬೇಕಾದ ಅಳತೆಗೆ ಲಡ್ಡುಗಳನ್ನು ತಯಾರಿಸಿ.

ಪಾವ್ ಭಾಜಿ 

ಬೇಕಾಗುವ ಸಾಮಗ್ರಿಗಳು
ಆಲೂಗಡ್ಡೆ – 3
ಹೂಕೋಸು – 11/2 ಕಪ್
ಕ್ಯಾರೆಟ್ – 1/2 ಕಪ್
ಬಟಾಣಿ – 1/2 ಕಪ್
ಈರುಳ್ಳಿ -2
ಟೊಮ್ಯಾಟೊ – 2
ಕ್ಯಾಪ್ಸಿಕಂ -1
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಟೀಸ್ಪೂನ್
ಎವರೆಸ್ಟ್ ಪಾವ್ ಭಾಜಿ ಮಸಾಲ – 2 ಟೀಸ್ಪೂನ್
ಮೆಣಸಿನ ಪುಡಿ – 2 ಟೀಸ್ಪೂನ್
ರುಚಿಗೆ ತಕ್ಕಷ್ಟು ಉಪ್ಪು

ಮೊದಲಿಗೆ ಆಲೂಗಡ್ಡೆ, ಹೂಕೋಸು, ಕ್ಯಾರೆಟ್ ಮತ್ತು ಬಟಾಣಿಗಳನ್ನು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ.‌ ನಂತರ ಆಲೂಗಡ್ಡೆಯ ಸಿಪ್ಪೆ ತೆಗೆದು ಎಲ್ಲವನ್ನು ಹುಡಿ ಮಾಡಿ ಮತ್ತು ಪಕ್ಕದಲ್ಲಿ ಇರಿಸಿಕೊಳ್ಳಿ.

pav bhaji - saakshatv

ನಂತರ ಈರುಳ್ಳಿ, ಟೊಮ್ಯಾಟೊ ಮತ್ತು ಕ್ಯಾಪ್ಸಿಕಂ ಅನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ. ಬಳಿಕ ಬಾಣಲೆಯಲ್ಲಿ 1 ಟೀಸ್ಪೂನ್ ಬೆಣ್ಣೆಯನ್ನು ಬಿಸಿ ಮಾಡಿ. ‌ನಂತರ ಅದಕ್ಕೆ ಕತ್ತರಿಸಿದ ಈರುಳ್ಳಿ ಸೇರಿಸಿ ಮಧ್ಯಮ ಉರಿಯಲ್ಲಿ ಕಂದು ಬಣ್ಣಕ್ಕೆ ತಿರುಗುವವರೆಗೆ ಹುರಿಯಿರಿ. ಬಳಿಕ ಕತ್ತರಿಸಿದ ಕ್ಯಾಪ್ಸಿಕಂ ಮತ್ತು ಟೊಮೆಟೊ ಸೇರಿಸಿ. ಟೊಮೆಟೊ ಮೃದುವಾಗುವವರೆಗೆ ಬೇಯಿಸಿ. ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ಮತ್ತು ಉತ್ತಮ ಸುವಾಸನೆ ಬರುವವರೆಗೆ ಹುರಿಯಿರಿ. ಈಗ ಅದಕ್ಕೆ ಬೇಯಿಸಿ ಪುಡಿ ಮಾಡಿದ ತರಕಾರಿಗಳನ್ನು ಸೇರಿಸಿ. ರುಚಿಗೆ ತಕ್ಕಷ್ಟು ಉಪ್ಪು, ಎವರೆಸ್ಟ್ ಪಾವ್ ಭಾಜಿ ಮಸಾಲ ಮತ್ತು ಮೆಣಸಿನ ಪುಡಿ ಸೇರಿಸಿ. ಚೆನ್ನಾಗಿ ಬೆರೆಸಿ. ಮಧ್ಯಮ ಉರಿಯಲ್ಲಿ ಸುಮಾರು 10 ನಿಮಿಷ ಬೇಯಿಸಿ. ಕೊನೆಯದಾಗಿ ಸ್ವಲ್ಪ ಬೆಣ್ಣೆ ಮತ್ತು ಕತ್ತರಿಸಿದ ಕೊತ್ತಂಬರಿ ಸೊಪ್ಪನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.

 

ಕ್ಯಾರೆಟ್ – 4
ದಪ್ಪ ಹಾಲು – 3/4 ಲೀಟರ್
ತುಪ್ಪ ‌- 3 ಚಮಚ
ಡ್ರೈ ಫ್ರೂಟ್ಸ್ – ಸ್ವಲ್ಪ
ರುಚಿಗೆ ತಕ್ಕಷ್ಟು ಸಕ್ಕರೆ

ಮೊದಲಿಗೆ ದ್ರಾಕ್ಷಿ ಗೋಡಂಬಿಗಳನ್ನು ತುಪ್ಪದಲ್ಲಿ ಕರಿದು ‌ಇಟ್ಟುಕೊಳ್ಳಿ. ನಂತರ ಕ್ಯಾರೆಟ್ ಅನ್ನು ತುರಿದುಕೊಳ್ಳಿ. ಕುಕ್ಕರ್ ಗೆ ಹಾಲು, ತುರಿದ ಕ್ಯಾರೆಟ್ ಹಾಕಿ ಒಂದು ವಿಸಲ್ ಬರುವವರೆಗೆ ಬೇಯಿಸಿಕೊಳ್ಳಿ. ನಂತರ ರುಚಿಗೆ ತಕ್ಕಷ್ಟು ‌ಸಕ್ಕರೆ, ತುಪ್ಪ ಸೇರಿಸಿ ‌ಚೆನ್ನಾಗಿ ಮಿಶ್ರ ಮಾಡಿ. ನೀರಿನಂಶ ಹಿಂಗಿ ಕ್ಯಾರೆಟ್ ಡ್ರೈ ಆಗುವವರೆಗೂ ‌ಸೌಟ್ ನಿಂದ ಕೈಯಾಡಿಸುತ್ತಾ ಇರಿ. ನಂತರ ತುಪ್ಪದಲ್ಲಿ ಕರಿದ ದ್ರಾಕ್ಷಿ ಗೋಡಂಬಿ ಸೇರಿಸಿ. ಈಗ ರುಚಿಯಾದ ಕ್ಯಾರೆಟ್ ಹಲ್ವಾ ಸವಿಯಲು ಸಿದ್ಧವಾಗಿದೆ.

Saakshatv cooking recipe preparation of carrot halva

ಪಾಲಾಕ್ ಪನ್ನೀರ್

ಬೇಕಾಗುವ ಸಾಮಾಗ್ರಿಗಳು

2 ಕಟ್ಟು ಪಾಲಕ್ ಸೊಪ್ಪು
1 ಕಪ್ ಕತ್ತರಿಸಿದ ಈರುಳ್ಳಿ
1 ಕಪ್ ಕತ್ತರಿಸಿದ ಟೊಮೆಟೊ
1 ಟೀಸ್ಪೂನ್ ಹಸಿ ಮೆಣಸಿನಕಾಯಿ ಪೇಸ್ಟ್
1 ಟೀಸ್ಪೂನ್ ಶುಂಠಿ-ಬೆಳ್ಳುಳ್ಳಿ ಪೇಸ್ಟ್
1 ಕಪ್ ಹುರಿದ ಪನೀರ್ ತುಂಡುಗಳು
1/4 ಕಪ್ ಗೋಡಂಬಿ ಬೀಜಗಳು
1 ಒಣ ಕೆಂಪು ಮೆಣಸಿನಕಾಯಿ
1 ಟೀಸ್ಪೂನ್ ಗರಂ ಮಸಾಲ
ರುಚಿಗೆ ತಕ್ಕಷ್ಟು ‌ಉಪ್ಪು
1 ಟೀಸ್ಪೂನ್ ಎಣ್ಣೆ ಅಥವಾ ಬೆಣ್ಣೆ
1/2 ಟೀಸ್ಪೂನ್ ಜೀರಿಗೆ
1/2 ಟೀಸ್ಪೂನ್ ಕೆಂಪು ಮೆಣಸಿನ ಪುಡಿ
1-2 ಟೀಸ್ಪೂನ್ ಕಸೂರಿ ಮೆತಿ (optional)
ಚಿಟಕಿಯಷ್ಟು ಇಂಗು
Saakshatv cooking recipes Palak Paneer

 

ಮಾಡುವ ವಿಧಾನ

ಮೊದಲು ಬಾಣಲೆಯಲ್ಲಿ ನೀರನ್ನು ಕುದಿಸಿ ಅದಕ್ಕೆ ಒಂದು ಚಮಚ ಉಪ್ಪು ಸೇರಿಸಿ ಮತ್ತು 2 ನಿಮಿಷಗಳ ಕಾಲ ಪಾಲಕ್ ಸೊಪ್ಪುಗಳನ್ನು ಆ ನೀರಿನಲ್ಲಿ ‌ಹಾಕಿ ಬೇಯಿಸಿ.

ಈಗ ನೀರಿನಿಂದ ಪಾಲಕ್ ತೆಗೆದು ಕತ್ತರಿಸಿ ಮಿಕ್ಸರ್ ಜಾರ್‌ನಲ್ಲಿ ಹಾಕಿ. ನಯವಾಗಿ ಗ್ರೈಂಡ್ ಮಾಡಿ ಪ್ಯೂರೀಯನ್ನು ತಯಾರಿಸಿ ಪಕ್ಕದಲ್ಲಿ ಇರಿಸಿಕೊಳ್ಳಿ.

ಈಗ ಬಾಣಲೆಯಲ್ಲಿ ಎಣ್ಣೆ ಅಥವಾ ಬೆಣ್ಣೆಯನ್ನು ಬಿಸಿ ಮಾಡಿ. ನಂತರ ಜೀರಿಗೆ, ಒಣ ಕೆಂಪು ಮೆಣಸಿನಕಾಯಿ, ಈರುಳ್ಳಿ, ಗೋಡಂಬಿ ಬೀಜ ಸೇರಿಸಿ ಮತ್ತು ಈರುಳ್ಳಿ ಕೆಂಪಗಾಗುವವರೆಗೆ ಹುರಿಯಿರಿ.

ಈಗ ಕತ್ತರಿಸಿದ ಟೊಮೆಟೊ ಸೇರಿಸಿ ಮತ್ತು ಮೃದುವಾಗುವವರೆಗೆ ಬೇಯಿಸಿ.

ಅದಕ್ಕೆ ಹಸಿ ಮೆಣಸಿನಕಾಯಿ ಪೇಸ್ಟ್, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಕೆಂಪು ಮೆಣಸಿನ ಪುಡಿ, ಗರಂ ಮಸಾಲ, ಕಸೂರಿ ಮೆತಿ‌ ಹುಡಿ, ಉಪ್ಪು ಸೇರಿಸಿ ಎಣ್ಣೆ ಬೇರ್ಪಡುವವರೆಗೆ ಬೇಯಿಸಿ.
ನಂತರ ತಣ್ಣಗಾಗಲು ಬಿಡಿ. ಈಗ ಈ ಈರುಳ್ಳಿ ಮಿಶ್ರಣವನ್ನು ಮಿಕ್ಸರ್ ಜಾರ್‌ನಲ್ಲಿ ಬೆರೆಸಿ ನಯವಾದ ಪೇಸ್ಟ್ ಮಾಡಿ.
Saakshatv cooking recipes Palak Paneer

ಈಗ ಈ ಎರಡೂ ಪೇಸ್ಟ್ (ಪಾಲಕ ಪೇಸ್ಟ್ ಮತ್ತು ಮಸಾಲಾ ಪೇಸ್ಟ್)ಗಳನ್ನು ಒಂದೇ ಬಾಣಲೆಯಲ್ಲಿ ಸೇರಿಸಿ 3-4 ನಿಮಿಷ ಬೇಯಿಸಿ ಅಥವಾ ಕುದಿಯುವವರೆಗೆ ಬೇಯಿಸಿ.

ಅದಕ್ಕೆ ಹುರಿದ ಪನೀರ್ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ ಮತ್ತೆ ಕೆಲವು ನಿಮಿಷ ಬೇಯಿಸಿ. ರುಚಿಯಾದ ಪಾಲಕ್ ಪನೀರ್ ಸವಿಯಲು ಸಿದ್ಧವಾಗಿದೆ.

Tags: #saakshatvcookingFoodfood recipies
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram