ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ವಿವಿಧ ಬಗೆಯ ರುಚಿಕರ ,ಆರೋಗ್ಯಕರ ಚಟ್ನಿಗಳ ರೆಸಿಪಿಗಳು..! Food Recipies

Namratha Rao by Namratha Rao
January 6, 2022
in Cooking, Newsbeat, ಅಡುಗೆ
Cooking , food recipies
Share on FacebookShare on TwitterShare on WhatsappShare on Telegram

ವಿವಿಧ ಬಗೆಯ ರುಚಿಕರ ,ಆರೋಗ್ಯಕರ ಚಟ್ನಿಗಳ ರೆಸಿಪಿಗಳು..! Food Recipies

ಸೋರೆಕಾಯಿ ಚಟ್ನಿ

ಬೇಕಾಗುವ ಸಾಮಾಗ್ರಿಗಳು

Related posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026
ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

June 24, 2026

ಕಡಲೆಬೇಳೆ – ಸ್ವಲ್ಪ
ಉದ್ದಿನ ಬೇಳೆ – ಸ್ವಲ್ಪ
ಕೊಬ್ಬರಿ ತುರಿ – 1/2 ಕಪ್
ಒಣಮೆಣಸಿನಕಾಯಿ – 4
ಇಂಗು – ಚಿಟಿಕೆ
ಕೊತ್ತಂಬರಿ ಸೊಪ್ಪು – ಸ್ವಲ್ಪ
ಸೋರೆಕಾಯಿ ತುಂಡುಗಳು – 1 ಬಟ್ಟಲು
ಹುಣಸೆ ಹಣ್ಣು, ಉಪ್ಪು – ರುಚಿಗೆ ತಕ್ಕಷ್ಟು

ಮಾಡುವ ವಿಧಾನ

ಮೊದಲಿಗೆ ಸೋರೆಕಾಯಿ ತುಂಡುಗಳನ್ನು ಬೇಯಿಸಿ ಇಟ್ಟು ಕೊಳ್ಳಿ. ನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಕಡಲೆಬೇಳೆ, ಉದ್ದಿನ ಬೇಳೆ, ಕೊಬ್ಬರಿ ತುರಿ, ಒಣಮೆಣಸಿನಕಾಯಿ, ಇಂಗು ಗಳನ್ನು ಹುರಿದು ತೆಗೆಯಿರಿ.
Saakshatv cooking recipe sorekayi chutney

ತಣ್ಣಗಾದ ನಂತರ ಕೊತ್ತಂಬರಿ ಸೊಪ್ಪು, ಹುಣಸೆ ಹಣ್ಣು, ಉಪ್ಪು ಸೇರಿಸಿ ರುಬ್ಬಿ . ಸ್ವಲ್ಪ ‌ನುಣ್ಣಗಾದ ಬಳಿಕ ಬೇಯಿಸಿ ಇಟ್ಟುಕೊಂಡ ಸೋರೆಕಾಯಿ ತುಂಡುಗಳನ್ನು ಸೇರಿಸಿ ಚೆನ್ನಾಗಿ ರುಬ್ಬಿ.
ಇದನ್ನು ‌ಅನ್ನದ ಜೊತೆಗೆ ತಿನ್ನಲು ರುಚಿಯಾಗಿರುತ್ತದೆ. ಇದರಲ್ಲಿ ಕಬ್ಬಿಣದ ಅಂಶ ಇರುವುದರಿಂದ ಕಣ್ಣಿಗೆ ಒಳ್ಳೆಯದು.

 

ಕುಂಬಳಕಾಯಿ ಸಿಪ್ಪೆಯ ಚಟ್ನಿ

ಬೇಕಾಗುವ ಸಾಮಗ್ರಿಗಳು

ಕತ್ತರಿಸಿದ ಕುಂಬಳ ಕಾಯಿ ಸಿಪ್ಪೆ – 1ಕಪ್
ಹಸಿಮೆಣಸು -5 ರಿಂದ 6
ಬೆಳ್ಳುಳ್ಳಿ – 4 ರಿಂದ 5 ಎಸಳು
ಹೆಚ್ಚಿದ ಶುಂಠಿ -1ಚಮಚ
ಉದ್ದಿನ ಬೇಳೆ -1ಚಮಚ
ಎಳ್ಳು -1ಚಮಚ
ಹುಣಸೆಹಣ್ಣು ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ – 1 ಚಮಚ

ಮಾಡುವ ವಿಧಾನ

Saakshatv cooking recipe kumbalakai sippe chutney
ಮೊದಲಿಗೆ ಕತ್ತರಿಸಿದ ಕುಂಬಳಕಾಯಿ ಸಿಪ್ಪೆಗಳನ್ನು 5 ನಿಮಿಷಗಳ ಕಾಲ ನೀರಿನಲ್ಲಿ ಕುದಿಸಿ.
ನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಅದಕ್ಕೆ ಉದ್ದಿನ ಬೇಳೆ, ಕುಂಬಳ ಕಾಯಿ ಸಿಪ್ಪೆ, ಕತ್ತರಿಸಿದ ಹಸಿ ಮೆಣಸು ಬೆಳ್ಳುಳ್ಳಿ, ಶುಂಠಿ,ಎಳ್ಳು ಹಾಕಿ ಬಾಡಿಸಿಕೊಳ್ಳಿ. ಅದು ತಣ್ಣಗಾದ ಬಳಿಕ ಬೆಲ್ಲ, ಉಪ್ಪು, ಹುಣಿಸೆಹಣ್ಣು ಸೇರಿಸಿ ಮಿಕ್ಸಿ ಜಾರಿಗೆ ಹಾಕಿ ಚೆನ್ನಾಗಿ ರುಬ್ಬಿ. ಈಗ ರುಚಿಯಾದ ಕುಂಬಳಕಾಯಿ ಸಿಪ್ಪೆಯ ಚಟ್ನಿ ರೆಡಿಯಾಗಿದೆ.

ಕೆಸುವಿನ ಚಟ್ನಿ

ಬೇಕಾಗುವ ‌ಸಾಮಾಗ್ರಿಗಳು

ಕೆಸುವಿನ ಎಲೆ – 1
ಉದ್ದಿನಬೇಳೆ – 1.5 ಚಮಚ
ದನಿಯಾ – 1/2 ಚಮಚ
ಮೆಣಸಿನಕಾಯಿ – 2
ಕರಿಬೇವು – ಸ್ವಲ್ಪ
ತೆಂಗಿನಕಾಯಿತುರಿ – 1 ಕಪ್
ಕತ್ತರಿಸಿದ ಮಾವಿನಕಾಯಿ – 3 ಚಮಚ
ರುಚಿಗೆ ತಕ್ಕಷ್ಟು ಉಪ್ಪು

ಒಗ್ಗರಣೆಗೆ
ತೆಂಗಿನ ಎಣ್ಣೆ – 2 ಚಮಚ
ಉದ್ದಿನಬೇಳೆ – 1 ಚಮಚ
ಸಾಸಿವೆ – 1 ಚಮಚ
ಕಡಲೆಬೇಳೆ – 1/2 ಚಮಚ
ಇಂಗು – ಚಿಟಕಿ
ಕರಿಬೇವು – ಸ್ವಲ್ಪ
ಮುರಿದ ಕೆಂಪು ಮೆಣಸು – 2
kesu chutney
ಮಾಡುವ ವಿಧಾನ

ಕೆಸುವಿನ ಎಲೆಯನ್ನು ತೊಳೆದು ಚಿಕ್ಕದಾಗಿ ಕತ್ತರಿಸಿ. ನಂತರ ನೀರು ಸೇರಿಸಿ ಬೇಯಿಸಿಕೊಳ್ಳಿ. ನಂತರ ಒಂದು ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ‌ಮಾಡಿ.‌ ನಂತರ
ಉದ್ದಿನಬೇಳೆ, ದನಿಯಾ, ಮೆಣಸಿನಕಾಯಿ, ಕರಿಬೇವು ಹಾಕಿ ಹುರಿದುಕೊಳ್ಳಿ.
ತಣ್ಣಗಾದ ನಂತರ ಅದಕ್ಕೆ ಬೇಯಿಸಿ ಇಟ್ಟುಕೊಂಡ ಕೆಸುವಿನ ಎಲೆ ಸೇರಿಸಿ. ನಂತರ ತೆಂಗಿನಕಾಯಿತುರಿ, ಮಾವಿನಕಾಯಿ, ಉಪ್ಪು ‌ಹಾಕಿ ಚೆನ್ನಾಗಿ ರುಬ್ಬಿ.
ನಂತರ ಬಾಣಲೆಯಲ್ಲಿ ತೆಂಗಿನ ಎಣ್ಣೆ ಬಿಸಿ ಮಾಡಿ. ಅದಕ್ಕೆ ಸಾಸಿವೆ ಸೇರಿಸಿ. ‌ಸಾಸಿವೆ ಸಿಡಿದ ಬಳಿಕ ಉದ್ದಿನಬೇಳೆ, ಕಡಲೆಬೇಳೆ, ಇಂಗು, ಕರಿಬೇವು, ಮುರಿದ ಮೆಣಸಿನಕಾಯಿ ಸೇರಿಸಿ ಒಗ್ಗರಣೆ ಕೊಡಿ.
ಬಳಿಕ ರುಬ್ಬಿ ಇಟ್ಟುಕೊಂಡ ಚಟ್ನಿಗೆ ಒಗ್ಗರಣೆಯನ್ನು ಸೇರಿಸಿ. ರುಚಿಯಾದ ಕೆಸುವಿನ ಚಟ್ನಿ ‌ಸವಿಯಲು‌ ಸಿದ್ಧ.

ಮಾವಿನ ಕಾಯಿ ಚಟ್ನಿ
Saakshatv cooking recipes mango chutney

ಬೇಕಾಗುವ ಪದಾರ್ಥಗಳು

ಸಣ್ಣ ಮಾವಿನ ಕಾಯಿ 1
ತುರಿದ ತೆಂಗಿನಕಾಯಿ 1 ಕಪ್
ಶುಂಠಿ 1 ಇಂಚು
ಬೆಳ್ಳುಳ್ಳಿ 3-4 ಎಸಳು
ಈರುಳ್ಳಿ 1/2
ಹಸಿರು ಮೆಣಸಿನಕಾಯಿ 2-3
ರುಚಿಗೆ ತಕ್ಕಷ್ಟು ಉಪ್ಪು

ಒಗ್ಗರಣೆ
ಒಣ ಕೆಂಪು ಮೆಣಸು – 1
ಸಾಸಿವೆ – 1/4 ಚಮಚ
ಎಣ್ಣೆ – 1 ಚಮಚ
Saakshatv cooking recipes mango chutney
Saakshatv cooking recipes mango chutney

ಮಾಡುವ ವಿಧಾನ:
ಮಾವಿನ ಕಾಯಿಯ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿ. ಅದಕ್ಕೆ ತುರಿದ ತೆಂಗಿನಕಾಯಿ ಶುಂಠಿ ಬೆಳ್ಳುಳ್ಳಿ, ಕತ್ತರಿಸಿದ ಈರುಳ್ಳಿ, ಹಸಿರು ಮೆಣಸಿನಕಾಯಿ ಉಪ್ಪು ಸೇರಿಸಿ. (ಮಾವಿನ ಹುಳಿಗೆ ಅನುಗುಣವಾಗಿ ಮೆಣಸಿನಕಾಯಿಗಳನ್ನು ಬಳಸಿ).
ಅಗತ್ಯವಿರುವಷ್ಟು ನೀರು ಸೇರಿಸಿ, ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿ. ಹಸಿಮೆಣಸಿನಕಾಯಿ ಚಟ್ನಿ ಸಿದ್ಧವಾಗಿದೆ. ಈಗ ಎಣ್ಣೆ ಬಿಸಿ ಮಾಡಿ ಸಾಸಿವೆ ಹಾಕಿ ಕೆಂಪು ‌ಮೆಣಸಿನ ಒಗ್ಗರಣೆ ಕೊಡಿ.
Saakshatv cooking recipes mango chutney

ಈ ಚಟ್ನಿಯನ್ನು ಸಾಮಾನ್ಯವಾಗಿ ಮಾವಿನ ಸಮಯದಲ್ಲಿ ಮಂಗಳೂರಿನ ಮನೆಗಳಲ್ಲಿ ತಯಾರಿಸಲಾಗುತ್ತದೆ ಮತ್ತು ಇದು ಗಂಜಿಯೊಂದಿಗೆ ಸೇವಿಸಲು ಚೆನ್ನಾಗಿರುತ್ತದೆ.

ಹೀರೇಕಾಯಿಯ ಸಿಪ್ಪೆ ಚಟ್ನಿ

ಬೇಕಾಗುವ ಸಾಮಗ್ರಿಗಳು

ಹೀರೆಕಾಯಿ ಸಿಪ್ಪೆ – 1 ಕಪ್
ಈರುಳ್ಳಿ – 1
ಒಣಮೆಣಸು – 4-5
ಕಡ್ಲೆಬೇಳೆ – 1 ಚಮಚ
ಉದ್ದಿನಬೇಳೆ – 1 ಚಮಚ
ಎಳ್ಳು – 2 ಚಮಚ
ಕಡ್ಲೆಬೀಜ – 2 ಚಮಚ
ಹುಣಸೆ ಹಣ್ಣು – ಸ್ವಲ್ಪ
ಬೆಲ್ಲ – 1 ಸಣ್ಣ ತುಂಡು
ಜೀರಿಗೆ – 1/2 ಚಮಚ
ಬೆಳ್ಳುಳ್ಳಿ – 2 ಎಸಳು
ಕರಿಬೇವು – ಸ್ವಲ್ಪ
ಕೊತ್ತಂಬರಿಸೊಪ್ಪು – ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು
ಸಾಸಿವೆ – 1/2 ಚಮಚ
ಇಂಗು – ಚಿಟಿಕೆ
hirekayi peel chutney
ಮಾಡುವ ವಿಧಾನ

ಹೀರೆಕಾಯಿ ಸಿಪ್ಪೆಯನ್ನು ಚೆನ್ನಾಗಿ ತೊಳೆಯಿರಿ. ಬಾಣಲೆಗೆ 1/2 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ ಹೀರೇಕಾಯಿ ಸಿಪ್ಪೆ ಯನ್ನು 3-4 ನಿಮಿಷ ಹುರಿಯಿರಿ. ನಂತರ ಸಣ್ಣಗೆ ಹೆಚ್ಚಿದ ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ನಂತರ ಒಣ ಮೆಣಸು ಸೇರಿಸಿ ಹುರಿಯಿರಿ.ನಂತರ ಅದಕ್ಕೆ ಉದ್ದಿನಬೇಳೆ, ಕಡ್ಲೆಬೇಳೆ, ಎಳ್ಳು, ಕಡಲೆ ಬೀಜ ಸೇರಿಸಿ ಹುರಿಯಿರಿ. ಈಗ ಇದಕ್ಕೆ ಹುಣಸೆ ಹಣ್ಣು ಬೆಲ್ಲ ಜೀರಿಗೆ ಬೆಳ್ಳುಳ್ಳಿ, ಉಪ್ಪು, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು ಸೇರಿಸಿಮಿಕ್ಸಿ ಜಾರಿಗೆ ಹಾಕಿ ಅಗತ್ಯವಿರುವಷ್ಟು ನೀರು ಸೇರಿಸಿ ಚೆನ್ನಾಗಿ ರುಬ್ಬಿ.

 

Tags: #saakshatvcookingfood recipies
ShareTweetSendShare
Join us on:

Related Posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram