ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ವಿವಿಧ ಬಗೆಯ ರುಚಿಕರ ಬೋಂಡಾಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
September 27, 2021
in Cooking, Newsbeat, ಅಡುಗೆ
Saakshatv cooking recipe how to prepare shavige alu bonda
Share on FacebookShare on TwitterShare on WhatsappShare on Telegram

5 ವಿವಿಧ ಬಗೆಯ ರುಚಿಕರ ಬೋಂಡಾಗಳ ರೆಸಿಪಿಗಳು ನಿಮಗಾಗಿ..!

1. ಮಂಗಳೂರು ಬಿಸ್ಕೂಟ್ ಅಂಬಡೆ

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026

ಬೇಕಾಗುವ ಸಾಮಗ್ರಿಗಳು:

1¼ ಕಪ್ ಸ್ವಚ್ಛಗೊಳಿಸಿದ ಉದ್ದಿನ ಬೇಳೆ

ನುಣ್ಣಗೆ ಕತ್ತರಿಸಿದ 2 – 3 ಹಸಿರು ಮೆಣಸಿನಕಾಯಿಗಳು
ಸಣ್ಣದಾಗಿ ಕತ್ತರಿಸಿದ 1 ಇಂಚಿನ ಶುಂಠಿ ತುಂಡು
ಕರಿಬೇವಿನ ಸೊಪ್ಪು ಸುಮಾರು 10 – 12 ಎಲೆಗಳು ಚಿಕ್ಕದಾಗಿ ಕತ್ತರಿಸಿ ಇಟ್ಟು ಕೊಳ್ಳಿ. Mangalore biscuit ambade recipes

1/2 ಟೀಸ್ಪೂನ್ ತಾಜಾ ಕರಿಮೆಣಸು ಹುಡಿ
ರುಚಿಗೆ ತಕ್ಕಷ್ಟು ಉಪ್ಪು
2 ಟೀಸ್ಪೂನ್ ತುರಿದ ಕೊಬ್ಬರಿ
ಹುರಿಯಲು ಸಾಕಷ್ಟು ಎಣ್ಣೆ

Saakshatv cooking recipes biscuit ambade

ಮಾಡುವ ವಿಧಾನ :

ಸ್ವಚ್ಛಗೊಳಿಸಿದ ಉದ್ದಿನ ಬೇಳೆಯನ್ನು ಕನಿಷ್ಠ 2 – 3 ಗಂಟೆಗಳ ಕಾಲ ನೆನೆಸಿ, ನಂತರ ನೀರನ್ನು ಬಸಿಯಿರಿ.

ಬ್ಲೆಂಡರ್ ಅಥವಾ ಗ್ರೈಂಡರ್ನಲ್ಲಿ, ಉದ್ದಿನ ಬೇಳೆಯನ್ನು ಉಪ್ಪಿನೊಂದಿಗೆ ಹೆಚ್ಚು ನೀರು ಸೇರಿಸದೆ ಚೆನ್ನಾಗಿ ರುಬ್ಬಿ.
ನಂತರ ಕತ್ತರಿಸಿದ ಹಸಿ ಮೆಣಸಿನಕಾಯಿ, ಕರಿಬೇವಿನ ಎಲೆಗಳು, ಕರಿಮೆಣಸು ಹುಡಿ ಮತ್ತು ಕೊಬ್ಬರಿ ತುರಿ ಉದ್ದಿನ ಬೇಳೆ ಹಿಟ್ಟಿಗೆ ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿ. ಹಿಟ್ಟನ್ನು 30 ನಿಮಿಷಗಳ ಕಾಲ ಹಾಗೆ ಬಿಡಿ. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ . (ಹಿಟ್ಟಿಗೆ ನೀರು ಹೆಚ್ಚಾದರೆ ಅಕ್ಕಿ ಹುಡಿ ಸೇರಿಸಿಕೊಳ್ಳಬಹುದು) ಈಗ ದೊಡ್ಡ ಲಿಂಬೆ ಗಾತ್ರದ ಉಂಡೆಗಳನ್ನು ಮಾಡಿ.

2. ಮಂಗಳೂರು ಗೋಳಿ ಬಜೆ

ಬೇಕಾಗುವ ಸಾಮಗ್ರಿಗಳು

11/2 ಕಪ್ ಮೈದಾ ಹಿಟ್ಟು
1/4 ಟೀಸ್ಪೂನ್ ಅಡಿಗೆ ಸೋಡಾ
ಚಿಟಕಿ ಇಂಗು
ರುಚಿಗೆ ತಕ್ಕಷ್ಟು ಉಪ್ಪು
1 ಕಪ್ ಮಜ್ಜಿಗೆ
2 ಟೀಸ್ಪೂನ್ ನುಣ್ಣಗೆ ಕತ್ತರಿಸಿದ ಕರಿಬೇವಿನ ಸೊಪ್ಪುಗಳು
ಚಿಕ್ಕದಾಗಿ ಕತ್ತರಿಸಿದ 2 ಹಸಿಮೆಣಸಿನಕಾಯಿ
ಸಣ್ಣಗೆ ಕತ್ತರಿಸಿದ 1 ಇಂಚಿನ ಶುಂಠಿ
2 ಟೀಸ್ಪೂನ್ ಸಣ್ಣದಾಗಿ ಕತ್ತರಿಸಿದ ಕೊಬ್ಬರಿ
ಹುರಿಯಲು ಎಣ್ಣೆ
Saakshatv cooking recipes goli baje

ಮಾಡುವ ವಿಧಾನ 

ಒಂದು ಪಾತ್ರೆಯಲ್ಲಿ ಮೈದಾ, ಅಡಿಗೆ ಸೋಡಾ, ಇಂಗು ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
ಈಗ 1 ಕಪ್ ಮಜ್ಜಿಗೆ ಅಥವಾ ಮೊಸರನ್ನು‌ ಅದಕ್ಕೆ ಸೇರಿಸಿ.
ಹಿಟ್ಟನ್ನು ಚೆನ್ನಾಗಿ ಮಿಶ್ರಣ ಮಾಡಿ.
ಅದಕ್ಕೆ ಸಣ್ಣದಾಗಿ ಕತ್ತರಿಸಿದ ಕರಿಬೇವು ಸೊಪ್ಪು, ಹಸಿ ಮೆಣಸು, ಶುಂಠಿ ಮತ್ತು ಕೊಬ್ಬರಿ ಸೇರಿಸಿ.
ಎಲ್ಲವನ್ನೂ ಚೆನ್ನಾಗಿ ಕಲಸಿ ಮಿಶ್ರಣ ಮಾಡಿ. ಹಿಟ್ಟನ್ನು 3 ಗಂಟೆಗಳ ಕಾಲ ಮುಚ್ಚಿಡಿ.

3 ಗಂಟೆಗಳ ನಂತರ, ಹಿಟ್ಟನ್ನು ಮತ್ತೆ ಕಲಸಿ, ಸಣ್ಣ ಚೆಂಡಿನ ಗಾತ್ರದ ಉಂಡೆಗಳನ್ನು ಮಾಡಿ.
ಬಾಣಲೆಯಲ್ಲಿ ಎಣ್ಣೆ ಬಿಸಿ‌ ಮಾಡಿ, ಹಿಟ್ಟಿನ ಉಂಡೆಗಳನ್ನು ಎಣ್ಣೆಯಲ್ಲಿ ಬಿಡಿ.‌ ಮಧ್ಯಮ ಜ್ವಾಲೆಯಲ್ಲಿ ಎರಡೂ ಬದಿಗಳನ್ನು ಹುರಿಯಿರಿ. ಗೋಳಿ ಬಜೆ ಹೊಂಬಣ್ಣಕ್ಕೆ ತಿರುಗಿದ ಬಳಿಕ ಮತ್ತು ಗರಿಗರಿಯಾದ ನಂತರ ಅದನ್ನು ತೆಗೆಯಿರಿ.‌
ಈಗ ಗೋಳಿ ಬಜೆ ತೆಂಗಿನಕಾಯಿ ಚಟ್ನಿಯೊಂದಿಗೆ ಸವಿಯಲು ಸಿದ್ಧವಾಗಿದೆ.

3. ಬಟಾಟೆ ಬೋಂಡಾ

ಬೇಕಾಗುವ ಸಾಮಗ್ರಿಗಳು

ಸಾಸಿವೆ – 1/2 ಚಮಚ
ಉದ್ದಿನ ಬೇಳೆ -1/2 ಚಮಚ
ಹಸಿಮೆಣಸಿನಕಾಯಿ – 2
ಶುಂಠಿ ತುರಿ – 1 ಚಮಚ
ಕರಿಬೇವಿನ ಸೊಪ್ಪು – ಸ್ವಲ್ಪ
ಬೇಯಿಸಿದ ಬಟಾಣಿ – 1/2 ಕಪ್
ಬೇಯಿಸಿದ ಬಟಾಟೆ – 2
ರುಚಿಗೆ ತಕ್ಕಷ್ಟು ಉಪ್ಪು
ಕೊತ್ತಂಬರಿ ಸೊಪ್ಪು ಸ್ವಲ್ಪ
ಹುರಿಯಲು ಎಣ್ಣೆ

ಕಡ್ಲೆಹಿಟ್ಟು – 1 ಕಪ್
ಅಕ್ಕಿ ಹಿಟ್ಟು – 1 ಚಮಚ
ಕೆಂಪು ಮೆಣಸಿನ ಪುಡಿ – 1/2 ಚಮಚ
ಅಜ್ವೈನ್ – 1/4 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಬಿಸಿ ಎಣ್ಣೆ – 1 ಚಮಚ
ಅಗತ್ಯವಿರುವಷ್ಟು ನೀರು
Saakshatv cooking recipe

ಮಾಡುವ ವಿಧಾನ

ಮೊದಲಿಗೆ ಬಟಾಟೆಗಳನ್ನು ಬೇಯಿಸಿ ಚೆನ್ನಾಗಿ ಮ್ಯಾಶ್ ಮಾಡಿ.‌ ನಂತರ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಅದಕ್ಕೆ ಸಾಸಿವೆ ಸೇರಿಸಿ. ಸಾಸಿವೆ ಸಿಡಿದ ನಂತರ ಉದ್ದಿನ ಬೇಳೆ, ಹಸಿ ಮೆಣಸಿನಕಾಯಿ, ಶುಂಠಿ, ಕರಿಬೇವಿನ ಸೊಪ್ಪು ಸೇರಿಸಿ ಹುರಿಯಿರಿ. ಬಳಿಕ ಅದಕ್ಕೆ ಬಟಾಣಿ ಮತ್ತು ಮ್ಯಾಶ್ ಮಾಡಿದ ಬಟಾಟೆಗಳನ್ನು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ಈ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕತ್ತರಿಸಿದ ಕೊತ್ತಂಬರಿ ಸೊಪ್ಪುಗಳನ್ನು ಉದುರಿಸಿ. ನಂತರ ಈ ಮಿಶ್ರಣದಿಂದ ಸಣ್ಣ ಸಣ್ಣ ಉಂಡೆಗಳನ್ನು ತಯಾರಿಸಿ ಇಟ್ಟುಕೊಳ್ಳಿ.

ಕಡ್ಲೆಹಿಟ್ಟು, ಅಕ್ಕಿ ಹಿಟ್ಟು, ಕೆಂಪು ಮೆಣಸಿನ ಪುಡಿ, ಅಜ್ವೈನ್, ಉಪ್ಪು, ಬಿಸಿ ಎಣ್ಣೆ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ನಂತರ ಅಗತ್ಯವಿರುವಷ್ಟು ನೀರು ಸೇರಿಸಿ ಹಿಟ್ಟನ್ನು ತಯಾರಿಸಿ.
ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ತಯಾರಿಸಿ ಇಟ್ಟುಕೊಂಡ ಅಲೂಪಲ್ಯದ ಉಂಡೆಗಳನ್ನು ಕಡ್ಲೆಹಿಟ್ಟಿನಲ್ಲಿ ಮುಳುಗಿಸಿ ಎಣ್ಣೆಯಲ್ಲಿ ಬಿಡಿ. ಹೊಂಬಣ್ಣಕ್ಕೆ ತಿರುಗುವವರೆಗೆ ಕಾಯಿಸಿ ತೆಗೆಯಿರಿ. ಈಗ ರುಚಿಯಾದ ಬಿಸಿ ಬಿಸಿ ಅಲೂ ಬೋಂಡ ಸವಿಯಲು ಸಿದ್ಧವಾಗಿದೆ.

4. ರವಾ ಗೋಳಿ ಬಜೆ

ಬೇಕಾಗುವ ಸಾಮಗ್ರಿಗಳು :

ಚಿರೋಟಿ ರವೆ – 1ಕಪ್
ಸೋಡಾ – 1/4 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಮೊಸರು‌ 1/2 ಕಪ್
ಜೀರಿಗೆ – 1 ಚಮಚ
ಹೆಚ್ಚಿದ ಹಸಿಮೆಣಸಿನಕಾಯಿ – 1
ತುರಿದ ಶುಂಠಿ – 1ಇಂಚು
ಕರಿಬೇವು, ಕೊತ್ತಂಬರಿ ಸೊಪ್ಪು – ಸ್ವಲ್ಪ
ಸಕ್ಕರೆ – 1 ಚಮಚ
Saakshatv cooking recipes goli baje

ಮಾಡುವ ‌ವಿಧಾನ

ಮೊದಲಿಗೆ ಚಿರೋಟಿ ರವೆಯನ್ನು ಮಿಕ್ಸಿಯಲ್ಲಿ ಪುಡಿ ಮಾಡಿಕೊಂಡು ಒಂದು ಅಗಲವಾದ ಪಾತ್ರೆಗೆ ಹಾಕಿ. ನಂತರ ಅದಕ್ಕೆ ಮೊಸರು ಸೇರಿಸಿ ಚೆನ್ನಾಗಿ ಕಲಸಿ. ಬಳಿಕ ಇದನ್ನು ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿ. ಈ ಮಿಶ್ರಣಕ್ಕೆ ಜೀರಿಗೆ, ಹಸಿಮೆಣಸಿನಕಾಯಿ, ಶುಂಠಿ, ಕರಿಬೇವು, ಕೊತ್ತಂಬರಿ ಸೊಪ್ಪು, ಸಕ್ಕರೆ ‌ಸೇರಿಸಿ ಚೆನ್ನಾಗಿ ಕಲಸಿ. 2 ಗಂಟೆಗಳ ಕಾಲ ಹಾಗೆಯೇ ಬಿಡಿ. ‌
ನಂತರ ಸೋಡಾ ಸೇರಿಸಿ ಬೆರೆಸಿ. ನಂತರ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. 3 ಗಂಟೆಗಳ ನಂತರ, ಹಿಟ್ಟನ್ನು ಮತ್ತೆ ಕಲಸಿ, ಸಣ್ಣ ಚೆಂಡಿನ ಗಾತ್ರದ ಉಂಡೆಗಳನ್ನು ಮಾಡಿ.
ಬಾಣಲೆಯಲ್ಲಿ ಎಣ್ಣೆ ಬಿಸಿ‌ ಮಾಡಿ, ಹಿಟ್ಟಿನ ಉಂಡೆಗಳನ್ನು ಎಣ್ಣೆಯಲ್ಲಿ ಬಿಡಿ.‌ ಮಧ್ಯಮ ಜ್ವಾಲೆಯಲ್ಲಿ ಎರಡೂ ಬದಿಗಳನ್ನು ಹುರಿಯಿರಿ. ಗೋಳಿ ಬಜೆ ಹೊಂಬಣ್ಣಕ್ಕೆ ತಿರುಗಿದ ಬಳಿಕ ಮತ್ತು ಗರಿಗರಿಯಾದ ನಂತರ ಅದನ್ನು ತೆಗೆಯಿರಿ.

5. ಉದ್ದಿನ ಬೋಂಡಾ

ಬೇಕಾಗುವ ಸಾಮಗ್ರಿಗಳು

ಉದ್ದಿನಬೇಳೆ – 1 ಕಪ್
ಹಸಿಮೆಣಸಿನಕಾಯಿ – 2
ಕರಿಬೇವು – ಸ್ವಲ್ಪ
ಕೊತಂಬರಿ ಸೊಪ್ಪು – ಸ್ವಲ್ಪ
ಚಿಕ್ಕದಾಗಿ ಕತ್ತರಿಸಿದ ಒಣ ತೆಂಗಿನಕಾಯಿ/ಕೊಬ್ಬರಿ 2 ಚಮಚ
ಅಕ್ಕಿ ಹಿಟ್ಟು – 1 ಚಮಚ
ಅಡುಗೆ ಸೋಡಾ – ಚಿಟಕಿಯಷ್ಟು
ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ

ಮೊದಲಿಗೆ ಉದ್ದಿನಬೇಳೆಯನ್ನು ತೊಳೆದು 1-2 ಗಂಟೆಗಳ ಕಾಲ ನೆನೆಸಿಡಿ. ನಂತರ ನೀರನ್ನು ಸೋಸಿ ಉದ್ದಿನಬೇಳೆಯನ್ನು ಮಿಕ್ಸಿ ಜಾರ್ ಅಥವಾ ಗ್ರೈಂಡರ್ಗೆ ಹಾಕಿ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ. ಬಳಿಕ ಇದನ್ನು ಪಾತ್ರೆಗೆ ವರ್ಗಾಯಿಸಿ. ಅದಕ್ಕೆ ಕತ್ತರಿಸಿದ ಹಸಿಮೆಣಸಿನಕಾಯಿ, ಕರಿಬೇವು, ಕೊತಂಬರಿ ಸೊಪ್ಪು, ಒಣ ತೆಂಗಿನಕಾಯಿ/ಕೊಬ್ಬರಿ, ಅಕ್ಕಿ ಹಿಟ್ಟು, ಅಡುಗೆ ಸೋಡಾ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.
ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ‌ಮಾಡಿ, ಹಿಟ್ಟನ್ನು ಬೋಂಡಾಗಳಂತೆ ಬಿಡಿ. ಮಂದ ಉರಿಯಲ್ಲಿ ಹೊಂಬಣ್ಣಕ್ಕೆ ತಿರುಗುವವರೆಗೆ ಚೆನ್ನಾಗಿ ಕರಿದು ತೆಗೆಯಿರಿ. ಈಗ ರುಚಿಯಾದ ಉದ್ದಿನ ಬೋಂಡಾ ಸವಿಯಲು ಸಿದ್ಧವಾಗಿದೆ

 

Tags: #saakshatvcookingFood
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram